ಕ್ರೀಡೆ

2024ರ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆದ ಉಗಾಂಡ

ನವದೆಹಲಿ : ಆಫ್ರಿಕಾ ಪ್ರಾಂತ್ಯದ ಕೊನೆಯ ಸುತ್ತಿನ ಅರ್ಹತಾ ಪಂದ್ಯಗಳಲ್ಲಿ ರುವಾಂಡ ತಂಡವನ್ನು ಸೋಲಿಸಿ 2024ರ ಪುರುಷರ ಟಿ-20 ವಿಶ್ವಕಪ್ ಕ್ರಿಕೆಟ್ ಗೆ ಅರ್ಹತೆ ಪಡೆಯುವ ಮೂಲಕ ಉಗಾಂಡ ತಂಡವು ಇತಿಹಾಸ ನಿರ್ಮಿಸಿದೆ.

ಐಸಿಸಿ ವಿಶ್ವಕಪ್‌ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಉಗಾಂಡ ತಂಡ ಪಾಲ್ಗೊಳ್ಳಲಿದೆ. ಆ ಮೂಲಕ ನಮೀಬಿಯಾದೊಂದಿಗೆ ಟಿ-20 ವಿಶ್ವಕಪ್ ನಲ್ಲಿ ಆಡುವ ಅರ್ಹತೆ ಪಡೆದ ಎರಡನೆ ಆಫ್ರಿಕಾ ತಂಡವಾಗಿ ಉಗಾಂಡ ಹೊರಹೊಮ್ಮಿದೆ. ಆ ಮೂಲಕ ಟಿ20 ಮಾದರಿಯಲ್ಲಿ ಆಡುತ್ತಿರುವ ಐದನೇ ದೇಶವಾಗಿ ಉಗಾಂಡ ಗುರುತಿಸಿಕೊಂಡಿದೆ.

ತಾನಾಡಿದ ಆರು ಪಂದ್ಯಗಳ ಪೈಕಿ ಐದು ಪಂದ್ಯಗಳಲ್ಲಿ ಗಮನಾರ್ಹ ಗೆಲುವು ಸಾಧಿಸುವ ಮೂಲಕ, ಆಫ್ರಿಕಾ ಪ್ರಾಂತ್ಯದಿಂದ ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆಯಿತು. 2024ರಲ್ಲಿ ವೆಸ್ಟ್ ಇಂಡೀಸ್ ಹಾಗೂ ಅಮೆರಿಕಾದಲ್ಲಿ ಆಯೋಜನೆಗೊಳ್ಳಲಿರುವ ಟಿ-20 ಕ್ರಿಕೆಟ್ ವಿಶ್ವಕಪ್ ನಲ್ಲಿ ತನ್ನ ಸ್ಥಾನವನ್ನು ಖಾತ್ರಿಪಡಿಸಿಕೊಂಡಿತು.

ಮತ್ತೊಂದೆಡೆ, ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆಯುವ ನೆಚ್ಚಿನ ತಂಡವಾಗಿದ್ದ ಜಿಂಬಾಬೈ ಕ್ವಾಲಿಫೈ ಆಗುವಲ್ಲಿ ವಿಫಲವಾಗಿದೆ. ತಾನಾಡಿರುವ ಐದು ಪಂದ್ಯಗಳ ಪೈಕಿ ಮೂರು ಪಂದ್ಯಗಳ ಗೆಲುವಿನ ಮೂಲಕ ಆರು ಅಂಕಗಳನ್ನು ಸಂಪಾದಿಸಿರುವ ಜಿಂಬಾಬೈ ತಂಡವು ಸದ್ಯ ಮೂರನೆಯ ಸ್ಥಾನದಲ್ಲಿದೆ.

ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆದಿರುವ ಓಮನ್, ನೇಪಾಳ, ಪಪುವ ನ್ಯೂ ಗಿನಿಯ ಹಾಗೂ ಕೆನಡಾ ತಂಡಗಳೊಂದಿಗೆ ಮತ್ತೊಂದು ಆಫ್ರಿಕಾ ತಂಡವಾಗಿ ನಮೀಬಿಯಾ ಕೂಡಾ ಅರ್ಹತೆ ಗಿಟ್ಟಿಸಿದೆ. ಅತಿಥಿ ದೇಶ ಎಂಬ ಕಾರಣಕ್ಕೆ ಅಮೆರಿಕಾ ಕೂಡಾ ಟಿ-20 ಕ್ರಿಕೆಟ್ ವಿಶ್ವಕಪ್ ಗೆ ಅರ್ಹತೆ ಪಡೆದಿದೆ.

1998ರಿಂದ ಉಗಾಂಡವು ಐಸಿಸಿಯ ಸಹ ಸದಸ್ಯ ದೇಶವಾಗಿದ್ದರೂ ಈವರೆಗೆ ಅದಕ್ಕೆ ಟೆಸ್ಟ್ ಅಥವಾ ಏಕದಿನ ತಂಡದ ಸ್ಥಾನಮಾನ ದೊರೆತಿಲ್ಲ.

andolanait

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

11 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

13 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

14 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

15 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

17 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

18 hours ago