ಕ್ರೀಡೆ

ಭಾರತೀಯ ಕ್ರಿಕೆಟ್‌ ಇತಿಹಾಸದಲ್ಲಿಅತ್ಯಂತ ವೇಗದ ಬೌಲಿಂಗ್‌ ಮಾಡಿದ ಉಮ್ರಾನ್​ ಮಲಿಕ್​ !

ಗುವಾಹಟಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)​ ಮೂಲಕ ಬೆಳಕಿಗೆ ಬಂದ ಪ್ರತಿಭೆ, ಜಮ್ಮು ಕಾಶ್ಮೀರದ ಉಮ್ರಾನ್​ ಮಲಿಕ್ ಸದ್ಯ ಭಾರತದ ಭರವಸೆಯ ಆಟಗಾರ. ತಮ್ಮ ಬೆಂಕಿ ಚೆಂಡಿನ ವೇಗದಿಂದಲೇ ಗುರುತಿಸಿಕೊಂಡಿರುವ ಮಲಿಕ್​, ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ತಮ್ಮದೇ ವೇಗದ ಬೌಲಿಂಗ್​ ದಾಖಲೆಯನ್ನು ಪುಡಿಗಟ್ಟಿದ್ದಾರೆ. 156 ಕಿಮೀ ವೇಗದಲ್ಲಿ ಚೆಂಡೆಸೆದ ಭಾರತದ ವೇಗಿ ಎಂಬ ದಾಖಲೆಗಳ ಪುಟ ಸೇರಿದರು.ನಿನ್ನೆ ನಡೆದ ಪಂದ್ಯದಲ್ಲಿ ಉಮ್ರಾನ್‌ ಪೌರುಷ: ಭಾರತದ 23 ವರ್ಷದ ಯುವವೇಗಿ ಲಂಕಾ ಎದುರು ತಮ್ಮ ತೋಳ್ಬಲ ಪ್ರದರ್ಶನ ಮಾಡಿದರು. 14ನೇ ಓವರ್​ನಲ್ಲಿ 156 ಕಿಮೀ ವೇಗದಲ್ಲಿ ಬೌಲ್​ ಮಾಡಿದರು. ಈ ಮೂಲಕ ಜಸ್ಪ್ರೀತ್​ ಬೂಮ್ರಾ ಹೆಸರಲ್ಲಿದ್ದ ದಾಖಲೆಯನ್ನು ಮೀರಿದರು. ಬೂಮ್ರಾ ಏಕದಿನದಲ್ಲಿ ಭಾರತದ ಪರವಾಗಿ 153.36 ಕಿಮೀ ವೇಗದಲ್ಲಿ ಚೆಂಡೆಸೆದ ಮೊದಲಿಗರಾಗಿದ್ದರು.

ಇದಕ್ಕೂ ಮೊದಲು ಜಮ್ಮು ಕಾಶ್ಮೀರದ ಕುವರ, ಶ್ರೀಲಂಕಾ ಎದುರಿನ ಮೊದಲ ಟಿ20 ಪಂದ್ಯದಲ್ಲಿ 155 ಕಿಮೀ ವೇಗದಲ್ಲಿ ಚೆಂಡನ್ನು ಎಸೆದಿದ್ದರು. ಕಳೆದ ವರ್ಷದ ಐಪಿಎಲ್​ ಪಂದ್ಯವೊಂದರಲ್ಲಿ 156.9 ಕಿಮೀ ವೇಗದಲ್ಲಿ ಬೌಲ್​ ಮಾಡಿ ದಾಖಲೆ ನಿರ್ಮಿಸಿದ್ದಾರೆ. ಇನ್ನು, ನಿನ್ನೆಯ ಪಂದ್ಯದಲ್ಲಿ ಉಮ್ರಾನ್​ ಮಲಿಕ್ 8 ಓವರ್‌ಗಳಲ್ಲಿ​ 57 ರನ್​ ಬಿಟ್ಟುಕೊಟ್ಟು 3 ವಿಕೆಟ್​ ಗಳಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತಿ ವೇಗದಲ್ಲಿ ಚೆಂಡೆಸೆದ ದಾಖಲೆ ಪಾಕಿಸ್ತಾನದ ಮಾಜಿ ದೈತ್ಯ ವೇಗಿ ಶೋಯೆಬ್​ ಅಖ್ತರ್​ ಹೆಸರಲ್ಲಿದೆ. ಅಖ್ತರ್​ 161.3 KMPH ವೇಗದಲ್ಲಿ ಬೌಲ್​ ಮಾಡಿದ್ದು, ಈವರೆಗೂ ಯಾರೂ ಮುಟ್ಟಲಾಗದ ದಾಖಲೆಯಾಗಿಯೇ ಉಳಿದಿದೆ.

andolanait

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

2 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

2 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

2 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

2 hours ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

2 hours ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

2 hours ago