ಕ್ರೀಡೆ

Under 19‌ ODI worldcup: ಇಂದಿನಿಂದ ಟೀಂ ಇಂಡಿಯಾ ಅಭಿಯಾನ ಆರಂಭ

ಬ್ಲೋಮ್‌ಫಾಂಟೈನ್: ಐದು ಬಾರಿಯ ವಿಶ್ವ ಚಾಂಪಿಯನ್‌ ಭಾರತ ತಂಡ, ಅಂಡರ್‌-19 ವಿಶ್ವಕಪ್‌ ಟೂರ್ನಿಯಲ್ಲಿ ಇಂದು ಮೊದಲ ಪಂದ್ಯ ಆಡಲಿದೆ. ಇಲ್ಲಿನ ಬ್ಲೋಮ್‌ಫಾಂಟೈನ್‌ನ ಮನ್ಗುನ್ಯಾಗ್ ಓವಲ್ ಮೈದಾನದಲ್ಲಿ ಬಾಂಗ್ಲಾದೇಶ ತಂಡವನ್ನು ಟೀಂ ಇಂಡಿಯಾ ಎದುರಿಸಲಿದೆ.‌

ಈ ಪಂದ್ಯವು ಭಾರತೀಯ ಕಾಲಮಾನ ಮದ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಉದಯ್ ಸಹರನ್ ನಾಯಕತ್ವದಲ್ಲಿ ಟೀಂ ಇಂಡಿಯಾ ಇಂದು ಕಣಕ್ಕಿಳಿಯಲಿದ್ದು, ಆರನೇ ಪ್ರಶಸ್ತಿಯತ್ತ ಚಿತ್ತ ನೆಟ್ಟಿದೆ. 2022 ರಲ್ಲಿ ಯಶ್ ಧುಲ್ ನಾಯಕತ್ವದಲ್ಲಿ ಭಾರತವು ದಾಖಲೆಯ 5 ನೇ ಬಾರಿಗೆ ಟ್ರೋಫಿ ಗೆಲ್ಲುವ ಮೂಲಕ ವಿಶ್ವ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

ಪುರುಷರ 19 ವರ್ಷದೊಳಗಿನವರ ವಿಶ್ವಕಪ್‌ ಟೂರ್ನಿ ಜನವರಿ 19 ರಿಂದ ಆರಂಭವಾಗಿದ್ದು, ದಕ್ಷಿಣ ಆಫ್ರಿಕಾ ಈ ಟೂರ್ನಿಯ ಆತಿಥ್ಯ ವಹಿಸಿದೆ. ವಿಶ್ವಕಪ್‌ ಉದ್ಘಾಟನಾ ಪಂದ್ಯದಲ್ಲಿ ಅಮೆಕರಿಕಾ ವಿರುದ್ಧ ಐರ್ಲೆಂಡ್ 7 ವಿಕೆಟ್​ಗಳಿಂದ ಜಯಿಸಿದರೆ, ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆಫ್ರಿಕಾ 31 ರನ್​ಗಳ ಜಯಗಳಿಸಿ ಶುಭಾರಂಭ ಮಾಡಿದೆ.

ಇಂದು (ಜನವರಿ 20) ಮೂರು ಪಂದ್ಯಗಳು ನಡೆಯಲಿವೆ. ಮೊದಲಿಗೆ ಭಾರತ ಹಾಗೂ ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ನಂತರ ಸ್ಕಾಟ್ಲೆಂಡ್-ಇಂಗ್ಲೆಂಡ್ ಮತ್ತು ಪಾಕಿಸ್ತಾನ-ಅಫ್ಘಾನಿಸ್ತಾನ ಗೆಲುವಿಗಾಗಿ ಸೆಣೆಸಾಟ ನಡೆಸಲಿದೆ.

ಭಾರತ ಮತ್ತು ಬಾಂಗ್ಲಾ ನಡುವಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ವೀಕ್ಷಣೆ ಮಾಡಬಹುದು.

ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್‌ ಲಭ್ಯವಿರುತ್ತವೆ.

ಟೀಂ ಇಂಡಿಯಾ (ಅಂಡರ್‌-19): ಅರ್ಶಿನ್ ಕುಲಕರ್ಣಿ, ಆದರ್ಶ್ ಸಿಂಗ್, ರುದ್ರ ಮಯೂರ್ ಪಟೇಲ್, ಸಚಿನ್ ದಾಸ್, ಪ್ರಿಯಾಂಶು ಮೊಲಿಯಾ, ಮುಶೀರ್ ಖಾನ್, ಉದಯ್ ಸಹರನ್ (ನಾಯಕ), ಅರವೆಲ್ಲಿ ಅವ್ನಿಶ್ ರಾವ್ (ವಿಕೆಟ್ ಕೀಪರ್), ಸೌಮ್ಯ ಕುಮಾರ್ ಪಾಂಡೆ (ಉಪನಾಯಕ), ಮುರುಗನ್ ಅಭಿಷೇಕ್, ಇನೇಶ್ ಮಹಾಜನ (ವಿಕೆಟ್ ಕೀಪರ್), ಧನುಷ್ ಗೌಡ, ಆರಾಧ್ಯ ಶುಕ್ಲಾ, ರಾಜ್ ಲಿಂಬಾನಿ, ನಮನ್ ತಿವಾರಿ.

ಬಾಂಗ್ಲಾದೇಶ ತಂಡ (ಅಂಡರ್‌-19): ಮಹ್ಫುಜುರ್ ರಹಮಾನ್ ರಬ್ಬಿ (ನಾಯಕ), ಆಶಿಕುರ್ ರೆಹಮಾನ್ ಶಿಬ್ಲಿ, ಜಿಶಾನ್ ಆಲಂ, ಚೌಧರಿ ಮೊಹಮ್ಮದ್ ರಿಜ್ವಾನ್, ಆದಿಲ್ ಬಿನ್ ಸಿದ್ದಿಕ್, ಮೊಹಮ್ಮದ್ ಅಶ್ರಫುಜ್ಜಮಾನ್ ಬೊರಾನೊ, ಅರಿಫುಲ್ ಇಸ್ಲಾಂ, ಶಿಹಾಬ್ ಜೇಮ್ಸ್, ಅಹ್ರಾರ್ ಅಮೀನ್ (ಉಪನಾಯಕ), ಶೇಖ್, ಪರ್ವೇಜ್ ಉಜಿ ರೋಹನತ್ ದೌಲಾ.ಬೋರ್ಸನ್, ಇಕ್ಬಾಲ್ ಹಸನ್ ಎಮನ್, ವಾಸಿ ಸಿದ್ದಿಕಿ, ಮರೂಫ್ ಮೃಧಾ.

andolanait

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

3 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

3 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

8 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

8 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

8 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

8 hours ago