Categories: ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ವಿಶ್ವದಾಖಲೆಯ ಶತಕ ಸಿಡಿಸಿದ ಉರ್ವಿನ್

ಇಂದೋರ್: ಗುಜರಾತ್‌ನ‌ 26 ವರ್ಷದ ಕ್ರಿಕೆಟಿಗ ಉರ್ವಿನ್‌ ಪಟೇಲ್‌ನನ್ನು ಈ ಬಾರಿಯ ಐಪಿಎಲ್‌ 2025ರ ಮೆಗಾ ಹರಾಜಿನಲ್ಲಿ ಪ್ರಾಂಚೈಸಿಗಳು ಬಿಡ್‌ ಮಾಡಲು ಹಿಂದೇಟು ಹಾಕಿದ ಬೆನ್ನಲ್ಲೇ, ಅವರು ಟಿ20 ಟೂರ್ನಿಯಲ್ಲಿ ವೇಗದ ಶತಕ ಸಿಡಿಸುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

ದೇಶಿಯ ಟೂರ್ನಿಗಳಲ್ಲಿ ಆಡುತ್ತಿರುವ ಉರ್ವಿನ್‌ ಕಡಿಮೆ ಎಸೆತಗಳಲ್ಲಿ ಶತಕ ದಾಖಲಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಮೊದಲು ರಿಷಬ್‌ ಪಂತ್‌ 2018 ರಲ್ಲಿ ಹಿಮಾಚಲ ಪ್ರದೇಶದ ವಿರುದ್ಧದ ಪಂದ್ಯದಲ್ಲಿ ಕೇವಲ 32 ಎಸೆತಗಳಲ್ಲಿ ಶತಕ ಸಿಡಿಸಿ ಮೊದಲಿಗರೆನಿಸಿದ್ದರು. ಈಗ ಇದು ಉರ್ವಿನ್‌ ಪಟೇಲ್‌ ಪಾಲಾಗಿದೆ.

ಇಂದೋರ್‌ನಲ್ಲಿ ನಡೆದ ಸೈಯ್ಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿಯ ತ್ರಿಪುರಾ ವಿರುದ್ಧದ ಪಂದ್ಯದಲ್ಲಿ‌ ಗುಜರಾತ್ ಪರವಾಗಿ ಆಡಿದ ಉರ್ವಿನ್‌ ಪಟೇಲ್ ವೇಗದ ಶತಕ ಸಿಡಿಸಿದ್ದಾರೆ. ಟಾಸ್‌ ಗೆದ್ದ ಗುಜರಾತ್‌ ತಂಡವು ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್‌ ಆರಂಭಿಸಿದ ತ್ರಿಪುರಾ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 155 ರನ್‌ ಕಲೆಹಾಕಿತು.

ಈ ಗುರಿ ಬೆನ್ನತ್ತಿದ ಗುಜರಾತ್‌ ತಂಡವು ಆರಂಭದಿಂದಲ್ಲೆ ಅಬ್ಬರದ ಆಟವಾಡುವ ಮೂಲಕ ಕೇವಲ 10.2 ಓವರ್‌ಗಳಲ್ಲೆ ಜಯ ದಾಖಲಿಸಿತು. ಭರ್ಜರಿ ಬ್ಯಾಟಿಂಗ್‌ ಮಾಡಿದ ಉರ್ವಿನ್‌ ಪಟೇಲ್‌ ಕೇವಲ 28 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ವಿಶ್ವದಾಖಲೆ ಬರೆದರು. ಅಂತಿಮವಾಗಿ 35 ಎಸೆತಗಳಲ್ಲಿ 12 ಸಿಕ್ಸ್‌ ಹಾಗೂ 7 ಫೋರ್‌ಗಳೊಂದಿಗೆ 113 ರನ್‌ ಬಾರಿಸಿದರು. ಈ ಶತಕದ ಮೂಲಕ ವೇಗದ ಶತಕ ಬಾರಿಸಿದ ಭಾರತೀಯ ಆಟಗಾರರಲ್ಲಿ ಮೊದಲ ಸ್ಥಾನ ಅಲಂಕರಿಸಿದ್ದಾರೆ.

ಆದರೆ ಟಿ20 ಕ್ರಿಕೆಟ್‌ ಇತಿಹಾಸದಲ್ಲೇ ಅತಿ ವೇಗದ ವಿಶ್ವದಾಖಲೆ ಮುರಿಯಲು ಸಾಧ್ಯವಾಗಲಿಲ್ಲ. ಸಾಹಿಲ್‌ ಚೌಹಾನ್‌ ಎನ್ನುವವರು ಈ ಪಟ್ಟಿಯ ಮೊದಲ ಸ್ಥಾನದಲ್ಲಿದ್ದಾರೆ. ಇವರು 27 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ನಂತರದ ಸ್ಥಾನದಲ್ಲಿ ಉರ್ವಿನ್‌ ಪಟೇಲ್‌ ಇದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

7 mins ago

ಓದುಗರ ಪತ್ರ: ಜನರ ನಿರೀಕ್ಷೆಗಳಿಂದ ದೂರವಾಗುತ್ತಿರುವ ಶಾಸನಸಭೆಗಳು

ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…

9 mins ago

ಓದುಗರ ಪತ್ರ: ಬೇಸರ ತರಿಸಿದ ಜನಪ್ರತಿನಿಧಿಗಳ ವರ್ತನೆ

ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…

11 mins ago

ಸೈನ್ಯ ಯುದ್ಧ ಮಾಡುತ್ತದೆ, ತೀರ್ಮಾನ ಸರ್ಕಾರ ಮಾಡಬೇಕು…!

ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…

14 mins ago

ಇಂದು ಶನಿವಾರಸಂತೆ ಬಸ್ ನಿಲ್ದಾಣ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…

22 mins ago

ಮಡಹಳ್ಳಿ ಬಳಿಯ ಅಕ್ರಮ ಕ್ರಷರ್‌ನಿಂದ ಜನತೆ ಹೈರಾಣ

ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…

27 mins ago