ಕ್ರೀಡೆ

Under 19 Worldcup: ಸೂಪರ್6 ಹಂತದ ವೇಳಾಪಟ್ಟಿ; ಭಾರತದ ಎದುರಾಳಿಗಳಾರು?

ದಕ್ಷಿಣ ಆಫ್ರಿಕಾ ನೆಲದಲ್ಲಿ ನಡೆಯುತ್ತಿರುವ ಅಂಡರ್19 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಲೀಗ್‌ ಹಂತ ಮುಕ್ತಾಯಗೊಂಡಿದ್ದು, ನಾಳೆಯಿಂದ ( ಜನವರಿ 30 ) ಸೂಪರ್‌ ಸಿಕ್ಸ್‌ ಹಂತದ ಪಂದ್ಯಗಳು ಆರಂಭಗೊಳ್ಳಲಿದೆ.

ಲೀಗ್‌ ಹಂತದಲ್ಲಿದ್ದ 4 ಗುಂಪುಗಳಿಂದ ತಲಾ ಮೂರು ತಂಡಗಳು ಸೂಪರ್6 ಸುತ್ತಿಗೆ ಆಯ್ಕೆಯಾಗಿದ್ದು, ಒಟ್ಟು 12 ತಂಡಗಳು ಪ್ರವೇಶಿಸಿವೆ. ಈ 12 ತಂಡಗಳನ್ನು ಎರಡು ತಂಡಗಳನ್ನಾಗಿ ವಿಭಜಿಸಲಾಗಿದೆ. ಎಲ್ಲಾ ತಂಡಗಳು ತಲಾ ಎರಡು ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದು, ಅಂಕಪಟ್ಟಿಯಲ್ಲಿ ಟಾಪ್‌ ನಾಲ್ಕು ಸ್ಥಾನಗಳನ್ನು ಪಡೆದುಕೊಳ್ಳುವ ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಸೋಲಿಲ್ಲದ ಸರದಾರನಾಗಿರುವ ಟೀಮ್ಇಂಡಿಯಾಗೆ ನ್ಯೂಜಿಲೆಂಡ್‌ ಹಾಗೂ ನೇಪಾಳ ತಂಡಗಳು ಈ ಸುತ್ತಿನಲ್ಲಿ ಎದುರಾಳಿಗಳಾಗಿವೆ.

ಸೂಪರ್‌ ಸಿಕ್ಸ್‌ ಹಂತದ ಯಾವ ಗುಂಪಿನಲ್ಲಿ ಯಾವ ತಂಡಗಳಿವೆ ಎಂಬ ಮಾಹಿತಿ ಹಾಗೂ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ..

ಗುಂಪು 1 : ಭಾರತ, ನ್ಯೂಜಿಲೆಂಡ್, ನೇಪಾಳ, ಐರ್ಲೆಂಡ್, ಬಾಂಗ್ಲಾದೇಶ ಹಾಗೂ ಪಾಕಿಸ್ತಾನ
ಗುಂಪು 2: ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್, ಶ್ರೀಲಂಕಾ, ಜಿಂಬಾಬ್ವೆ ಹಾಗೂ ವೆಸ್ಟ್ಇಂಡೀಸ್

ವೇಳಾಪಟ್ಟಿ:
ಜನವರಿ 30:
ಭಾರತ vs ನ್ಯೂಜಿಲೆಂಡ್ ಸೂಪರ್ ಸಿಕ್ಸ್, ಗುಂಪು 1
ಶ್ರೀಲಂಕಾ vs ವೆಸ್ಟ್ ಇಂಡೀಸ್ ಸೂಪರ್ ಸಿಕ್ಸ್, ಗುಂಪು 2
ಪಾಕಿಸ್ತಾನ vs ಐರ್ಲೆಂಡ್ ಸೂಪರ್ ಸಿಕ್ಸ್, ಗುಂಪು 1

ಜನವರಿ 31:
ಆಸ್ಟ್ರೇಲಿಯಾ vs ಇಂಗ್ಲೆಂಡ್ ಸೂಪರ್ ಸಿಕ್ಸ್, ಗುಂಪು 2
ನೇಪಾಳ vs ಬಾಂಗ್ಲಾದೇಶ ಸೂಪರ್ ಸಿಕ್ಸ್, ಗುಂಪು 1
ಜಿಂಬಾಬ್ವೆ vs ದಕ್ಷಿಣ ಆಫ್ರಿಕಾ ಸೂಪರ್ ಸಿಕ್ಸ್, ಗುಂಪು 2

ಫೆಬ್ರವರಿ 2:
ದಕ್ಷಿಣ ಆಫ್ರಿಕಾ vs ಶ್ರೀಲಂಕಾ ಸೂಪರ್ ಸಿಕ್ಸ್, ಗುಂಪು 2
ವೆಸ್ಟ್ ಇಂಡೀಸ್ vs ಆಸ್ಟ್ರೇಲಿಯಾ ಸೂಪರ್ ಸಿಕ್ಸ್, ಗುಂಪು 2
ಭಾರತ vs ನೇಪಾಳ ಸೂಪರ್ ಸಿಕ್ಸ್, ಗುಂಪು 1

ಫೆಬ್ರವರಿ 3:
ಪಾಕಿಸ್ತಾನ vs ಬಾಂಗ್ಲಾದೇಶ ಸೂಪರ್ ಸಿಕ್ಸ್, ಗುಂಪು 1
ಇಂಗ್ಲೆಂಡ್ vs ಜಿಂಬಾಬ್ವೆ ಸೂಪರ್ ಸಿಕ್ಸ್, ಗುಂಪು 2
ನ್ಯೂಜಿಲೆಂಡ್ vs ಐರ್ಲೆಂಡ್ ಸೂಪರ್ ಸಿಕ್ಸ್, ಗುಂಪು 1

andolana

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

2 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

4 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

4 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

5 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

9 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

9 hours ago