ಕ್ರೀಡೆ

2024ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದ ಉಗಾಂಡ

ನವದೆಹಲಿ : ಆಫ್ರಿಕಾ ಪ್ರಾಂತ್ಯದ ಕೊನೆಯ ಸುತ್ತಿನ ಅರ್ಹತಾ ಪಂದ್ಯಗಳಲ್ಲಿ ರುವಾಂಡ ತಂಡವನ್ನು ಸೋಲಿಸಿ 2024ರ ಪುರುಷರ ಟಿ-20 ವಿಶ್ವಕಪ್ ಕ್ರಿಕೆಟ್ ಗೆ ಅರ್ಹತೆ ಪಡೆಯುವ ಮೂಲಕ ಉಗಾಂಡ ತಂಡವು ಇತಿಹಾಸ ನಿರ್ಮಿಸಿದೆ.

ಐಸಿಸಿ ವಿಶ್ವಕಪ್‌ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಉಗಾಂಡ ತಂಡ ಪಾಲ್ಗೊಳ್ಳಲಿದೆ. ಆ ಮೂಲಕ ನಮೀಬಿಯಾದೊಂದಿಗೆ ಟಿ-20 ವಿಶ್ವಕಪ್ ನಲ್ಲಿ ಆಡುವ ಅರ್ಹತೆ ಪಡೆದ ಎರಡನೆ ಆಫ್ರಿಕಾ ತಂಡವಾಗಿ ಉಗಾಂಡ ಹೊರಹೊಮ್ಮಿದೆ. ಆ ಮೂಲಕ ಟಿ20 ಮಾದರಿಯಲ್ಲಿ ಆಡುತ್ತಿರುವ ಐದನೇ ದೇಶವಾಗಿ ಉಗಾಂಡ ಗುರುತಿಸಿಕೊಂಡಿದೆ.

ತಾನಾಡಿದ ಆರು ಪಂದ್ಯಗಳ ಪೈಕಿ ಐದು ಪಂದ್ಯಗಳಲ್ಲಿ ಗಮನಾರ್ಹ ಗೆಲುವು ಸಾಧಿಸುವ ಮೂಲಕ, ಆಫ್ರಿಕಾ ಪ್ರಾಂತ್ಯದಿಂದ ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆಯಿತು. 2024ರಲ್ಲಿ ವೆಸ್ಟ್ ಇಂಡೀಸ್ ಹಾಗೂ ಅಮೆರಿಕಾದಲ್ಲಿ ಆಯೋಜನೆಗೊಳ್ಳಲಿರುವ ಟಿ-20 ಕ್ರಿಕೆಟ್ ವಿಶ್ವಕಪ್ ನಲ್ಲಿ ತನ್ನ ಸ್ಥಾನವನ್ನು ಖಾತ್ರಿಪಡಿಸಿಕೊಂಡಿತು.

ಮತ್ತೊಂದೆಡೆ, ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆಯುವ ನೆಚ್ಚಿನ ತಂಡವಾಗಿದ್ದ ಜಿಂಬಾಬೈ ಕ್ವಾಲಿಫೈ ಆಗುವಲ್ಲಿ ವಿಫಲವಾಗಿದೆ. ತಾನಾಡಿರುವ ಐದು ಪಂದ್ಯಗಳ ಪೈಕಿ ಮೂರು ಪಂದ್ಯಗಳ ಗೆಲುವಿನ ಮೂಲಕ ಆರು ಅಂಕಗಳನ್ನು ಸಂಪಾದಿಸಿರುವ ಜಿಂಬಾಬೈ ತಂಡವು ಸದ್ಯ ಮೂರನೆಯ ಸ್ಥಾನದಲ್ಲಿದೆ.

ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆದಿರುವ ಓಮನ್, ನೇಪಾಳ, ಪಪುವ ನ್ಯೂ ಗಿನಿಯ ಹಾಗೂ ಕೆನಡಾ ತಂಡಗಳೊಂದಿಗೆ ಮತ್ತೊಂದು ಆಫ್ರಿಕಾ ತಂಡವಾಗಿ ನಮೀಬಿಯಾ ಕೂಡಾ ಅರ್ಹತೆ ಗಿಟ್ಟಿಸಿದೆ. ಅತಿಥಿ ದೇಶ ಎಂಬ ಕಾರಣಕ್ಕೆ ಅಮೆರಿಕಾ ಕೂಡಾ ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆದಿದೆ.

1998ರಿಂದ ಉಗಾಂಡವು ಐಸಿಸಿಯ ಸಹ ಸದಸ್ಯ ದೇಶವಾಗಿದ್ದರೂ ಈವರೆಗೆ ಅದಕ್ಕೆ ಟೆಸ್ಟ್ ಅಥವಾ ಏಕದಿನ ತಂಡದ ಸ್ಥಾನಮಾನ ದೊರೆತಿಲ್ಲ.

andolanait

Recent Posts

ಚಾ.ನಗರ | ಶೆಡ್‌, 4ಸಾವಿರ ಕೋಳಿ ಬೆಂಕಿಗಾಹುತಿ ; 25 ಲಕ್ಷ ನಷ್ಟ

ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…

9 hours ago

ಸಿಎನ್‌ಜಿ ಸಮಸ್ಯೆ ಇಲ್ಲ : ಸಚಿವ ಮುನಿಯಪ್ಪ

ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…

9 hours ago

ಬಲಮುರಿ ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವು

ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…

9 hours ago

ದಿನಗೂಲಿ ನೌಕರರಿಗೂ ಆರೋಗ್ಯ ವಿಮಾ ಸೌಲಭ್ಯ

ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…

9 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು

ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…

10 hours ago

ಜನಗಣತಿಗೆ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡಿ ; ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ

ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…

10 hours ago