ಕ್ರೀಡೆ

ಭಾರತೀಯ ಕ್ರಿಕೆಟ್‌ ಇತಿಹಾಸದಲ್ಲಿಅತ್ಯಂತ ವೇಗದ ಬೌಲಿಂಗ್‌ ಮಾಡಿದ ಉಮ್ರಾನ್​ ಮಲಿಕ್​ !

ಗುವಾಹಟಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)​ ಮೂಲಕ ಬೆಳಕಿಗೆ ಬಂದ ಪ್ರತಿಭೆ, ಜಮ್ಮು ಕಾಶ್ಮೀರದ ಉಮ್ರಾನ್​ ಮಲಿಕ್ ಸದ್ಯ ಭಾರತದ ಭರವಸೆಯ ಆಟಗಾರ. ತಮ್ಮ ಬೆಂಕಿ ಚೆಂಡಿನ ವೇಗದಿಂದಲೇ ಗುರುತಿಸಿಕೊಂಡಿರುವ ಮಲಿಕ್​, ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ತಮ್ಮದೇ ವೇಗದ ಬೌಲಿಂಗ್​ ದಾಖಲೆಯನ್ನು ಪುಡಿಗಟ್ಟಿದ್ದಾರೆ. 156 ಕಿಮೀ ವೇಗದಲ್ಲಿ ಚೆಂಡೆಸೆದ ಭಾರತದ ವೇಗಿ ಎಂಬ ದಾಖಲೆಗಳ ಪುಟ ಸೇರಿದರು.ನಿನ್ನೆ ನಡೆದ ಪಂದ್ಯದಲ್ಲಿ ಉಮ್ರಾನ್‌ ಪೌರುಷ: ಭಾರತದ 23 ವರ್ಷದ ಯುವವೇಗಿ ಲಂಕಾ ಎದುರು ತಮ್ಮ ತೋಳ್ಬಲ ಪ್ರದರ್ಶನ ಮಾಡಿದರು. 14ನೇ ಓವರ್​ನಲ್ಲಿ 156 ಕಿಮೀ ವೇಗದಲ್ಲಿ ಬೌಲ್​ ಮಾಡಿದರು. ಈ ಮೂಲಕ ಜಸ್ಪ್ರೀತ್​ ಬೂಮ್ರಾ ಹೆಸರಲ್ಲಿದ್ದ ದಾಖಲೆಯನ್ನು ಮೀರಿದರು. ಬೂಮ್ರಾ ಏಕದಿನದಲ್ಲಿ ಭಾರತದ ಪರವಾಗಿ 153.36 ಕಿಮೀ ವೇಗದಲ್ಲಿ ಚೆಂಡೆಸೆದ ಮೊದಲಿಗರಾಗಿದ್ದರು.

ಇದಕ್ಕೂ ಮೊದಲು ಜಮ್ಮು ಕಾಶ್ಮೀರದ ಕುವರ, ಶ್ರೀಲಂಕಾ ಎದುರಿನ ಮೊದಲ ಟಿ20 ಪಂದ್ಯದಲ್ಲಿ 155 ಕಿಮೀ ವೇಗದಲ್ಲಿ ಚೆಂಡನ್ನು ಎಸೆದಿದ್ದರು. ಕಳೆದ ವರ್ಷದ ಐಪಿಎಲ್​ ಪಂದ್ಯವೊಂದರಲ್ಲಿ 156.9 ಕಿಮೀ ವೇಗದಲ್ಲಿ ಬೌಲ್​ ಮಾಡಿ ದಾಖಲೆ ನಿರ್ಮಿಸಿದ್ದಾರೆ. ಇನ್ನು, ನಿನ್ನೆಯ ಪಂದ್ಯದಲ್ಲಿ ಉಮ್ರಾನ್​ ಮಲಿಕ್ 8 ಓವರ್‌ಗಳಲ್ಲಿ​ 57 ರನ್​ ಬಿಟ್ಟುಕೊಟ್ಟು 3 ವಿಕೆಟ್​ ಗಳಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತಿ ವೇಗದಲ್ಲಿ ಚೆಂಡೆಸೆದ ದಾಖಲೆ ಪಾಕಿಸ್ತಾನದ ಮಾಜಿ ದೈತ್ಯ ವೇಗಿ ಶೋಯೆಬ್​ ಅಖ್ತರ್​ ಹೆಸರಲ್ಲಿದೆ. ಅಖ್ತರ್​ 161.3 KMPH ವೇಗದಲ್ಲಿ ಬೌಲ್​ ಮಾಡಿದ್ದು, ಈವರೆಗೂ ಯಾರೂ ಮುಟ್ಟಲಾಗದ ದಾಖಲೆಯಾಗಿಯೇ ಉಳಿದಿದೆ.

andolanait

Recent Posts

ಹೈಕಮಾಂಡ್‌ ಕರೆದರೆ ದೆಹಲಿಗೆ ಹೋಗುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ದೆಹಲಿ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು,…

45 mins ago

ಹನೂರು| ಕಾವೇರಿ ನದಿ ದಾಟಿ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಆರಂಭಿಸಿದ ಭಕ್ತರು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ…

1 hour ago

ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ ಬಾಲಕನ ಮೇಲೆ ಚಿರತೆ ದಾಳಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ…

2 hours ago

ನಾನು, ಸಿಎಂ ಸಿದ್ದರಾಮಯ್ಯ ಕದ್ದುಮುಚ್ಚಿ ಮಾತನಾಡಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.…

3 hours ago

ಫೆಬ್ರವರಿ.12ರಂದು ರಾಜ್ಯಾದ್ಯಂತ ಬಿಸಿಯೂಟ ನೌಕರರ ಮುಷ್ಕರ

ಬೆಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆ ಮೇರೆಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಇದೇ ಫೆಬ್ರವರಿ.12ರಂದು ರಾಜ್ಯಾದ್ಯಂತ…

3 hours ago

ಅನುಮಾನಾಸ್ಪದವಾಗಿ ವ್ಯಕ್ತಿ ಸಾವು: ಮನೆ ಜಗುಲಿಯಲ್ಲೇ ಶವ ಪತ್ತೆ

ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು…

3 hours ago