ಕ್ರೀಡೆ

U19 World Cup 2024: ಪರಿಷ್ಕೃತ ಹೊಸ​ ವೇಳಾಪಟ್ಟಿ ಪ್ರಕಟ

ಐಸಿಸಿ (ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್) ಅಂಡರ್-19 ಪುರುಷರ ಏಕದಿನ ಕ್ರಿಕೆಟ್ ವಿಶ್ವಕಪ್​ನ ಪರಿಷ್ಕೃತ ವೇಳಾಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ.

ಜನವರಿ 19 ರಿಂದ ಫ್ರೆಬ್ರವರಿ 11 ರವರೆಗೆ ಸೌಥ್‌ ಆಫ್ರಿಕಾದಲ್ಲಿ ಈ ಟೂರ್ನಿ ನಡೆಯಲಿದೆ. ಈ ಟೂರ್ನಿ ಆಯೋಜಕತ್ವವನ್ನು ಈ ಹಿಂದೆ ಶ್ರೀಲಂಕಾ ಪಡೆದಿತ್ತು. ಆದರೆ, ನವೆಂಬರ್‌ ನಲ್ಲಿ ಐಸಿಸಿ ಶ್ರೀಲಂಕಾ ಬೋರ್ಡ್‌ನ್ನು ಅಮಾನತುಗೊಳಿಸಿದ ಹಿನ್ನಲೆ 15ನೇ ಆವೃತ್ತಿಯ ಅಂಡರ್-19 ವಿಶ್ವಕಪ್‌ನ್ನು ದಕ್ಷಿಣ ಆಫ್ರಿಕಾಗೆ ಸ್ಥಳಾಂತರಿಸಲಾಗಿದೆ.

ಆತಿಥೇಯ ಸೌತ್ ಆಫ್ರಿಕಾ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಉದ್ಘಾಟನಾ ಪಂದ್ಯವನ್ನು ಆಡಲಿದೆ. ಹಾಲಿ ಚಾಂಪಿಯನ್ ಟೀಂ ಇಂಡಿಯಾ ಜನವರಿ 20 ರಂದು ಬಾಂಗ್ಲಾದೇಶ ವಿರುದ್ಧ ಆಡುವ ಮೂಲಕ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ.

ಒಟ್ಟು ಐದು ಸ್ಟೇಡಿಯಂಗಳಲ್ಲಿ ಟೂರ್ನಿ ಆಯೋಜಿಸಲಾಗಿದೆ. ಬ್ಲೋಮ್‌ಫಾಂಟೈನ್‌ನ ಮಂಗಾಂಗ್ ಓವಲ್ ಮೈದಾನ, ಪೂರ್ವ ಲಂಡನ್‌ನ ಬಫಲೋ ಪಾರ್ಕ್ ಸ್ಟೇಡಿಯಂ, ಕಿಂಬರ್ಲಿಯಲ್ಲಿ ಕಿಂಬರ್ಲಿ ಓವಲ್ ಮೈದಾನ, ಪಾಚೆಫ್‌ಸ್ಟ್ರೂಮ್‌ನ ಜೆಬಿ ಮಾರ್ಕ್ಸ್ ಓವಲ್ ಮತ್ತು ಬೆನೋನಿಯ ವಿಲೋಮೂರ್ ಪಾರ್ಕ್ ಸ್ಟೇಡಿಯಂಗಳಲ್ಲಿ ಒಟ್ಟು 41 ಪಂದ್ಯಗಳು ನಡೆಯಲಿದೆ.

16 ತಂಡಗಳು 4 ಗ್ರೂಪ್: ಅಂಡರ್​-19 ವಿಶ್ವಕಪ್​ನಲ್ಲಿ ಒಟ್ಟು 16 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ. ಇಲ್ಲಿ ಪ್ರತಿ ಗ್ರೂಪ್​ಗಳಲ್ಲಿ ಮೊದಲೆರಡು ಅಗ್ರಸ್ಥಾನಗಳನ್ನು ಅಲಂಕರಿಸುವ ತಂಡಗಳು ಮುಂದಿನ ಹಂತಕ್ಕೇರಲಿದೆ.

ಅಂಡರ್-19 ವಿಶ್ವಕಪ್​ ಗ್ರೂಪ್​ಗಳು:
ಗ್ರೂಪ್​-A : ಭಾರತ, ಬಾಂಗ್ಲಾದೇಶ್, ಯುಎಸ್​ಎ, ಐರ್ಲೆಂಡ್

ಗ್ರೂಪ್​-B : ಇಂಗ್ಲೆಂಡ್, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್, ಸ್ಕಾಟ್ಲೆಂಡ್

ಗ್ರೂಪ್​-C : ಆಸ್ಟ್ರೇಲಿಯಾ, ಶ್ರೀಲಂಕಾ, ಝಿಂಬಾಬ್ವೆ, ನಮೀಬಿಯಾ

ಗ್ರೂಪ್​-D : ಅಫ್ಘಾನಿಸ್ತಾನ್, ಪಾಕಿಸ್ತಾನ್, ನ್ಯೂಝಿಲೆಂಡ್, ನೇಪಾಳ

ಭಾರತ ತಂಡದ ಲೀಗ್​ ಹಂತದ ವೇಳಾಪಟ್ಟಿ:
ಜನವರಿ 20- ಭಾರತ vs ಬಾಂಗ್ಲಾದೇಶ್.
ಜನವರಿ 22- ಭಾರತ vs ಐರ್ಲೆಂಡ್.
ಜನವರಿ 28- ಭಾರತ vs ಯುಎಸ್​ಎ

ಅಂಡರ್-19 ವಿಶ್ವಕಪ್​ ವೇಳಾಪಟ್ಟಿ: 

andolanait

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

10 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

11 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

12 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

12 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

16 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

17 hours ago