ಕ್ರೀಡೆ

ಭಾರತೀಯ ಕ್ರಿಕೆಟ್‌ ಇತಿಹಾಸದಲ್ಲಿಅತ್ಯಂತ ವೇಗದ ಬೌಲಿಂಗ್‌ ಮಾಡಿದ ಉಮ್ರಾನ್​ ಮಲಿಕ್​ !

ಗುವಾಹಟಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)​ ಮೂಲಕ ಬೆಳಕಿಗೆ ಬಂದ ಪ್ರತಿಭೆ, ಜಮ್ಮು ಕಾಶ್ಮೀರದ ಉಮ್ರಾನ್​ ಮಲಿಕ್ ಸದ್ಯ ಭಾರತದ ಭರವಸೆಯ ಆಟಗಾರ. ತಮ್ಮ ಬೆಂಕಿ ಚೆಂಡಿನ ವೇಗದಿಂದಲೇ ಗುರುತಿಸಿಕೊಂಡಿರುವ ಮಲಿಕ್​, ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ತಮ್ಮದೇ ವೇಗದ ಬೌಲಿಂಗ್​ ದಾಖಲೆಯನ್ನು ಪುಡಿಗಟ್ಟಿದ್ದಾರೆ. 156 ಕಿಮೀ ವೇಗದಲ್ಲಿ ಚೆಂಡೆಸೆದ ಭಾರತದ ವೇಗಿ ಎಂಬ ದಾಖಲೆಗಳ ಪುಟ ಸೇರಿದರು.ನಿನ್ನೆ ನಡೆದ ಪಂದ್ಯದಲ್ಲಿ ಉಮ್ರಾನ್‌ ಪೌರುಷ: ಭಾರತದ 23 ವರ್ಷದ ಯುವವೇಗಿ ಲಂಕಾ ಎದುರು ತಮ್ಮ ತೋಳ್ಬಲ ಪ್ರದರ್ಶನ ಮಾಡಿದರು. 14ನೇ ಓವರ್​ನಲ್ಲಿ 156 ಕಿಮೀ ವೇಗದಲ್ಲಿ ಬೌಲ್​ ಮಾಡಿದರು. ಈ ಮೂಲಕ ಜಸ್ಪ್ರೀತ್​ ಬೂಮ್ರಾ ಹೆಸರಲ್ಲಿದ್ದ ದಾಖಲೆಯನ್ನು ಮೀರಿದರು. ಬೂಮ್ರಾ ಏಕದಿನದಲ್ಲಿ ಭಾರತದ ಪರವಾಗಿ 153.36 ಕಿಮೀ ವೇಗದಲ್ಲಿ ಚೆಂಡೆಸೆದ ಮೊದಲಿಗರಾಗಿದ್ದರು.

ಇದಕ್ಕೂ ಮೊದಲು ಜಮ್ಮು ಕಾಶ್ಮೀರದ ಕುವರ, ಶ್ರೀಲಂಕಾ ಎದುರಿನ ಮೊದಲ ಟಿ20 ಪಂದ್ಯದಲ್ಲಿ 155 ಕಿಮೀ ವೇಗದಲ್ಲಿ ಚೆಂಡನ್ನು ಎಸೆದಿದ್ದರು. ಕಳೆದ ವರ್ಷದ ಐಪಿಎಲ್​ ಪಂದ್ಯವೊಂದರಲ್ಲಿ 156.9 ಕಿಮೀ ವೇಗದಲ್ಲಿ ಬೌಲ್​ ಮಾಡಿ ದಾಖಲೆ ನಿರ್ಮಿಸಿದ್ದಾರೆ. ಇನ್ನು, ನಿನ್ನೆಯ ಪಂದ್ಯದಲ್ಲಿ ಉಮ್ರಾನ್​ ಮಲಿಕ್ 8 ಓವರ್‌ಗಳಲ್ಲಿ​ 57 ರನ್​ ಬಿಟ್ಟುಕೊಟ್ಟು 3 ವಿಕೆಟ್​ ಗಳಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತಿ ವೇಗದಲ್ಲಿ ಚೆಂಡೆಸೆದ ದಾಖಲೆ ಪಾಕಿಸ್ತಾನದ ಮಾಜಿ ದೈತ್ಯ ವೇಗಿ ಶೋಯೆಬ್​ ಅಖ್ತರ್​ ಹೆಸರಲ್ಲಿದೆ. ಅಖ್ತರ್​ 161.3 KMPH ವೇಗದಲ್ಲಿ ಬೌಲ್​ ಮಾಡಿದ್ದು, ಈವರೆಗೂ ಯಾರೂ ಮುಟ್ಟಲಾಗದ ದಾಖಲೆಯಾಗಿಯೇ ಉಳಿದಿದೆ.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago