Categories: ಕ್ರೀಡೆ

ಐಪಿಎಲ್‌ 2025: ಮೆಗಾ ಹರಾಜಿನಲ್ಲಿ ವಿದೇಶಿ ಆಟಗಾರನಾಗಿ ಭಾರತದ ಉನ್ಮುಕ್ತ್ ಚಾಂದ್‌ ಎಂಟ್ರಿ

ಜಗತ್ತಿನ ಶ್ರೀಮಂತ ಕೀಡೆಗಳಲ್ಲಿ ಕ್ರಿಕೆಟ್‌ ಕೂಡ ಒಂದಾಗಿದೆ. ಡೊಮೆಸ್ಟಿಕ್‌ ಮಾದರಿಯ ಕ್ರಿಕೆಟ್‌ನಲ್ಲಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪ್ರಪಂಚದಾದ್ಯಂತ ಜನಪ್ರಿಯವಾಗಿದ್ದು, ಈ ಬಾರಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಸೀಸನ್‌- 18ರ ಸಿದ್ದತೆಯು ಭರದಿಂದ ಸಾಗಿದೆ.

ಐಪಿಎಲ್‌-2025ರ ಮೆಗಾ ಹರಾಜು ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯಲಿದ್ದು, ಈ ಹರಾಜು ಹಲವು ವಿಶೇಷತೆಗಳಿಂದ ಕೂಡಿದೆ. ಭಾರತೀಯ ಆಟಗಾರ ಉನ್ಮುಕ್ತ್‌ ಚಾಂದ್‌ ವಿದೇಶಿ ಆಟಗಾರನಾಗಿ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿರುವುದು ಅತ್ಯಂತ ವಿಶೇಷವಾಗಿದೆ.

ಐಪಿಎಲ್‌ ಹರಾಜಿನಲ್ಲಿ ಒಟ್ಟು 574 ಆಟಗಾರರ ಹೆಸರಿದ್ದು, ವಿದೇಶಿ ಆಟಗಾರರ ಪಟ್ಟಿಯಲ್ಲಿ ಬ್ಯಾಟರ್‌ ಉನ್ಮುಕ್ತ್‌ ಚಾಂದ್‌ ಅವರ ಹೆಸರಿದೆ.

2012ರಲ್ಲಿ ಅಂಡರ್‌-19 ವಿಶ್ವಕಪ್‌ ಗೆದ್ದ ಭಾರತ ತಂಡದ ನಾಯಕರಾಗಿದ್ದ ಉನ್ಮುಕ್ತ್‌ ಚಾಂದ್‌ 2020ರವರೆಗೆ ಭಾರತದ ಆಟಗಾರರಾಗಿದ್ದರು. ಭಾರತ ತಂಡದಲ್ಲಿ ಸ್ಥಾನ ಪಡೆಯಲು ಪೈಪೋಟಿ ಶುರುವಾದ ಕಾರಣ 2021ರಲ್ಲಿ ಭಾರತೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ ಯುಎಸ್‌ಎ ಕ್ರಿಕೆಟ್‌ ಟೀಮ್‌ನಲ್ಲಿ ಸೇರ್ಪಡೆಗೊಂಡರು.

ಇದಕ್ಕೂ ಮುನ್ನ ಐಪಿಎಲ್‌ನಲ್ಲಿ (2011, 2012 ಮತ್ತು 2013) ಡೆಲ್ಲಿ ಡೇರ್‌ ಡೆವಿಲ್ಸ್‌ ಪರ ಮೂರು ವರ್ಷಗಳ ಕಾಲ ಆಡಿದ್ದರು. ನಂತರ ರಾಜಸ್ಥಾನ ರಾಯಲ್ಸ್‌, ಅಲ್ಲದೇ 2015ರಲ್ಲಿ ಚಾಂಪಿಯನ್‌ ಆದ ಮುಂಬೈ ತಂಡದ ಭಾಗವಾಗಿದ್ದರು.

 

ಆಂದೋಲನ ಡೆಸ್ಕ್

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

11 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

12 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

12 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

14 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

14 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

15 hours ago