ಕ್ರೀಡೆ

Under 19‌ ODI worldcup: ಇಂದಿನಿಂದ ಟೀಂ ಇಂಡಿಯಾ ಅಭಿಯಾನ ಆರಂಭ

ಬ್ಲೋಮ್‌ಫಾಂಟೈನ್: ಐದು ಬಾರಿಯ ವಿಶ್ವ ಚಾಂಪಿಯನ್‌ ಭಾರತ ತಂಡ, ಅಂಡರ್‌-19 ವಿಶ್ವಕಪ್‌ ಟೂರ್ನಿಯಲ್ಲಿ ಇಂದು ಮೊದಲ ಪಂದ್ಯ ಆಡಲಿದೆ. ಇಲ್ಲಿನ ಬ್ಲೋಮ್‌ಫಾಂಟೈನ್‌ನ ಮನ್ಗುನ್ಯಾಗ್ ಓವಲ್ ಮೈದಾನದಲ್ಲಿ ಬಾಂಗ್ಲಾದೇಶ ತಂಡವನ್ನು ಟೀಂ ಇಂಡಿಯಾ ಎದುರಿಸಲಿದೆ.‌

ಈ ಪಂದ್ಯವು ಭಾರತೀಯ ಕಾಲಮಾನ ಮದ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಉದಯ್ ಸಹರನ್ ನಾಯಕತ್ವದಲ್ಲಿ ಟೀಂ ಇಂಡಿಯಾ ಇಂದು ಕಣಕ್ಕಿಳಿಯಲಿದ್ದು, ಆರನೇ ಪ್ರಶಸ್ತಿಯತ್ತ ಚಿತ್ತ ನೆಟ್ಟಿದೆ. 2022 ರಲ್ಲಿ ಯಶ್ ಧುಲ್ ನಾಯಕತ್ವದಲ್ಲಿ ಭಾರತವು ದಾಖಲೆಯ 5 ನೇ ಬಾರಿಗೆ ಟ್ರೋಫಿ ಗೆಲ್ಲುವ ಮೂಲಕ ವಿಶ್ವ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

ಪುರುಷರ 19 ವರ್ಷದೊಳಗಿನವರ ವಿಶ್ವಕಪ್‌ ಟೂರ್ನಿ ಜನವರಿ 19 ರಿಂದ ಆರಂಭವಾಗಿದ್ದು, ದಕ್ಷಿಣ ಆಫ್ರಿಕಾ ಈ ಟೂರ್ನಿಯ ಆತಿಥ್ಯ ವಹಿಸಿದೆ. ವಿಶ್ವಕಪ್‌ ಉದ್ಘಾಟನಾ ಪಂದ್ಯದಲ್ಲಿ ಅಮೆಕರಿಕಾ ವಿರುದ್ಧ ಐರ್ಲೆಂಡ್ 7 ವಿಕೆಟ್​ಗಳಿಂದ ಜಯಿಸಿದರೆ, ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆಫ್ರಿಕಾ 31 ರನ್​ಗಳ ಜಯಗಳಿಸಿ ಶುಭಾರಂಭ ಮಾಡಿದೆ.

ಇಂದು (ಜನವರಿ 20) ಮೂರು ಪಂದ್ಯಗಳು ನಡೆಯಲಿವೆ. ಮೊದಲಿಗೆ ಭಾರತ ಹಾಗೂ ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ನಂತರ ಸ್ಕಾಟ್ಲೆಂಡ್-ಇಂಗ್ಲೆಂಡ್ ಮತ್ತು ಪಾಕಿಸ್ತಾನ-ಅಫ್ಘಾನಿಸ್ತಾನ ಗೆಲುವಿಗಾಗಿ ಸೆಣೆಸಾಟ ನಡೆಸಲಿದೆ.

ಭಾರತ ಮತ್ತು ಬಾಂಗ್ಲಾ ನಡುವಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ವೀಕ್ಷಣೆ ಮಾಡಬಹುದು.

ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್‌ ಲಭ್ಯವಿರುತ್ತವೆ.

ಟೀಂ ಇಂಡಿಯಾ (ಅಂಡರ್‌-19): ಅರ್ಶಿನ್ ಕುಲಕರ್ಣಿ, ಆದರ್ಶ್ ಸಿಂಗ್, ರುದ್ರ ಮಯೂರ್ ಪಟೇಲ್, ಸಚಿನ್ ದಾಸ್, ಪ್ರಿಯಾಂಶು ಮೊಲಿಯಾ, ಮುಶೀರ್ ಖಾನ್, ಉದಯ್ ಸಹರನ್ (ನಾಯಕ), ಅರವೆಲ್ಲಿ ಅವ್ನಿಶ್ ರಾವ್ (ವಿಕೆಟ್ ಕೀಪರ್), ಸೌಮ್ಯ ಕುಮಾರ್ ಪಾಂಡೆ (ಉಪನಾಯಕ), ಮುರುಗನ್ ಅಭಿಷೇಕ್, ಇನೇಶ್ ಮಹಾಜನ (ವಿಕೆಟ್ ಕೀಪರ್), ಧನುಷ್ ಗೌಡ, ಆರಾಧ್ಯ ಶುಕ್ಲಾ, ರಾಜ್ ಲಿಂಬಾನಿ, ನಮನ್ ತಿವಾರಿ.

ಬಾಂಗ್ಲಾದೇಶ ತಂಡ (ಅಂಡರ್‌-19): ಮಹ್ಫುಜುರ್ ರಹಮಾನ್ ರಬ್ಬಿ (ನಾಯಕ), ಆಶಿಕುರ್ ರೆಹಮಾನ್ ಶಿಬ್ಲಿ, ಜಿಶಾನ್ ಆಲಂ, ಚೌಧರಿ ಮೊಹಮ್ಮದ್ ರಿಜ್ವಾನ್, ಆದಿಲ್ ಬಿನ್ ಸಿದ್ದಿಕ್, ಮೊಹಮ್ಮದ್ ಅಶ್ರಫುಜ್ಜಮಾನ್ ಬೊರಾನೊ, ಅರಿಫುಲ್ ಇಸ್ಲಾಂ, ಶಿಹಾಬ್ ಜೇಮ್ಸ್, ಅಹ್ರಾರ್ ಅಮೀನ್ (ಉಪನಾಯಕ), ಶೇಖ್, ಪರ್ವೇಜ್ ಉಜಿ ರೋಹನತ್ ದೌಲಾ.ಬೋರ್ಸನ್, ಇಕ್ಬಾಲ್ ಹಸನ್ ಎಮನ್, ವಾಸಿ ಸಿದ್ದಿಕಿ, ಮರೂಫ್ ಮೃಧಾ.

andolanait

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

3 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

4 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

4 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

5 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

10 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

10 hours ago