ಕ್ರೀಡೆ

ಭಾರತೀಯ ಕ್ರಿಕೆಟ್‌ ಇತಿಹಾಸದಲ್ಲಿಅತ್ಯಂತ ವೇಗದ ಬೌಲಿಂಗ್‌ ಮಾಡಿದ ಉಮ್ರಾನ್​ ಮಲಿಕ್​ !

ಗುವಾಹಟಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)​ ಮೂಲಕ ಬೆಳಕಿಗೆ ಬಂದ ಪ್ರತಿಭೆ, ಜಮ್ಮು ಕಾಶ್ಮೀರದ ಉಮ್ರಾನ್​ ಮಲಿಕ್ ಸದ್ಯ ಭಾರತದ ಭರವಸೆಯ ಆಟಗಾರ. ತಮ್ಮ ಬೆಂಕಿ ಚೆಂಡಿನ ವೇಗದಿಂದಲೇ ಗುರುತಿಸಿಕೊಂಡಿರುವ ಮಲಿಕ್​, ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ತಮ್ಮದೇ ವೇಗದ ಬೌಲಿಂಗ್​ ದಾಖಲೆಯನ್ನು ಪುಡಿಗಟ್ಟಿದ್ದಾರೆ. 156 ಕಿಮೀ ವೇಗದಲ್ಲಿ ಚೆಂಡೆಸೆದ ಭಾರತದ ವೇಗಿ ಎಂಬ ದಾಖಲೆಗಳ ಪುಟ ಸೇರಿದರು.ನಿನ್ನೆ ನಡೆದ ಪಂದ್ಯದಲ್ಲಿ ಉಮ್ರಾನ್‌ ಪೌರುಷ: ಭಾರತದ 23 ವರ್ಷದ ಯುವವೇಗಿ ಲಂಕಾ ಎದುರು ತಮ್ಮ ತೋಳ್ಬಲ ಪ್ರದರ್ಶನ ಮಾಡಿದರು. 14ನೇ ಓವರ್​ನಲ್ಲಿ 156 ಕಿಮೀ ವೇಗದಲ್ಲಿ ಬೌಲ್​ ಮಾಡಿದರು. ಈ ಮೂಲಕ ಜಸ್ಪ್ರೀತ್​ ಬೂಮ್ರಾ ಹೆಸರಲ್ಲಿದ್ದ ದಾಖಲೆಯನ್ನು ಮೀರಿದರು. ಬೂಮ್ರಾ ಏಕದಿನದಲ್ಲಿ ಭಾರತದ ಪರವಾಗಿ 153.36 ಕಿಮೀ ವೇಗದಲ್ಲಿ ಚೆಂಡೆಸೆದ ಮೊದಲಿಗರಾಗಿದ್ದರು.

ಇದಕ್ಕೂ ಮೊದಲು ಜಮ್ಮು ಕಾಶ್ಮೀರದ ಕುವರ, ಶ್ರೀಲಂಕಾ ಎದುರಿನ ಮೊದಲ ಟಿ20 ಪಂದ್ಯದಲ್ಲಿ 155 ಕಿಮೀ ವೇಗದಲ್ಲಿ ಚೆಂಡನ್ನು ಎಸೆದಿದ್ದರು. ಕಳೆದ ವರ್ಷದ ಐಪಿಎಲ್​ ಪಂದ್ಯವೊಂದರಲ್ಲಿ 156.9 ಕಿಮೀ ವೇಗದಲ್ಲಿ ಬೌಲ್​ ಮಾಡಿ ದಾಖಲೆ ನಿರ್ಮಿಸಿದ್ದಾರೆ. ಇನ್ನು, ನಿನ್ನೆಯ ಪಂದ್ಯದಲ್ಲಿ ಉಮ್ರಾನ್​ ಮಲಿಕ್ 8 ಓವರ್‌ಗಳಲ್ಲಿ​ 57 ರನ್​ ಬಿಟ್ಟುಕೊಟ್ಟು 3 ವಿಕೆಟ್​ ಗಳಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತಿ ವೇಗದಲ್ಲಿ ಚೆಂಡೆಸೆದ ದಾಖಲೆ ಪಾಕಿಸ್ತಾನದ ಮಾಜಿ ದೈತ್ಯ ವೇಗಿ ಶೋಯೆಬ್​ ಅಖ್ತರ್​ ಹೆಸರಲ್ಲಿದೆ. ಅಖ್ತರ್​ 161.3 KMPH ವೇಗದಲ್ಲಿ ಬೌಲ್​ ಮಾಡಿದ್ದು, ಈವರೆಗೂ ಯಾರೂ ಮುಟ್ಟಲಾಗದ ದಾಖಲೆಯಾಗಿಯೇ ಉಳಿದಿದೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

3 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

3 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

4 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

6 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

9 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

9 hours ago