ಕ್ರೀಡೆ

U19 World Cup 2024: ಪರಿಷ್ಕೃತ ಹೊಸ​ ವೇಳಾಪಟ್ಟಿ ಪ್ರಕಟ

ಐಸಿಸಿ (ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್) ಅಂಡರ್-19 ಪುರುಷರ ಏಕದಿನ ಕ್ರಿಕೆಟ್ ವಿಶ್ವಕಪ್​ನ ಪರಿಷ್ಕೃತ ವೇಳಾಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ.

ಜನವರಿ 19 ರಿಂದ ಫ್ರೆಬ್ರವರಿ 11 ರವರೆಗೆ ಸೌಥ್‌ ಆಫ್ರಿಕಾದಲ್ಲಿ ಈ ಟೂರ್ನಿ ನಡೆಯಲಿದೆ. ಈ ಟೂರ್ನಿ ಆಯೋಜಕತ್ವವನ್ನು ಈ ಹಿಂದೆ ಶ್ರೀಲಂಕಾ ಪಡೆದಿತ್ತು. ಆದರೆ, ನವೆಂಬರ್‌ ನಲ್ಲಿ ಐಸಿಸಿ ಶ್ರೀಲಂಕಾ ಬೋರ್ಡ್‌ನ್ನು ಅಮಾನತುಗೊಳಿಸಿದ ಹಿನ್ನಲೆ 15ನೇ ಆವೃತ್ತಿಯ ಅಂಡರ್-19 ವಿಶ್ವಕಪ್‌ನ್ನು ದಕ್ಷಿಣ ಆಫ್ರಿಕಾಗೆ ಸ್ಥಳಾಂತರಿಸಲಾಗಿದೆ.

ಆತಿಥೇಯ ಸೌತ್ ಆಫ್ರಿಕಾ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಉದ್ಘಾಟನಾ ಪಂದ್ಯವನ್ನು ಆಡಲಿದೆ. ಹಾಲಿ ಚಾಂಪಿಯನ್ ಟೀಂ ಇಂಡಿಯಾ ಜನವರಿ 20 ರಂದು ಬಾಂಗ್ಲಾದೇಶ ವಿರುದ್ಧ ಆಡುವ ಮೂಲಕ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ.

ಒಟ್ಟು ಐದು ಸ್ಟೇಡಿಯಂಗಳಲ್ಲಿ ಟೂರ್ನಿ ಆಯೋಜಿಸಲಾಗಿದೆ. ಬ್ಲೋಮ್‌ಫಾಂಟೈನ್‌ನ ಮಂಗಾಂಗ್ ಓವಲ್ ಮೈದಾನ, ಪೂರ್ವ ಲಂಡನ್‌ನ ಬಫಲೋ ಪಾರ್ಕ್ ಸ್ಟೇಡಿಯಂ, ಕಿಂಬರ್ಲಿಯಲ್ಲಿ ಕಿಂಬರ್ಲಿ ಓವಲ್ ಮೈದಾನ, ಪಾಚೆಫ್‌ಸ್ಟ್ರೂಮ್‌ನ ಜೆಬಿ ಮಾರ್ಕ್ಸ್ ಓವಲ್ ಮತ್ತು ಬೆನೋನಿಯ ವಿಲೋಮೂರ್ ಪಾರ್ಕ್ ಸ್ಟೇಡಿಯಂಗಳಲ್ಲಿ ಒಟ್ಟು 41 ಪಂದ್ಯಗಳು ನಡೆಯಲಿದೆ.

16 ತಂಡಗಳು 4 ಗ್ರೂಪ್: ಅಂಡರ್​-19 ವಿಶ್ವಕಪ್​ನಲ್ಲಿ ಒಟ್ಟು 16 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ. ಇಲ್ಲಿ ಪ್ರತಿ ಗ್ರೂಪ್​ಗಳಲ್ಲಿ ಮೊದಲೆರಡು ಅಗ್ರಸ್ಥಾನಗಳನ್ನು ಅಲಂಕರಿಸುವ ತಂಡಗಳು ಮುಂದಿನ ಹಂತಕ್ಕೇರಲಿದೆ.

ಅಂಡರ್-19 ವಿಶ್ವಕಪ್​ ಗ್ರೂಪ್​ಗಳು:
ಗ್ರೂಪ್​-A : ಭಾರತ, ಬಾಂಗ್ಲಾದೇಶ್, ಯುಎಸ್​ಎ, ಐರ್ಲೆಂಡ್

ಗ್ರೂಪ್​-B : ಇಂಗ್ಲೆಂಡ್, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್, ಸ್ಕಾಟ್ಲೆಂಡ್

ಗ್ರೂಪ್​-C : ಆಸ್ಟ್ರೇಲಿಯಾ, ಶ್ರೀಲಂಕಾ, ಝಿಂಬಾಬ್ವೆ, ನಮೀಬಿಯಾ

ಗ್ರೂಪ್​-D : ಅಫ್ಘಾನಿಸ್ತಾನ್, ಪಾಕಿಸ್ತಾನ್, ನ್ಯೂಝಿಲೆಂಡ್, ನೇಪಾಳ

ಭಾರತ ತಂಡದ ಲೀಗ್​ ಹಂತದ ವೇಳಾಪಟ್ಟಿ:
ಜನವರಿ 20- ಭಾರತ vs ಬಾಂಗ್ಲಾದೇಶ್.
ಜನವರಿ 22- ಭಾರತ vs ಐರ್ಲೆಂಡ್.
ಜನವರಿ 28- ಭಾರತ vs ಯುಎಸ್​ಎ

ಅಂಡರ್-19 ವಿಶ್ವಕಪ್​ ವೇಳಾಪಟ್ಟಿ: 

andolanait

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

5 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

8 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

9 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

9 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

9 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

9 hours ago