Categories: ಕ್ರೀಡೆ

ಐಪಿಎಲ್‌ 2025: ಮೆಗಾ ಹರಾಜಿನಲ್ಲಿ ವಿದೇಶಿ ಆಟಗಾರನಾಗಿ ಭಾರತದ ಉನ್ಮುಕ್ತ್ ಚಾಂದ್‌ ಎಂಟ್ರಿ

ಜಗತ್ತಿನ ಶ್ರೀಮಂತ ಕೀಡೆಗಳಲ್ಲಿ ಕ್ರಿಕೆಟ್‌ ಕೂಡ ಒಂದಾಗಿದೆ. ಡೊಮೆಸ್ಟಿಕ್‌ ಮಾದರಿಯ ಕ್ರಿಕೆಟ್‌ನಲ್ಲಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪ್ರಪಂಚದಾದ್ಯಂತ ಜನಪ್ರಿಯವಾಗಿದ್ದು, ಈ ಬಾರಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಸೀಸನ್‌- 18ರ ಸಿದ್ದತೆಯು ಭರದಿಂದ ಸಾಗಿದೆ.

ಐಪಿಎಲ್‌-2025ರ ಮೆಗಾ ಹರಾಜು ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯಲಿದ್ದು, ಈ ಹರಾಜು ಹಲವು ವಿಶೇಷತೆಗಳಿಂದ ಕೂಡಿದೆ. ಭಾರತೀಯ ಆಟಗಾರ ಉನ್ಮುಕ್ತ್‌ ಚಾಂದ್‌ ವಿದೇಶಿ ಆಟಗಾರನಾಗಿ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿರುವುದು ಅತ್ಯಂತ ವಿಶೇಷವಾಗಿದೆ.

ಐಪಿಎಲ್‌ ಹರಾಜಿನಲ್ಲಿ ಒಟ್ಟು 574 ಆಟಗಾರರ ಹೆಸರಿದ್ದು, ವಿದೇಶಿ ಆಟಗಾರರ ಪಟ್ಟಿಯಲ್ಲಿ ಬ್ಯಾಟರ್‌ ಉನ್ಮುಕ್ತ್‌ ಚಾಂದ್‌ ಅವರ ಹೆಸರಿದೆ.

2012ರಲ್ಲಿ ಅಂಡರ್‌-19 ವಿಶ್ವಕಪ್‌ ಗೆದ್ದ ಭಾರತ ತಂಡದ ನಾಯಕರಾಗಿದ್ದ ಉನ್ಮುಕ್ತ್‌ ಚಾಂದ್‌ 2020ರವರೆಗೆ ಭಾರತದ ಆಟಗಾರರಾಗಿದ್ದರು. ಭಾರತ ತಂಡದಲ್ಲಿ ಸ್ಥಾನ ಪಡೆಯಲು ಪೈಪೋಟಿ ಶುರುವಾದ ಕಾರಣ 2021ರಲ್ಲಿ ಭಾರತೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ ಯುಎಸ್‌ಎ ಕ್ರಿಕೆಟ್‌ ಟೀಮ್‌ನಲ್ಲಿ ಸೇರ್ಪಡೆಗೊಂಡರು.

ಇದಕ್ಕೂ ಮುನ್ನ ಐಪಿಎಲ್‌ನಲ್ಲಿ (2011, 2012 ಮತ್ತು 2013) ಡೆಲ್ಲಿ ಡೇರ್‌ ಡೆವಿಲ್ಸ್‌ ಪರ ಮೂರು ವರ್ಷಗಳ ಕಾಲ ಆಡಿದ್ದರು. ನಂತರ ರಾಜಸ್ಥಾನ ರಾಯಲ್ಸ್‌, ಅಲ್ಲದೇ 2015ರಲ್ಲಿ ಚಾಂಪಿಯನ್‌ ಆದ ಮುಂಬೈ ತಂಡದ ಭಾಗವಾಗಿದ್ದರು.

 

ಆಂದೋಲನ ಡೆಸ್ಕ್

Recent Posts

ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡ ಮೈಸೂರಿಗರು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್‌ ಬ್ಯಾಂಡ್‌ನ ಸದ್ದಿನೊಂದಿಗೆ…

3 hours ago

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…

4 hours ago

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…

4 hours ago

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…

4 hours ago

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

8 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

8 hours ago