ಕ್ರೀಡೆ

2024ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದ ಉಗಾಂಡ

ನವದೆಹಲಿ : ಆಫ್ರಿಕಾ ಪ್ರಾಂತ್ಯದ ಕೊನೆಯ ಸುತ್ತಿನ ಅರ್ಹತಾ ಪಂದ್ಯಗಳಲ್ಲಿ ರುವಾಂಡ ತಂಡವನ್ನು ಸೋಲಿಸಿ 2024ರ ಪುರುಷರ ಟಿ-20 ವಿಶ್ವಕಪ್ ಕ್ರಿಕೆಟ್ ಗೆ ಅರ್ಹತೆ ಪಡೆಯುವ ಮೂಲಕ ಉಗಾಂಡ ತಂಡವು ಇತಿಹಾಸ ನಿರ್ಮಿಸಿದೆ.

ಐಸಿಸಿ ವಿಶ್ವಕಪ್‌ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಉಗಾಂಡ ತಂಡ ಪಾಲ್ಗೊಳ್ಳಲಿದೆ. ಆ ಮೂಲಕ ನಮೀಬಿಯಾದೊಂದಿಗೆ ಟಿ-20 ವಿಶ್ವಕಪ್ ನಲ್ಲಿ ಆಡುವ ಅರ್ಹತೆ ಪಡೆದ ಎರಡನೆ ಆಫ್ರಿಕಾ ತಂಡವಾಗಿ ಉಗಾಂಡ ಹೊರಹೊಮ್ಮಿದೆ. ಆ ಮೂಲಕ ಟಿ20 ಮಾದರಿಯಲ್ಲಿ ಆಡುತ್ತಿರುವ ಐದನೇ ದೇಶವಾಗಿ ಉಗಾಂಡ ಗುರುತಿಸಿಕೊಂಡಿದೆ.

ತಾನಾಡಿದ ಆರು ಪಂದ್ಯಗಳ ಪೈಕಿ ಐದು ಪಂದ್ಯಗಳಲ್ಲಿ ಗಮನಾರ್ಹ ಗೆಲುವು ಸಾಧಿಸುವ ಮೂಲಕ, ಆಫ್ರಿಕಾ ಪ್ರಾಂತ್ಯದಿಂದ ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆಯಿತು. 2024ರಲ್ಲಿ ವೆಸ್ಟ್ ಇಂಡೀಸ್ ಹಾಗೂ ಅಮೆರಿಕಾದಲ್ಲಿ ಆಯೋಜನೆಗೊಳ್ಳಲಿರುವ ಟಿ-20 ಕ್ರಿಕೆಟ್ ವಿಶ್ವಕಪ್ ನಲ್ಲಿ ತನ್ನ ಸ್ಥಾನವನ್ನು ಖಾತ್ರಿಪಡಿಸಿಕೊಂಡಿತು.

ಮತ್ತೊಂದೆಡೆ, ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆಯುವ ನೆಚ್ಚಿನ ತಂಡವಾಗಿದ್ದ ಜಿಂಬಾಬೈ ಕ್ವಾಲಿಫೈ ಆಗುವಲ್ಲಿ ವಿಫಲವಾಗಿದೆ. ತಾನಾಡಿರುವ ಐದು ಪಂದ್ಯಗಳ ಪೈಕಿ ಮೂರು ಪಂದ್ಯಗಳ ಗೆಲುವಿನ ಮೂಲಕ ಆರು ಅಂಕಗಳನ್ನು ಸಂಪಾದಿಸಿರುವ ಜಿಂಬಾಬೈ ತಂಡವು ಸದ್ಯ ಮೂರನೆಯ ಸ್ಥಾನದಲ್ಲಿದೆ.

ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆದಿರುವ ಓಮನ್, ನೇಪಾಳ, ಪಪುವ ನ್ಯೂ ಗಿನಿಯ ಹಾಗೂ ಕೆನಡಾ ತಂಡಗಳೊಂದಿಗೆ ಮತ್ತೊಂದು ಆಫ್ರಿಕಾ ತಂಡವಾಗಿ ನಮೀಬಿಯಾ ಕೂಡಾ ಅರ್ಹತೆ ಗಿಟ್ಟಿಸಿದೆ. ಅತಿಥಿ ದೇಶ ಎಂಬ ಕಾರಣಕ್ಕೆ ಅಮೆರಿಕಾ ಕೂಡಾ ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆದಿದೆ.

1998ರಿಂದ ಉಗಾಂಡವು ಐಸಿಸಿಯ ಸಹ ಸದಸ್ಯ ದೇಶವಾಗಿದ್ದರೂ ಈವರೆಗೆ ಅದಕ್ಕೆ ಟೆಸ್ಟ್ ಅಥವಾ ಏಕದಿನ ತಂಡದ ಸ್ಥಾನಮಾನ ದೊರೆತಿಲ್ಲ.

andolanait

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

6 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

7 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

8 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

10 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

10 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

11 hours ago