ನವದೆಹಲಿ : ಆಫ್ರಿಕಾ ಪ್ರಾಂತ್ಯದ ಕೊನೆಯ ಸುತ್ತಿನ ಅರ್ಹತಾ ಪಂದ್ಯಗಳಲ್ಲಿ ರುವಾಂಡ ತಂಡವನ್ನು ಸೋಲಿಸಿ 2024ರ ಪುರುಷರ ಟಿ-20 ವಿಶ್ವಕಪ್ ಕ್ರಿಕೆಟ್ ಗೆ ಅರ್ಹತೆ ಪಡೆಯುವ ಮೂಲಕ ಉಗಾಂಡ ತಂಡವು ಇತಿಹಾಸ ನಿರ್ಮಿಸಿದೆ.
ಐಸಿಸಿ ವಿಶ್ವಕಪ್ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಉಗಾಂಡ ತಂಡ ಪಾಲ್ಗೊಳ್ಳಲಿದೆ. ಆ ಮೂಲಕ ನಮೀಬಿಯಾದೊಂದಿಗೆ ಟಿ-20 ವಿಶ್ವಕಪ್ ನಲ್ಲಿ ಆಡುವ ಅರ್ಹತೆ ಪಡೆದ ಎರಡನೆ ಆಫ್ರಿಕಾ ತಂಡವಾಗಿ ಉಗಾಂಡ ಹೊರಹೊಮ್ಮಿದೆ. ಆ ಮೂಲಕ ಟಿ20 ಮಾದರಿಯಲ್ಲಿ ಆಡುತ್ತಿರುವ ಐದನೇ ದೇಶವಾಗಿ ಉಗಾಂಡ ಗುರುತಿಸಿಕೊಂಡಿದೆ.
ತಾನಾಡಿದ ಆರು ಪಂದ್ಯಗಳ ಪೈಕಿ ಐದು ಪಂದ್ಯಗಳಲ್ಲಿ ಗಮನಾರ್ಹ ಗೆಲುವು ಸಾಧಿಸುವ ಮೂಲಕ, ಆಫ್ರಿಕಾ ಪ್ರಾಂತ್ಯದಿಂದ ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆಯಿತು. 2024ರಲ್ಲಿ ವೆಸ್ಟ್ ಇಂಡೀಸ್ ಹಾಗೂ ಅಮೆರಿಕಾದಲ್ಲಿ ಆಯೋಜನೆಗೊಳ್ಳಲಿರುವ ಟಿ-20 ಕ್ರಿಕೆಟ್ ವಿಶ್ವಕಪ್ ನಲ್ಲಿ ತನ್ನ ಸ್ಥಾನವನ್ನು ಖಾತ್ರಿಪಡಿಸಿಕೊಂಡಿತು.
ಮತ್ತೊಂದೆಡೆ, ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆಯುವ ನೆಚ್ಚಿನ ತಂಡವಾಗಿದ್ದ ಜಿಂಬಾಬೈ ಕ್ವಾಲಿಫೈ ಆಗುವಲ್ಲಿ ವಿಫಲವಾಗಿದೆ. ತಾನಾಡಿರುವ ಐದು ಪಂದ್ಯಗಳ ಪೈಕಿ ಮೂರು ಪಂದ್ಯಗಳ ಗೆಲುವಿನ ಮೂಲಕ ಆರು ಅಂಕಗಳನ್ನು ಸಂಪಾದಿಸಿರುವ ಜಿಂಬಾಬೈ ತಂಡವು ಸದ್ಯ ಮೂರನೆಯ ಸ್ಥಾನದಲ್ಲಿದೆ.
ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆದಿರುವ ಓಮನ್, ನೇಪಾಳ, ಪಪುವ ನ್ಯೂ ಗಿನಿಯ ಹಾಗೂ ಕೆನಡಾ ತಂಡಗಳೊಂದಿಗೆ ಮತ್ತೊಂದು ಆಫ್ರಿಕಾ ತಂಡವಾಗಿ ನಮೀಬಿಯಾ ಕೂಡಾ ಅರ್ಹತೆ ಗಿಟ್ಟಿಸಿದೆ. ಅತಿಥಿ ದೇಶ ಎಂಬ ಕಾರಣಕ್ಕೆ ಅಮೆರಿಕಾ ಕೂಡಾ ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆದಿದೆ.
1998ರಿಂದ ಉಗಾಂಡವು ಐಸಿಸಿಯ ಸಹ ಸದಸ್ಯ ದೇಶವಾಗಿದ್ದರೂ ಈವರೆಗೆ ಅದಕ್ಕೆ ಟೆಸ್ಟ್ ಅಥವಾ ಏಕದಿನ ತಂಡದ ಸ್ಥಾನಮಾನ ದೊರೆತಿಲ್ಲ.
ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…
ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ…
ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…
ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…