ಕ್ರೀಡೆ

2024ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದ ಉಗಾಂಡ

ನವದೆಹಲಿ : ಆಫ್ರಿಕಾ ಪ್ರಾಂತ್ಯದ ಕೊನೆಯ ಸುತ್ತಿನ ಅರ್ಹತಾ ಪಂದ್ಯಗಳಲ್ಲಿ ರುವಾಂಡ ತಂಡವನ್ನು ಸೋಲಿಸಿ 2024ರ ಪುರುಷರ ಟಿ-20 ವಿಶ್ವಕಪ್ ಕ್ರಿಕೆಟ್ ಗೆ ಅರ್ಹತೆ ಪಡೆಯುವ ಮೂಲಕ ಉಗಾಂಡ ತಂಡವು ಇತಿಹಾಸ ನಿರ್ಮಿಸಿದೆ.

ಐಸಿಸಿ ವಿಶ್ವಕಪ್‌ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಉಗಾಂಡ ತಂಡ ಪಾಲ್ಗೊಳ್ಳಲಿದೆ. ಆ ಮೂಲಕ ನಮೀಬಿಯಾದೊಂದಿಗೆ ಟಿ-20 ವಿಶ್ವಕಪ್ ನಲ್ಲಿ ಆಡುವ ಅರ್ಹತೆ ಪಡೆದ ಎರಡನೆ ಆಫ್ರಿಕಾ ತಂಡವಾಗಿ ಉಗಾಂಡ ಹೊರಹೊಮ್ಮಿದೆ. ಆ ಮೂಲಕ ಟಿ20 ಮಾದರಿಯಲ್ಲಿ ಆಡುತ್ತಿರುವ ಐದನೇ ದೇಶವಾಗಿ ಉಗಾಂಡ ಗುರುತಿಸಿಕೊಂಡಿದೆ.

ತಾನಾಡಿದ ಆರು ಪಂದ್ಯಗಳ ಪೈಕಿ ಐದು ಪಂದ್ಯಗಳಲ್ಲಿ ಗಮನಾರ್ಹ ಗೆಲುವು ಸಾಧಿಸುವ ಮೂಲಕ, ಆಫ್ರಿಕಾ ಪ್ರಾಂತ್ಯದಿಂದ ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆಯಿತು. 2024ರಲ್ಲಿ ವೆಸ್ಟ್ ಇಂಡೀಸ್ ಹಾಗೂ ಅಮೆರಿಕಾದಲ್ಲಿ ಆಯೋಜನೆಗೊಳ್ಳಲಿರುವ ಟಿ-20 ಕ್ರಿಕೆಟ್ ವಿಶ್ವಕಪ್ ನಲ್ಲಿ ತನ್ನ ಸ್ಥಾನವನ್ನು ಖಾತ್ರಿಪಡಿಸಿಕೊಂಡಿತು.

ಮತ್ತೊಂದೆಡೆ, ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆಯುವ ನೆಚ್ಚಿನ ತಂಡವಾಗಿದ್ದ ಜಿಂಬಾಬೈ ಕ್ವಾಲಿಫೈ ಆಗುವಲ್ಲಿ ವಿಫಲವಾಗಿದೆ. ತಾನಾಡಿರುವ ಐದು ಪಂದ್ಯಗಳ ಪೈಕಿ ಮೂರು ಪಂದ್ಯಗಳ ಗೆಲುವಿನ ಮೂಲಕ ಆರು ಅಂಕಗಳನ್ನು ಸಂಪಾದಿಸಿರುವ ಜಿಂಬಾಬೈ ತಂಡವು ಸದ್ಯ ಮೂರನೆಯ ಸ್ಥಾನದಲ್ಲಿದೆ.

ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆದಿರುವ ಓಮನ್, ನೇಪಾಳ, ಪಪುವ ನ್ಯೂ ಗಿನಿಯ ಹಾಗೂ ಕೆನಡಾ ತಂಡಗಳೊಂದಿಗೆ ಮತ್ತೊಂದು ಆಫ್ರಿಕಾ ತಂಡವಾಗಿ ನಮೀಬಿಯಾ ಕೂಡಾ ಅರ್ಹತೆ ಗಿಟ್ಟಿಸಿದೆ. ಅತಿಥಿ ದೇಶ ಎಂಬ ಕಾರಣಕ್ಕೆ ಅಮೆರಿಕಾ ಕೂಡಾ ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆದಿದೆ.

1998ರಿಂದ ಉಗಾಂಡವು ಐಸಿಸಿಯ ಸಹ ಸದಸ್ಯ ದೇಶವಾಗಿದ್ದರೂ ಈವರೆಗೆ ಅದಕ್ಕೆ ಟೆಸ್ಟ್ ಅಥವಾ ಏಕದಿನ ತಂಡದ ಸ್ಥಾನಮಾನ ದೊರೆತಿಲ್ಲ.

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

6 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

7 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

7 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

9 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

9 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

13 hours ago