ಕ್ರೀಡೆ

ಭಾರತೀಯ ಕ್ರಿಕೆಟ್‌ ಇತಿಹಾಸದಲ್ಲಿಅತ್ಯಂತ ವೇಗದ ಬೌಲಿಂಗ್‌ ಮಾಡಿದ ಉಮ್ರಾನ್​ ಮಲಿಕ್​ !

ಗುವಾಹಟಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)​ ಮೂಲಕ ಬೆಳಕಿಗೆ ಬಂದ ಪ್ರತಿಭೆ, ಜಮ್ಮು ಕಾಶ್ಮೀರದ ಉಮ್ರಾನ್​ ಮಲಿಕ್ ಸದ್ಯ ಭಾರತದ ಭರವಸೆಯ ಆಟಗಾರ. ತಮ್ಮ ಬೆಂಕಿ ಚೆಂಡಿನ ವೇಗದಿಂದಲೇ ಗುರುತಿಸಿಕೊಂಡಿರುವ ಮಲಿಕ್​, ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ತಮ್ಮದೇ ವೇಗದ ಬೌಲಿಂಗ್​ ದಾಖಲೆಯನ್ನು ಪುಡಿಗಟ್ಟಿದ್ದಾರೆ. 156 ಕಿಮೀ ವೇಗದಲ್ಲಿ ಚೆಂಡೆಸೆದ ಭಾರತದ ವೇಗಿ ಎಂಬ ದಾಖಲೆಗಳ ಪುಟ ಸೇರಿದರು.ನಿನ್ನೆ ನಡೆದ ಪಂದ್ಯದಲ್ಲಿ ಉಮ್ರಾನ್‌ ಪೌರುಷ: ಭಾರತದ 23 ವರ್ಷದ ಯುವವೇಗಿ ಲಂಕಾ ಎದುರು ತಮ್ಮ ತೋಳ್ಬಲ ಪ್ರದರ್ಶನ ಮಾಡಿದರು. 14ನೇ ಓವರ್​ನಲ್ಲಿ 156 ಕಿಮೀ ವೇಗದಲ್ಲಿ ಬೌಲ್​ ಮಾಡಿದರು. ಈ ಮೂಲಕ ಜಸ್ಪ್ರೀತ್​ ಬೂಮ್ರಾ ಹೆಸರಲ್ಲಿದ್ದ ದಾಖಲೆಯನ್ನು ಮೀರಿದರು. ಬೂಮ್ರಾ ಏಕದಿನದಲ್ಲಿ ಭಾರತದ ಪರವಾಗಿ 153.36 ಕಿಮೀ ವೇಗದಲ್ಲಿ ಚೆಂಡೆಸೆದ ಮೊದಲಿಗರಾಗಿದ್ದರು.

ಇದಕ್ಕೂ ಮೊದಲು ಜಮ್ಮು ಕಾಶ್ಮೀರದ ಕುವರ, ಶ್ರೀಲಂಕಾ ಎದುರಿನ ಮೊದಲ ಟಿ20 ಪಂದ್ಯದಲ್ಲಿ 155 ಕಿಮೀ ವೇಗದಲ್ಲಿ ಚೆಂಡನ್ನು ಎಸೆದಿದ್ದರು. ಕಳೆದ ವರ್ಷದ ಐಪಿಎಲ್​ ಪಂದ್ಯವೊಂದರಲ್ಲಿ 156.9 ಕಿಮೀ ವೇಗದಲ್ಲಿ ಬೌಲ್​ ಮಾಡಿ ದಾಖಲೆ ನಿರ್ಮಿಸಿದ್ದಾರೆ. ಇನ್ನು, ನಿನ್ನೆಯ ಪಂದ್ಯದಲ್ಲಿ ಉಮ್ರಾನ್​ ಮಲಿಕ್ 8 ಓವರ್‌ಗಳಲ್ಲಿ​ 57 ರನ್​ ಬಿಟ್ಟುಕೊಟ್ಟು 3 ವಿಕೆಟ್​ ಗಳಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತಿ ವೇಗದಲ್ಲಿ ಚೆಂಡೆಸೆದ ದಾಖಲೆ ಪಾಕಿಸ್ತಾನದ ಮಾಜಿ ದೈತ್ಯ ವೇಗಿ ಶೋಯೆಬ್​ ಅಖ್ತರ್​ ಹೆಸರಲ್ಲಿದೆ. ಅಖ್ತರ್​ 161.3 KMPH ವೇಗದಲ್ಲಿ ಬೌಲ್​ ಮಾಡಿದ್ದು, ಈವರೆಗೂ ಯಾರೂ ಮುಟ್ಟಲಾಗದ ದಾಖಲೆಯಾಗಿಯೇ ಉಳಿದಿದೆ.

andolanait

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

2 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

3 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

4 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

5 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

5 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

6 hours ago