ಕ್ರೀಡೆ

U19 worldcup: ಟೀಂ ಇಂಡಿಯಾದ ಈವರೆಗಿನ ಸಾಧನೆಯ ಬಗ್ಗೆ ನಿಮಗೆಷ್ಟು ಗೊತ್ತು?

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ.

ಪ್ರಶಸ್ತಿಗಾಗಿ ಕಾದಾಡುವ ಈ ಪಂದ್ಯ ಇಂದು (ಫೆ.11) ಮದ್ಯಾಹ್ನ 1.30ಕ್ಕೆ ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ನಡೆಯಲಿದೆ.

ಈ ಲೀಗ್​ನಲ್ಲಿ ಭಾರತ ಇದುವರೆಗೆ ಆಡಿದ ಎಲ್ಲ ಆರು ಪಂದ್ಯಗಳನ್ನು ಗೆದ್ದು ಫೈನಲ್‌ಗೆ ಅರ್ಹತೆ ಪಡೆದಿದೆ. ಇದರೊಂದಿಗೆ ದಾಖಲೆಯ ಆರನೇ ಬಾರಿಗೆ ವಿಶ್ವಕಪ್ ಗೆಲ್ಲುವ ಆಯದೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುತ್ತಿದೆ.

ಭಾರತ ಈ ಬಾರಿಯ ಫೈನಲ್‌ ಸೇರಿದಂತೆ ಒಟ್ಟು 9 ಬಾರಿ ವಿಶ್ವಕಪ್ ಫೈನಲ್‌ಗೆ ಲಗ್ಗೆಯಿಟ್ಟಿದೆ. ಇದರಲ್ಲಿ ಐದು ಬಾರಿ ಚಾಂಪಿನ್ ಪಟ್ಟವನ್ನು ಅಲಂಕರಿಸಿರುವ ಯುವ ಪಡೆ ಮೂರು ಬಾರಿ ರನ್ನರ್ ಅಪ್​ಗೆ ತೃಪ್ತಿ ಪಟ್ಟುಕೊಂಡಿದೆ. ಈ 9 ವಿಶ್ವಕಪ್ ಫೈನಲ್‌ನಲ್ಲಿ ಆರನೆ ಪ್ರಶಸ್ತಿಗೆ ಕಣ್ಣಿಟ್ಟಿದೆ.

ಅಂಡರ್‌ 19 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಸಾಧನೆ:

ಈವರೆಗೆ ಆಡಿರುವ ವಿಶ್ವಕಪ್‌ ಟೂರ್ನಿಗಳಲ್ಲಿ ಟೀಂ ಇಂಡಿಯಾ ಒಂಭತ್ತು ಬಾರಿ ಫೈನಲ್‌ಗೆ ಪ್ರವೇಶ ಪಡೆದಿದ್ದು, ಅದರಲ್ಲಿ 5 ಬಾರಿ ಪ್ರಶಸ್ತಿ ಬಾಚಿಕೊಳ್ಳುವಲ್ಲಿ ಯಶಸ್ವಿಯಾದರೇ, ಮೂರು ಬಾರಿ ರನ್ನರ್‌ ಅಪ್‌ ಆಗಿ ಹೊರಹೊಮ್ಮಿದೆ. ಇಂದು ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೇ ಆರನೇ ಬಾರಿ ಪ್ರಶಸ್ತಿ ಗೆದ್ದ ಹೆಗ್ಗಳಿಕೆಗೆ ಪಾತ್ರವಾಗಲಿದೆ.

2000: ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ 2000 ಅಂಡರ್-19 ವಿಶ್ವಕಪ್‌ನ ಫೈನಲ್ ಪಂದ್ಯ ನಡೆದಿತ್ತು. ಇದರಲ್ಲಿ ಮೊಹಮ್ಮದ್ ಕೈಫ್ ನೇತೃತ್ವದ ಭಾರತ ತಂಡ, ಮಲಿಂತ ಗಜನಾಯಕ ನಾಯಕತ್ವದ ಶ್ರೀಲಂಕಾವನ್ನು ಆರು ವಿಕೆಟ್‌ಗಳಿಂದ ಸೋಲಿಸಿ ಮೊದಲ ಬಾರಿಗೆ ವಿಶ್ವಕಪ್ ಎತ್ತಿ ಹಿಡಿದಿತ್ತು. ಲಂಕಾ ನೀಡಿದ್ದ 180 ರನ್‌ಗಳ ಗುರಿ ಬೆನ್ನತ್ತಿದ ಭಾರತ ತಂಡ 40.4 ಓವರ್‌ಗಳಲ್ಲಿ ಕೆವಲ ನಾಲ್ಕು ವಿಕೆಟ್‌ ಕಳೆದುಕೊಂಡು ಗೆದ್ದು ಬೀಗಿತ್ತು.

2006: ಬರೋಬ್ಬರಿ 6 ವರ್ಷಗಳ ನಂತರ ಮತ್ತೊಮ್ಮೆ ವಿಶ್ವಕಪ್‌ ಫೈನಲ್‌ ಪ್ರವೇಶಿಸಿದ್ದ ಭಾರತ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 38 ರನ್‌ಗಳಿಂದ ಆಘಾತಕಾರಿ ಸೋಲನ್ನು ಅನುಭವಿಸಿತು. ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ರವಿಕಾಂತ್ ಶುಕ್ಲಾ ನೇತೃತ್ವದ ಭಾರತ ತಂಡ ಸರ್ಫರಾಜ್ ಅಹ್ಮದ್ ಸಾರಥ್ಯದ ಪಾಕಿಸ್ತಾನವನ್ನು 109 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಯಿತು ಆದರೆ 110 ರನ್ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾಗಿ, ಸೋಲನುಭವಿಸಿತು.

2008: ಪುಚೋಂಗ್‌ನ ಕಿನ್ರಾರಾ ಅಕಾಡೆಮಿ ಓವಲ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ, ವೇಯ್ನ್ ಪಾರ್ನೆಲ್ ನಾಯಕತ್ವದ ದಕ್ಷಿಣ ಆಫ್ರಿಕಾವನ್ನು 12 ರನ್‌ಗಳಿಂದ (D/L ವಿಧಾನ) ಸೋಲಿಸಿ, ಎರಡನೇ ಬಾರಿಗೆ ವಿಶ್ವಕಪ್ ಎತ್ತಿಹಿಡಿದಿತ್ತು.

2012: ಆಗಸ್ಟ್ 26 ರಂದು ಟೌನ್ಸ್‌ವಿಲ್ಲೆಯ ಟೋನಿ ಐರ್ಲೆಂಡ್ ಕ್ರೀಡಾಂಗಣದಲ್ಲಿ ನಡೆದ ಈ ಫೈನಲ್ ಪಂದ್ಯದಲ್ಲಿ ಉನ್ಮುಕ್ತ್ ಚಾಂದ್ ನಾಯಕತ್ವದ ಭಾರತ ತಂಡ, ನಾಯಕನ ಅಜೇಯ ಶತಕದ ಆಸರೆಯಿಂದ ಆಸ್ಟ್ರೇಲಿಯಾ ವಿರುದ್ಧ ನಾಲ್ಕು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ವಿಶ್ವಕಪ್ ಎತ್ತಿ ಹಿಡಿದಿತ್ತು.

2016: ಇಶಾನ್ ಕಿಶನ್ ನೇತೃತ್ವದ ಭಾರತ ತಂಡ, ಶಿಮ್ರಾನ್ ಹೆಟ್ಮೆಯರ್ ನಾಯಕತ್ವದ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಐದು ವಿಕೆಟ್‌ಗಳಿಂದ ಸೋಲನುಭವಿಸಿ ಪ್ರಶಸ್ತಿಯಿಂದ ವಂಚಿತವಾಯಿತು. ಢಾಕಾದ ಶೇರ್-ಎ-ಬಾಂಗ್ಲಾ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಫೈನಲ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 145 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ವಿಂಡೀಸ್ ಮೊದಲ ಬಾರಿಗೆ ಚಾಂಪಿಯನ್ ಆಯಿತು.

2018: 2018 ರ ವಿಶ್ವಕಪ್‌ ಫೈನಲ್​ನಲ್ಲಿ ಮತ್ತೊಮ್ಮೆ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದವು . ಮೌಂಟ್ ಮೌಂಗನುಯಿಯಲ್ಲಿರುವ ಬೇ ಓವಲ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಪೃಥ್ವಿ ಶಾ ನೇತೃತ್ವದ ಟೀಂ ಇಂಡಿಯಾ, ಜೇಸನ್ ಸಂಘ ನಾಯಕತ್ವದ ಆಸ್ಟ್ರೇಲಿಯವನ್ನು 8 ವಿಕೆಟ್‌ಗಳಿಂದ ಸೋಲಿಸಿ ಪ್ರಶಸ್ತಿ ಜಯಿಸಿತ್ತು.

2020: ಪೊಚೆಫ್‌ಸ್ಟ್ರೂಮ್‌ನ ಸೆನ್ವೆಸ್ ಪಾರ್ಕ್‌ನಲ್ಲಿ ನಡೆದ ಈ ವಿಶ್ವಕಪ್‌ನ ಫೈನಲ್‌ನಲ್ಲಿ ಬಾಂಗ್ಲಾದೇಶ, ಭಾರತವನ್ನು ಮೂರು ವಿಕೆಟ್‌ಗಳಿಂದ ಸೋಲಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 47.2 ಓವರ್‌ಗಳಲ್ಲಿ 177 ರನ್‌ಗಳಿಗೆ ಆಲೌಟ್ ಆಯಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ಏಳು ವಿಕೆಟ್‌ ಕಳೆದುಕೊಂಡು ಗುರಿ ಬೆನ್ನಟ್ಟಿತು.

2022: ಆಂಟಿಗುವಾ ಮತ್ತು ಬಾರ್ಬುಡಾದ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್‌ ಫೈನಲ್‌ನಲ್ಲಿ ಯಶ್ ಧುಲ್ ನೇತೃತ್ವದ ಭಾರತ ತಂಡ, ಇಂಗ್ಲೆಂಡ್ ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ ಇತಿಹಾಸದಲ್ಲಿ ಐದನೇ ಬಾರಿಗೆ ಚಾಂಪಿಯನ್ ಆಯಿತು.

ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ತಂಡಗಳು ಈವರೆಗೆ ಫೈನಲ್‌ನಲ್ಲಿ ಎರಡು ಬಾರಿ ಮುಖಾಮುಖಿಯಾಗಿದ್ದು, ಎರಡು ಬಾರಿಯೂ ಟೀಂ ಇಂಡಿಯಾ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಇದೀಗ ಮೂರನೇ ಬಾರಿಗೆ ಪ್ರಶಸ್ತಿ ಸುತ್ತಿನಲ್ಲಿ ಆಸೀಸ್‌ ತಂಡವನ್ನು ಎದುರಿಸಲಿರುವ ಯುವ ಭಾರತ ತಂಡ, ತನ್ನ ಅಜೇಯ ಓಟವನ್ನು ಮುಂದುವರೆಸಲಿದೆಯೇ ಕಾದು ನೋಡಬೇಕಿದೆ.

andolanait

Recent Posts

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…

9 mins ago

ತೊಗರಿ – ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ ; ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ‌ ಭಾರತದ ರಾಷ್ಟ್ರೀಯ ಕೃಷಿ‌ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…

35 mins ago

ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…

1 hour ago

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

2 hours ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

3 hours ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

3 hours ago