ಕ್ರೀಡೆ

U19 worldcup final: ಫೈನಲ್ ಪಂದ್ಯದ ನೇರ ಪ್ರಸಾರ ಮಾಹಿತಿ!

ಬೆನೋನಿ: ಐಸಿಸಿ ಅಂಡರ್ 19 ವಿಶ್ವಕಪ್ 2024 ರ ಫೈನಲ್‌ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾವನ್ನು ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ಎದುರಿಸಲಿದೆ. ಎರಡೂ ತಂಡಗಳು ಕ್ರಮವಾಗಿ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ವಿರುದ್ಧದ ಸೆಮಿಫೈನಲ್‌ನಲ್ಲಿ ರೋಚಕ ಗೆಲುವು ಸಾಧಿಸಿ ಫೈನಲ್‌ಗೆ ಲಗ್ಗೆಯಿಟ್ಟಿವೆ.

ದಕ್ಷಿಣ ಆಫ್ರಿಕಾ ವಿರುದ್ಧ ನಾಯಕ ಉದಯ್ ಸಹರನ್ (81) ಮತ್ತು ಸಚಿನ್ ದಾಸ್ (96) ಅಮೋಘ ಪ್ರದರ್ಶನ ತೋರುವ ಮೂಲಕ ಎರಡು ವಿಕೆಟ್‌ಗಳ ಅಂತರದಿಂದ ಟೀಂ ಇಂಡಿಯಾ ಜಯಶಾಲಿಯಾಯಿತು.

ಮತ್ತೊಂದೆಡೆ, ಪಾಕಿಸ್ತಾನದ ಅಲಿ ರಜಾ ಮಾರಕ ಬೌಲಿಂಗ್‌ ದಾಳಿಯನ್ನು ದಿಟ್ಟವಾಗಿ ಎದುರಿಸಿದ ಆಸೀಸ್‌ ಒಂದು ವಿಕೆಟ್ ಉಳಿದಿರುವಂತೆ 179 ರನ್ ಬಾರಿಸಿ ಗೆಲುವಿನ ನಗೆ ಬೀರಿತು.

ಭಾನುವಾರು (ಫೆ.11) ನಡೆಯುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್‌ ಪಂದ್ಯದಲ್ಲಿ ಗೆದ್ದ ತಂಡ ಪ್ರಶಸ್ತಿ ಜಯಿಸಲಿದೆ.

ಭಾರತ vs ಆಸ್ಟ್ರೇಲಿಯಾ 19 ವರ್ಷದೊಳಗಿನವರ ವಿಶ್ವಕಪ್ ಫೈನಲ್ ಯಾವಾಗ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ U19 ಕ್ರಿಕೆಟ್ ವಿಶ್ವಕಪ್ ಫೈನಲ್ ಭಾನುವಾರ (11 ಫೆಬ್ರವರಿ 2024) ಮಧ್ಯಾಹ್ನ 1:30 ಗಂಟೆಗೆ ನಡೆಯಲಿದೆ.

ಭಾರತ vs ಆಸ್ಟ್ರೇಲಿಯಾ 19 ವರ್ಷದೊಳಗಿನವರ ವಿಶ್ವಕಪ್ ಫೈನಲ್ ಎಲ್ಲಿ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯ ಬೆನೋನಿಯ ಸಹಾರಾ ಪಾರ್ಕ್ ವಿಲ್ಲೊಮೂರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ಆಡಲಿವೆ.

ಭಾರತ vs ಆಸ್ಟ್ರೇಲಿಯಾ ಅಂಡರ್ 19 ವಿಶ್ವಕಪ್ ಫೈನಲ್ ಅನ್ನು ಎಲ್ಲಿ ವೀಕ್ಷಿಸಬೇಕು?
U19 ವಿಶ್ವಕಪ್ ಫೈನಲ್ ಅನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್‌ ಸಹ ಲಭ್ಯವಿರುತ್ತದೆ.

andolanait

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

6 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

6 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

6 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

6 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

6 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

7 hours ago