ನವದೆಹಲಿ : ಆಫ್ರಿಕಾ ಪ್ರಾಂತ್ಯದ ಕೊನೆಯ ಸುತ್ತಿನ ಅರ್ಹತಾ ಪಂದ್ಯಗಳಲ್ಲಿ ರುವಾಂಡ ತಂಡವನ್ನು ಸೋಲಿಸಿ 2024ರ ಪುರುಷರ ಟಿ-20 ವಿಶ್ವಕಪ್ ಕ್ರಿಕೆಟ್ ಗೆ ಅರ್ಹತೆ ಪಡೆಯುವ ಮೂಲಕ ಉಗಾಂಡ ತಂಡವು ಇತಿಹಾಸ ನಿರ್ಮಿಸಿದೆ.
ಐಸಿಸಿ ವಿಶ್ವಕಪ್ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಉಗಾಂಡ ತಂಡ ಪಾಲ್ಗೊಳ್ಳಲಿದೆ. ಆ ಮೂಲಕ ನಮೀಬಿಯಾದೊಂದಿಗೆ ಟಿ-20 ವಿಶ್ವಕಪ್ ನಲ್ಲಿ ಆಡುವ ಅರ್ಹತೆ ಪಡೆದ ಎರಡನೆ ಆಫ್ರಿಕಾ ತಂಡವಾಗಿ ಉಗಾಂಡ ಹೊರಹೊಮ್ಮಿದೆ. ಆ ಮೂಲಕ ಟಿ20 ಮಾದರಿಯಲ್ಲಿ ಆಡುತ್ತಿರುವ ಐದನೇ ದೇಶವಾಗಿ ಉಗಾಂಡ ಗುರುತಿಸಿಕೊಂಡಿದೆ.
ತಾನಾಡಿದ ಆರು ಪಂದ್ಯಗಳ ಪೈಕಿ ಐದು ಪಂದ್ಯಗಳಲ್ಲಿ ಗಮನಾರ್ಹ ಗೆಲುವು ಸಾಧಿಸುವ ಮೂಲಕ, ಆಫ್ರಿಕಾ ಪ್ರಾಂತ್ಯದಿಂದ ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆಯಿತು. 2024ರಲ್ಲಿ ವೆಸ್ಟ್ ಇಂಡೀಸ್ ಹಾಗೂ ಅಮೆರಿಕಾದಲ್ಲಿ ಆಯೋಜನೆಗೊಳ್ಳಲಿರುವ ಟಿ-20 ಕ್ರಿಕೆಟ್ ವಿಶ್ವಕಪ್ ನಲ್ಲಿ ತನ್ನ ಸ್ಥಾನವನ್ನು ಖಾತ್ರಿಪಡಿಸಿಕೊಂಡಿತು.
ಮತ್ತೊಂದೆಡೆ, ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆಯುವ ನೆಚ್ಚಿನ ತಂಡವಾಗಿದ್ದ ಜಿಂಬಾಬೈ ಕ್ವಾಲಿಫೈ ಆಗುವಲ್ಲಿ ವಿಫಲವಾಗಿದೆ. ತಾನಾಡಿರುವ ಐದು ಪಂದ್ಯಗಳ ಪೈಕಿ ಮೂರು ಪಂದ್ಯಗಳ ಗೆಲುವಿನ ಮೂಲಕ ಆರು ಅಂಕಗಳನ್ನು ಸಂಪಾದಿಸಿರುವ ಜಿಂಬಾಬೈ ತಂಡವು ಸದ್ಯ ಮೂರನೆಯ ಸ್ಥಾನದಲ್ಲಿದೆ.
ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆದಿರುವ ಓಮನ್, ನೇಪಾಳ, ಪಪುವ ನ್ಯೂ ಗಿನಿಯ ಹಾಗೂ ಕೆನಡಾ ತಂಡಗಳೊಂದಿಗೆ ಮತ್ತೊಂದು ಆಫ್ರಿಕಾ ತಂಡವಾಗಿ ನಮೀಬಿಯಾ ಕೂಡಾ ಅರ್ಹತೆ ಗಿಟ್ಟಿಸಿದೆ. ಅತಿಥಿ ದೇಶ ಎಂಬ ಕಾರಣಕ್ಕೆ ಅಮೆರಿಕಾ ಕೂಡಾ ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆದಿದೆ.
1998ರಿಂದ ಉಗಾಂಡವು ಐಸಿಸಿಯ ಸಹ ಸದಸ್ಯ ದೇಶವಾಗಿದ್ದರೂ ಈವರೆಗೆ ಅದಕ್ಕೆ ಟೆಸ್ಟ್ ಅಥವಾ ಏಕದಿನ ತಂಡದ ಸ್ಥಾನಮಾನ ದೊರೆತಿಲ್ಲ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…