Categories: ಕ್ರೀಡೆ

ಐಪಿಎಲ್‌ 2025: ಮೆಗಾ ಹರಾಜಿನಲ್ಲಿ ವಿದೇಶಿ ಆಟಗಾರನಾಗಿ ಭಾರತದ ಉನ್ಮುಕ್ತ್ ಚಾಂದ್‌ ಎಂಟ್ರಿ

ಜಗತ್ತಿನ ಶ್ರೀಮಂತ ಕೀಡೆಗಳಲ್ಲಿ ಕ್ರಿಕೆಟ್‌ ಕೂಡ ಒಂದಾಗಿದೆ. ಡೊಮೆಸ್ಟಿಕ್‌ ಮಾದರಿಯ ಕ್ರಿಕೆಟ್‌ನಲ್ಲಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪ್ರಪಂಚದಾದ್ಯಂತ ಜನಪ್ರಿಯವಾಗಿದ್ದು, ಈ ಬಾರಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಸೀಸನ್‌- 18ರ ಸಿದ್ದತೆಯು ಭರದಿಂದ ಸಾಗಿದೆ.

ಐಪಿಎಲ್‌-2025ರ ಮೆಗಾ ಹರಾಜು ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯಲಿದ್ದು, ಈ ಹರಾಜು ಹಲವು ವಿಶೇಷತೆಗಳಿಂದ ಕೂಡಿದೆ. ಭಾರತೀಯ ಆಟಗಾರ ಉನ್ಮುಕ್ತ್‌ ಚಾಂದ್‌ ವಿದೇಶಿ ಆಟಗಾರನಾಗಿ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿರುವುದು ಅತ್ಯಂತ ವಿಶೇಷವಾಗಿದೆ.

ಐಪಿಎಲ್‌ ಹರಾಜಿನಲ್ಲಿ ಒಟ್ಟು 574 ಆಟಗಾರರ ಹೆಸರಿದ್ದು, ವಿದೇಶಿ ಆಟಗಾರರ ಪಟ್ಟಿಯಲ್ಲಿ ಬ್ಯಾಟರ್‌ ಉನ್ಮುಕ್ತ್‌ ಚಾಂದ್‌ ಅವರ ಹೆಸರಿದೆ.

2012ರಲ್ಲಿ ಅಂಡರ್‌-19 ವಿಶ್ವಕಪ್‌ ಗೆದ್ದ ಭಾರತ ತಂಡದ ನಾಯಕರಾಗಿದ್ದ ಉನ್ಮುಕ್ತ್‌ ಚಾಂದ್‌ 2020ರವರೆಗೆ ಭಾರತದ ಆಟಗಾರರಾಗಿದ್ದರು. ಭಾರತ ತಂಡದಲ್ಲಿ ಸ್ಥಾನ ಪಡೆಯಲು ಪೈಪೋಟಿ ಶುರುವಾದ ಕಾರಣ 2021ರಲ್ಲಿ ಭಾರತೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ ಯುಎಸ್‌ಎ ಕ್ರಿಕೆಟ್‌ ಟೀಮ್‌ನಲ್ಲಿ ಸೇರ್ಪಡೆಗೊಂಡರು.

ಇದಕ್ಕೂ ಮುನ್ನ ಐಪಿಎಲ್‌ನಲ್ಲಿ (2011, 2012 ಮತ್ತು 2013) ಡೆಲ್ಲಿ ಡೇರ್‌ ಡೆವಿಲ್ಸ್‌ ಪರ ಮೂರು ವರ್ಷಗಳ ಕಾಲ ಆಡಿದ್ದರು. ನಂತರ ರಾಜಸ್ಥಾನ ರಾಯಲ್ಸ್‌, ಅಲ್ಲದೇ 2015ರಲ್ಲಿ ಚಾಂಪಿಯನ್‌ ಆದ ಮುಂಬೈ ತಂಡದ ಭಾಗವಾಗಿದ್ದರು.

 

ಆಂದೋಲನ ಡೆಸ್ಕ್

Recent Posts

ಕೆನಡಾದಲ್ಲಿ ಕನ್ನಡಿಗನ ಹತ್ಯೆ ಪ್ರಕರಣ: ಆರೋಪಿ ಭಾವಚಿತ್ರ ಬಿಡುಗಡೆ

ನೆಲಮಂಗಲ: ಕೆನಡಾ ದೇಶದಲ್ಲಿ ಕನ್ನಡಿಗನನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಕೆನಡಾದ ಟೊರಂಟೊ ಪೊಲೀಸರು…

47 mins ago

ಕೊಡಗು ಜಿಲ್ಲೆಯಲ್ಲಿ ಏಪ್ರಿಲ್.‌8ರಿಂದ ಪಾಸ್‌ಪೋರ್ಟ್‌ ಮೇಳ: ಸಂಸದ ಯದುವೀರ್‌ ಒಡೆಯರ್‌ ಮಾಹಿತಿ

ಕೊಡಗು: ಸಂಸದ ಯದುವೀರ್‌ ಕೃಷ್ಣದತತ ಚಾಮರಾಜ ಒಡೆಯರ್‌ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ಪೋರ್ಟ್‌ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ…

1 hour ago

ಇರಾನ್‌ ಸರ್ವೋಚ್ಛ ನಾಯಕನಾಗಿ ಅಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಬಾ ಖಮೇನಿ ಆಯ್ಕೆ.?

ಟೆಹರಾನ್:‌ ಇರಾನ್‌ ಸರ್ವೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರು ಮಗ ಉತ್ತರಾಧಿಕಾಗಲು ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಇರಾನ್‌ನ ಮುಂದಿನ ಸರ್ವೋಚ್ಛ…

1 hour ago

ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಿಗ್‌ ಬಜೆಟ್‌ ಸಿನಿಮಾ ಟಾಕ್ಸಿಕ್‌ ಇರಾನ್-‌ ಇಸ್ರೇಲ್‌ ಯುದ್ಧದ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಮಾರ್ಚ್.‌19ರಂದು ಬಿಡುಗಡೆಯಾಗಬೇಕಿದ್ದ…

2 hours ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ವಿಶೇಷ: ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ಕಂಬ ಪ್ರತಿಷ್ಠಾಪನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ…

3 hours ago

ಹನೂರು| ಚಂಗಡಿ ಗ್ರಾಮದ ಸುತ್ತಮುತ್ತ ಪ್ರತಿನಿತ್ಯ ಹುಲಿ ಓಡಾಟ: ಆತಂಕದಲ್ಲಿ ಸ್ಥಳೀಯರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ…

3 hours ago