ಕ್ರೀಡೆ

Under 19‌ ODI worldcup: ಇಂದಿನಿಂದ ಟೀಂ ಇಂಡಿಯಾ ಅಭಿಯಾನ ಆರಂಭ

ಬ್ಲೋಮ್‌ಫಾಂಟೈನ್: ಐದು ಬಾರಿಯ ವಿಶ್ವ ಚಾಂಪಿಯನ್‌ ಭಾರತ ತಂಡ, ಅಂಡರ್‌-19 ವಿಶ್ವಕಪ್‌ ಟೂರ್ನಿಯಲ್ಲಿ ಇಂದು ಮೊದಲ ಪಂದ್ಯ ಆಡಲಿದೆ. ಇಲ್ಲಿನ ಬ್ಲೋಮ್‌ಫಾಂಟೈನ್‌ನ ಮನ್ಗುನ್ಯಾಗ್ ಓವಲ್ ಮೈದಾನದಲ್ಲಿ ಬಾಂಗ್ಲಾದೇಶ ತಂಡವನ್ನು ಟೀಂ ಇಂಡಿಯಾ ಎದುರಿಸಲಿದೆ.‌

ಈ ಪಂದ್ಯವು ಭಾರತೀಯ ಕಾಲಮಾನ ಮದ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಉದಯ್ ಸಹರನ್ ನಾಯಕತ್ವದಲ್ಲಿ ಟೀಂ ಇಂಡಿಯಾ ಇಂದು ಕಣಕ್ಕಿಳಿಯಲಿದ್ದು, ಆರನೇ ಪ್ರಶಸ್ತಿಯತ್ತ ಚಿತ್ತ ನೆಟ್ಟಿದೆ. 2022 ರಲ್ಲಿ ಯಶ್ ಧುಲ್ ನಾಯಕತ್ವದಲ್ಲಿ ಭಾರತವು ದಾಖಲೆಯ 5 ನೇ ಬಾರಿಗೆ ಟ್ರೋಫಿ ಗೆಲ್ಲುವ ಮೂಲಕ ವಿಶ್ವ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

ಪುರುಷರ 19 ವರ್ಷದೊಳಗಿನವರ ವಿಶ್ವಕಪ್‌ ಟೂರ್ನಿ ಜನವರಿ 19 ರಿಂದ ಆರಂಭವಾಗಿದ್ದು, ದಕ್ಷಿಣ ಆಫ್ರಿಕಾ ಈ ಟೂರ್ನಿಯ ಆತಿಥ್ಯ ವಹಿಸಿದೆ. ವಿಶ್ವಕಪ್‌ ಉದ್ಘಾಟನಾ ಪಂದ್ಯದಲ್ಲಿ ಅಮೆಕರಿಕಾ ವಿರುದ್ಧ ಐರ್ಲೆಂಡ್ 7 ವಿಕೆಟ್​ಗಳಿಂದ ಜಯಿಸಿದರೆ, ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆಫ್ರಿಕಾ 31 ರನ್​ಗಳ ಜಯಗಳಿಸಿ ಶುಭಾರಂಭ ಮಾಡಿದೆ.

ಇಂದು (ಜನವರಿ 20) ಮೂರು ಪಂದ್ಯಗಳು ನಡೆಯಲಿವೆ. ಮೊದಲಿಗೆ ಭಾರತ ಹಾಗೂ ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ನಂತರ ಸ್ಕಾಟ್ಲೆಂಡ್-ಇಂಗ್ಲೆಂಡ್ ಮತ್ತು ಪಾಕಿಸ್ತಾನ-ಅಫ್ಘಾನಿಸ್ತಾನ ಗೆಲುವಿಗಾಗಿ ಸೆಣೆಸಾಟ ನಡೆಸಲಿದೆ.

ಭಾರತ ಮತ್ತು ಬಾಂಗ್ಲಾ ನಡುವಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ವೀಕ್ಷಣೆ ಮಾಡಬಹುದು.

ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್‌ ಲಭ್ಯವಿರುತ್ತವೆ.

ಟೀಂ ಇಂಡಿಯಾ (ಅಂಡರ್‌-19): ಅರ್ಶಿನ್ ಕುಲಕರ್ಣಿ, ಆದರ್ಶ್ ಸಿಂಗ್, ರುದ್ರ ಮಯೂರ್ ಪಟೇಲ್, ಸಚಿನ್ ದಾಸ್, ಪ್ರಿಯಾಂಶು ಮೊಲಿಯಾ, ಮುಶೀರ್ ಖಾನ್, ಉದಯ್ ಸಹರನ್ (ನಾಯಕ), ಅರವೆಲ್ಲಿ ಅವ್ನಿಶ್ ರಾವ್ (ವಿಕೆಟ್ ಕೀಪರ್), ಸೌಮ್ಯ ಕುಮಾರ್ ಪಾಂಡೆ (ಉಪನಾಯಕ), ಮುರುಗನ್ ಅಭಿಷೇಕ್, ಇನೇಶ್ ಮಹಾಜನ (ವಿಕೆಟ್ ಕೀಪರ್), ಧನುಷ್ ಗೌಡ, ಆರಾಧ್ಯ ಶುಕ್ಲಾ, ರಾಜ್ ಲಿಂಬಾನಿ, ನಮನ್ ತಿವಾರಿ.

ಬಾಂಗ್ಲಾದೇಶ ತಂಡ (ಅಂಡರ್‌-19): ಮಹ್ಫುಜುರ್ ರಹಮಾನ್ ರಬ್ಬಿ (ನಾಯಕ), ಆಶಿಕುರ್ ರೆಹಮಾನ್ ಶಿಬ್ಲಿ, ಜಿಶಾನ್ ಆಲಂ, ಚೌಧರಿ ಮೊಹಮ್ಮದ್ ರಿಜ್ವಾನ್, ಆದಿಲ್ ಬಿನ್ ಸಿದ್ದಿಕ್, ಮೊಹಮ್ಮದ್ ಅಶ್ರಫುಜ್ಜಮಾನ್ ಬೊರಾನೊ, ಅರಿಫುಲ್ ಇಸ್ಲಾಂ, ಶಿಹಾಬ್ ಜೇಮ್ಸ್, ಅಹ್ರಾರ್ ಅಮೀನ್ (ಉಪನಾಯಕ), ಶೇಖ್, ಪರ್ವೇಜ್ ಉಜಿ ರೋಹನತ್ ದೌಲಾ.ಬೋರ್ಸನ್, ಇಕ್ಬಾಲ್ ಹಸನ್ ಎಮನ್, ವಾಸಿ ಸಿದ್ದಿಕಿ, ಮರೂಫ್ ಮೃಧಾ.

andolanait

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

3 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

3 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

4 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

4 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

5 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

6 hours ago