Categories: ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ವಿಶ್ವದಾಖಲೆಯ ಶತಕ ಸಿಡಿಸಿದ ಉರ್ವಿನ್

ಇಂದೋರ್: ಗುಜರಾತ್‌ನ‌ 26 ವರ್ಷದ ಕ್ರಿಕೆಟಿಗ ಉರ್ವಿನ್‌ ಪಟೇಲ್‌ನನ್ನು ಈ ಬಾರಿಯ ಐಪಿಎಲ್‌ 2025ರ ಮೆಗಾ ಹರಾಜಿನಲ್ಲಿ ಪ್ರಾಂಚೈಸಿಗಳು ಬಿಡ್‌ ಮಾಡಲು ಹಿಂದೇಟು ಹಾಕಿದ ಬೆನ್ನಲ್ಲೇ, ಅವರು ಟಿ20 ಟೂರ್ನಿಯಲ್ಲಿ ವೇಗದ ಶತಕ ಸಿಡಿಸುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

ದೇಶಿಯ ಟೂರ್ನಿಗಳಲ್ಲಿ ಆಡುತ್ತಿರುವ ಉರ್ವಿನ್‌ ಕಡಿಮೆ ಎಸೆತಗಳಲ್ಲಿ ಶತಕ ದಾಖಲಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಮೊದಲು ರಿಷಬ್‌ ಪಂತ್‌ 2018 ರಲ್ಲಿ ಹಿಮಾಚಲ ಪ್ರದೇಶದ ವಿರುದ್ಧದ ಪಂದ್ಯದಲ್ಲಿ ಕೇವಲ 32 ಎಸೆತಗಳಲ್ಲಿ ಶತಕ ಸಿಡಿಸಿ ಮೊದಲಿಗರೆನಿಸಿದ್ದರು. ಈಗ ಇದು ಉರ್ವಿನ್‌ ಪಟೇಲ್‌ ಪಾಲಾಗಿದೆ.

ಇಂದೋರ್‌ನಲ್ಲಿ ನಡೆದ ಸೈಯ್ಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿಯ ತ್ರಿಪುರಾ ವಿರುದ್ಧದ ಪಂದ್ಯದಲ್ಲಿ‌ ಗುಜರಾತ್ ಪರವಾಗಿ ಆಡಿದ ಉರ್ವಿನ್‌ ಪಟೇಲ್ ವೇಗದ ಶತಕ ಸಿಡಿಸಿದ್ದಾರೆ. ಟಾಸ್‌ ಗೆದ್ದ ಗುಜರಾತ್‌ ತಂಡವು ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್‌ ಆರಂಭಿಸಿದ ತ್ರಿಪುರಾ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 155 ರನ್‌ ಕಲೆಹಾಕಿತು.

ಈ ಗುರಿ ಬೆನ್ನತ್ತಿದ ಗುಜರಾತ್‌ ತಂಡವು ಆರಂಭದಿಂದಲ್ಲೆ ಅಬ್ಬರದ ಆಟವಾಡುವ ಮೂಲಕ ಕೇವಲ 10.2 ಓವರ್‌ಗಳಲ್ಲೆ ಜಯ ದಾಖಲಿಸಿತು. ಭರ್ಜರಿ ಬ್ಯಾಟಿಂಗ್‌ ಮಾಡಿದ ಉರ್ವಿನ್‌ ಪಟೇಲ್‌ ಕೇವಲ 28 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ವಿಶ್ವದಾಖಲೆ ಬರೆದರು. ಅಂತಿಮವಾಗಿ 35 ಎಸೆತಗಳಲ್ಲಿ 12 ಸಿಕ್ಸ್‌ ಹಾಗೂ 7 ಫೋರ್‌ಗಳೊಂದಿಗೆ 113 ರನ್‌ ಬಾರಿಸಿದರು. ಈ ಶತಕದ ಮೂಲಕ ವೇಗದ ಶತಕ ಬಾರಿಸಿದ ಭಾರತೀಯ ಆಟಗಾರರಲ್ಲಿ ಮೊದಲ ಸ್ಥಾನ ಅಲಂಕರಿಸಿದ್ದಾರೆ.

ಆದರೆ ಟಿ20 ಕ್ರಿಕೆಟ್‌ ಇತಿಹಾಸದಲ್ಲೇ ಅತಿ ವೇಗದ ವಿಶ್ವದಾಖಲೆ ಮುರಿಯಲು ಸಾಧ್ಯವಾಗಲಿಲ್ಲ. ಸಾಹಿಲ್‌ ಚೌಹಾನ್‌ ಎನ್ನುವವರು ಈ ಪಟ್ಟಿಯ ಮೊದಲ ಸ್ಥಾನದಲ್ಲಿದ್ದಾರೆ. ಇವರು 27 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ನಂತರದ ಸ್ಥಾನದಲ್ಲಿ ಉರ್ವಿನ್‌ ಪಟೇಲ್‌ ಇದ್ದಾರೆ.

AddThis Website Tools
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ರೈಲ್ವೆ ವೇಳಾ ಪಟ್ಟಿಯಲ್ಲಿ ನೂತನ ಪರಿಷ್ಕರಣೆ: 2025ರ ಜನವರಿ 1 ರಿಂದ ಜಾರಿಮೈಸೂರು ರೈಲ್ವೆ ವೇಳಾ ಪಟ್ಟಿಯಲ್ಲಿ ನೂತನ ಪರಿಷ್ಕರಣೆ: 2025ರ ಜನವರಿ 1 ರಿಂದ ಜಾರಿ

ಮೈಸೂರು ರೈಲ್ವೆ ವೇಳಾ ಪಟ್ಟಿಯಲ್ಲಿ ನೂತನ ಪರಿಷ್ಕರಣೆ: 2025ರ ಜನವರಿ 1 ರಿಂದ ಜಾರಿ

ಮೈಸೂರು: ಭಾರತೀಯ ರೈಲ್ವೆ ಇಲಾಖೆಯೂ ಹೊಸ ವರ್ಷದ ಆರಂಭದ ಬೆನ್ನಲ್ಲೇ, ತನ್ನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದ್ದು, ಮೈಸೂರಿನಿಂದ ಇತರ ನಿಲ್ದಾಣಗಳಿಗೆ…

4 hours ago
ಹೊಸ ವರ್ಷಾಚರಣೆಗೆ ಪೋಲಿಸರ ಕಣ್ಗಾವಲು: ಸೀಮಾ ಲಾಟ್ಕರ್‌ಹೊಸ ವರ್ಷಾಚರಣೆಗೆ ಪೋಲಿಸರ ಕಣ್ಗಾವಲು: ಸೀಮಾ ಲಾಟ್ಕರ್‌

ಹೊಸ ವರ್ಷಾಚರಣೆಗೆ ಪೋಲಿಸರ ಕಣ್ಗಾವಲು: ಸೀಮಾ ಲಾಟ್ಕರ್‌

ಮೈಸೂರು: ಸಾಂಸಕೃತಿಕ ನಗರಿ ಮೈಸೂರು ನಗರದಾದ್ಯಂತ ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರು ಬಿಗಿ…

4 hours ago
ನೀವು ಗೃಹ ಸಚಿವರೋ ಬೆನ್ನಿಗೆ ನಿಲ್ಲುವ ಗ್ರಹ ಸಚಿವರೋ? : ಬಿಜೆಪಿ ವ್ಯಂಗ್ಯನೀವು ಗೃಹ ಸಚಿವರೋ ಬೆನ್ನಿಗೆ ನಿಲ್ಲುವ ಗ್ರಹ ಸಚಿವರೋ? : ಬಿಜೆಪಿ ವ್ಯಂಗ್ಯ

ನೀವು ಗೃಹ ಸಚಿವರೋ ಬೆನ್ನಿಗೆ ನಿಲ್ಲುವ ಗ್ರಹ ಸಚಿವರೋ? : ಬಿಜೆಪಿ ವ್ಯಂಗ್ಯ

ಬೆಂಗಳೂರು: ಕಲಬುರ್ಗಿಯ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಗಾಂಧಿ ಪರವಾಗಿ ಬೆನ್ನಿಗೆ ನಿಂತಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌…

5 hours ago
ರಾಜ್ಯ ಸರ್ಕಾರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ದೂರು ನೀಡಿದ ಸಿ.ಟಿ.ರವಿರಾಜ್ಯ ಸರ್ಕಾರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ದೂರು ನೀಡಿದ ಸಿ.ಟಿ.ರವಿ

ರಾಜ್ಯ ಸರ್ಕಾರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ದೂರು ನೀಡಿದ ಸಿ.ಟಿ.ರವಿ

ಮೈಸೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಮಧ್ಯೆ ಜಟಾಪಟಿ ಇದೀಗ ರಾಜ್ಯಪಾಲರ ಭವನಕ್ಕೆ ತಲುಪಿದ್ದು,…

5 hours ago
ಕನ್ನಡದ ಅಸ್ಮಿತೆಗೆ ಬದ್ಧರಾಗಿದೆಂದು ಹೇಳಿಕೊಳ್ಳುವ ಸರ್ಕಾರ ಮತ್ತೊಮ್ಮೆ ಕೆಎಎಸ್‌ ಮರು ಪರೀಕ್ಷೆಯಲ್ಲಿ ಎಡವಟ್ಟು: ಸಂಸದ ಯದುವೀರ್‌ ವಾಗ್ದಾಳಿಕನ್ನಡದ ಅಸ್ಮಿತೆಗೆ ಬದ್ಧರಾಗಿದೆಂದು ಹೇಳಿಕೊಳ್ಳುವ ಸರ್ಕಾರ ಮತ್ತೊಮ್ಮೆ ಕೆಎಎಸ್‌ ಮರು ಪರೀಕ್ಷೆಯಲ್ಲಿ ಎಡವಟ್ಟು: ಸಂಸದ ಯದುವೀರ್‌ ವಾಗ್ದಾಳಿ

ಕನ್ನಡದ ಅಸ್ಮಿತೆಗೆ ಬದ್ಧರಾಗಿದೆಂದು ಹೇಳಿಕೊಳ್ಳುವ ಸರ್ಕಾರ ಮತ್ತೊಮ್ಮೆ ಕೆಎಎಸ್‌ ಮರು ಪರೀಕ್ಷೆಯಲ್ಲಿ ಎಡವಟ್ಟು: ಸಂಸದ ಯದುವೀರ್‌ ವಾಗ್ದಾಳಿ

ಮೈಸೂರು: ಕನ್ನಡದ ಅಸ್ಮಿತೆ ಎಂದು ಹೇಳಿಕೊಳ್ಳುವವ ಕಾಂಗ್ರೆಸ್‌ ಸರ್ಕಾರದ ಆಡಳಿತ ವೈಫಲ್ಯ ಮತ್ತು ಬೇಜವಾಬ್ದಾರಿತನದಿಂದಾಗಿ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಗೊಂದಲಕ್ಕೊಳಗಾಗುತ್ತಿರುವುದು ವಿಷಾದನೀಯ…

5 hours ago
ಬಿ.ವೈ. ವಿಜಯೇಂದ್ರರವರಿಗೆ ಮದುವೆ ಆಮಂತ್ರಣ ನೀಡಿದ ಡಾಲಿ ಧನಂಜಯ್‌ಬಿ.ವೈ. ವಿಜಯೇಂದ್ರರವರಿಗೆ ಮದುವೆ ಆಮಂತ್ರಣ ನೀಡಿದ ಡಾಲಿ ಧನಂಜಯ್‌

ಬಿ.ವೈ. ವಿಜಯೇಂದ್ರರವರಿಗೆ ಮದುವೆ ಆಮಂತ್ರಣ ನೀಡಿದ ಡಾಲಿ ಧನಂಜಯ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ಡಾಲಿ ಧನಂಜಯ್‌ ದಾಂಪತ್ಯ ಜೀವನಕ್ಕೆ ಕಾಲೀಡುತ್ತಿದ್ದು, ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ…

6 hours ago