ಕ್ರೀಡೆ

2024ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದ ಉಗಾಂಡ

ನವದೆಹಲಿ : ಆಫ್ರಿಕಾ ಪ್ರಾಂತ್ಯದ ಕೊನೆಯ ಸುತ್ತಿನ ಅರ್ಹತಾ ಪಂದ್ಯಗಳಲ್ಲಿ ರುವಾಂಡ ತಂಡವನ್ನು ಸೋಲಿಸಿ 2024ರ ಪುರುಷರ ಟಿ-20 ವಿಶ್ವಕಪ್ ಕ್ರಿಕೆಟ್ ಗೆ ಅರ್ಹತೆ ಪಡೆಯುವ ಮೂಲಕ ಉಗಾಂಡ ತಂಡವು ಇತಿಹಾಸ ನಿರ್ಮಿಸಿದೆ.

ಐಸಿಸಿ ವಿಶ್ವಕಪ್‌ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಉಗಾಂಡ ತಂಡ ಪಾಲ್ಗೊಳ್ಳಲಿದೆ. ಆ ಮೂಲಕ ನಮೀಬಿಯಾದೊಂದಿಗೆ ಟಿ-20 ವಿಶ್ವಕಪ್ ನಲ್ಲಿ ಆಡುವ ಅರ್ಹತೆ ಪಡೆದ ಎರಡನೆ ಆಫ್ರಿಕಾ ತಂಡವಾಗಿ ಉಗಾಂಡ ಹೊರಹೊಮ್ಮಿದೆ. ಆ ಮೂಲಕ ಟಿ20 ಮಾದರಿಯಲ್ಲಿ ಆಡುತ್ತಿರುವ ಐದನೇ ದೇಶವಾಗಿ ಉಗಾಂಡ ಗುರುತಿಸಿಕೊಂಡಿದೆ.

ತಾನಾಡಿದ ಆರು ಪಂದ್ಯಗಳ ಪೈಕಿ ಐದು ಪಂದ್ಯಗಳಲ್ಲಿ ಗಮನಾರ್ಹ ಗೆಲುವು ಸಾಧಿಸುವ ಮೂಲಕ, ಆಫ್ರಿಕಾ ಪ್ರಾಂತ್ಯದಿಂದ ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆಯಿತು. 2024ರಲ್ಲಿ ವೆಸ್ಟ್ ಇಂಡೀಸ್ ಹಾಗೂ ಅಮೆರಿಕಾದಲ್ಲಿ ಆಯೋಜನೆಗೊಳ್ಳಲಿರುವ ಟಿ-20 ಕ್ರಿಕೆಟ್ ವಿಶ್ವಕಪ್ ನಲ್ಲಿ ತನ್ನ ಸ್ಥಾನವನ್ನು ಖಾತ್ರಿಪಡಿಸಿಕೊಂಡಿತು.

ಮತ್ತೊಂದೆಡೆ, ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆಯುವ ನೆಚ್ಚಿನ ತಂಡವಾಗಿದ್ದ ಜಿಂಬಾಬೈ ಕ್ವಾಲಿಫೈ ಆಗುವಲ್ಲಿ ವಿಫಲವಾಗಿದೆ. ತಾನಾಡಿರುವ ಐದು ಪಂದ್ಯಗಳ ಪೈಕಿ ಮೂರು ಪಂದ್ಯಗಳ ಗೆಲುವಿನ ಮೂಲಕ ಆರು ಅಂಕಗಳನ್ನು ಸಂಪಾದಿಸಿರುವ ಜಿಂಬಾಬೈ ತಂಡವು ಸದ್ಯ ಮೂರನೆಯ ಸ್ಥಾನದಲ್ಲಿದೆ.

ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆದಿರುವ ಓಮನ್, ನೇಪಾಳ, ಪಪುವ ನ್ಯೂ ಗಿನಿಯ ಹಾಗೂ ಕೆನಡಾ ತಂಡಗಳೊಂದಿಗೆ ಮತ್ತೊಂದು ಆಫ್ರಿಕಾ ತಂಡವಾಗಿ ನಮೀಬಿಯಾ ಕೂಡಾ ಅರ್ಹತೆ ಗಿಟ್ಟಿಸಿದೆ. ಅತಿಥಿ ದೇಶ ಎಂಬ ಕಾರಣಕ್ಕೆ ಅಮೆರಿಕಾ ಕೂಡಾ ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆದಿದೆ.

1998ರಿಂದ ಉಗಾಂಡವು ಐಸಿಸಿಯ ಸಹ ಸದಸ್ಯ ದೇಶವಾಗಿದ್ದರೂ ಈವರೆಗೆ ಅದಕ್ಕೆ ಟೆಸ್ಟ್ ಅಥವಾ ಏಕದಿನ ತಂಡದ ಸ್ಥಾನಮಾನ ದೊರೆತಿಲ್ಲ.

andolanait

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

43 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

53 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

60 mins ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago