ಕ್ರೀಡೆ

ಭಾರತೀಯ ಕ್ರಿಕೆಟ್‌ ಇತಿಹಾಸದಲ್ಲಿಅತ್ಯಂತ ವೇಗದ ಬೌಲಿಂಗ್‌ ಮಾಡಿದ ಉಮ್ರಾನ್​ ಮಲಿಕ್​ !

ಗುವಾಹಟಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)​ ಮೂಲಕ ಬೆಳಕಿಗೆ ಬಂದ ಪ್ರತಿಭೆ, ಜಮ್ಮು ಕಾಶ್ಮೀರದ ಉಮ್ರಾನ್​ ಮಲಿಕ್ ಸದ್ಯ ಭಾರತದ ಭರವಸೆಯ ಆಟಗಾರ. ತಮ್ಮ ಬೆಂಕಿ ಚೆಂಡಿನ ವೇಗದಿಂದಲೇ ಗುರುತಿಸಿಕೊಂಡಿರುವ ಮಲಿಕ್​, ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ತಮ್ಮದೇ ವೇಗದ ಬೌಲಿಂಗ್​ ದಾಖಲೆಯನ್ನು ಪುಡಿಗಟ್ಟಿದ್ದಾರೆ. 156 ಕಿಮೀ ವೇಗದಲ್ಲಿ ಚೆಂಡೆಸೆದ ಭಾರತದ ವೇಗಿ ಎಂಬ ದಾಖಲೆಗಳ ಪುಟ ಸೇರಿದರು.ನಿನ್ನೆ ನಡೆದ ಪಂದ್ಯದಲ್ಲಿ ಉಮ್ರಾನ್‌ ಪೌರುಷ: ಭಾರತದ 23 ವರ್ಷದ ಯುವವೇಗಿ ಲಂಕಾ ಎದುರು ತಮ್ಮ ತೋಳ್ಬಲ ಪ್ರದರ್ಶನ ಮಾಡಿದರು. 14ನೇ ಓವರ್​ನಲ್ಲಿ 156 ಕಿಮೀ ವೇಗದಲ್ಲಿ ಬೌಲ್​ ಮಾಡಿದರು. ಈ ಮೂಲಕ ಜಸ್ಪ್ರೀತ್​ ಬೂಮ್ರಾ ಹೆಸರಲ್ಲಿದ್ದ ದಾಖಲೆಯನ್ನು ಮೀರಿದರು. ಬೂಮ್ರಾ ಏಕದಿನದಲ್ಲಿ ಭಾರತದ ಪರವಾಗಿ 153.36 ಕಿಮೀ ವೇಗದಲ್ಲಿ ಚೆಂಡೆಸೆದ ಮೊದಲಿಗರಾಗಿದ್ದರು.

ಇದಕ್ಕೂ ಮೊದಲು ಜಮ್ಮು ಕಾಶ್ಮೀರದ ಕುವರ, ಶ್ರೀಲಂಕಾ ಎದುರಿನ ಮೊದಲ ಟಿ20 ಪಂದ್ಯದಲ್ಲಿ 155 ಕಿಮೀ ವೇಗದಲ್ಲಿ ಚೆಂಡನ್ನು ಎಸೆದಿದ್ದರು. ಕಳೆದ ವರ್ಷದ ಐಪಿಎಲ್​ ಪಂದ್ಯವೊಂದರಲ್ಲಿ 156.9 ಕಿಮೀ ವೇಗದಲ್ಲಿ ಬೌಲ್​ ಮಾಡಿ ದಾಖಲೆ ನಿರ್ಮಿಸಿದ್ದಾರೆ. ಇನ್ನು, ನಿನ್ನೆಯ ಪಂದ್ಯದಲ್ಲಿ ಉಮ್ರಾನ್​ ಮಲಿಕ್ 8 ಓವರ್‌ಗಳಲ್ಲಿ​ 57 ರನ್​ ಬಿಟ್ಟುಕೊಟ್ಟು 3 ವಿಕೆಟ್​ ಗಳಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತಿ ವೇಗದಲ್ಲಿ ಚೆಂಡೆಸೆದ ದಾಖಲೆ ಪಾಕಿಸ್ತಾನದ ಮಾಜಿ ದೈತ್ಯ ವೇಗಿ ಶೋಯೆಬ್​ ಅಖ್ತರ್​ ಹೆಸರಲ್ಲಿದೆ. ಅಖ್ತರ್​ 161.3 KMPH ವೇಗದಲ್ಲಿ ಬೌಲ್​ ಮಾಡಿದ್ದು, ಈವರೆಗೂ ಯಾರೂ ಮುಟ್ಟಲಾಗದ ದಾಖಲೆಯಾಗಿಯೇ ಉಳಿದಿದೆ.

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

3 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

3 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

4 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

4 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

4 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

4 hours ago