Categories: ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ವಿಶ್ವದಾಖಲೆಯ ಶತಕ ಸಿಡಿಸಿದ ಉರ್ವಿನ್

ಇಂದೋರ್: ಗುಜರಾತ್‌ನ‌ 26 ವರ್ಷದ ಕ್ರಿಕೆಟಿಗ ಉರ್ವಿನ್‌ ಪಟೇಲ್‌ನನ್ನು ಈ ಬಾರಿಯ ಐಪಿಎಲ್‌ 2025ರ ಮೆಗಾ ಹರಾಜಿನಲ್ಲಿ ಪ್ರಾಂಚೈಸಿಗಳು ಬಿಡ್‌ ಮಾಡಲು ಹಿಂದೇಟು ಹಾಕಿದ ಬೆನ್ನಲ್ಲೇ, ಅವರು ಟಿ20 ಟೂರ್ನಿಯಲ್ಲಿ ವೇಗದ ಶತಕ ಸಿಡಿಸುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

ದೇಶಿಯ ಟೂರ್ನಿಗಳಲ್ಲಿ ಆಡುತ್ತಿರುವ ಉರ್ವಿನ್‌ ಕಡಿಮೆ ಎಸೆತಗಳಲ್ಲಿ ಶತಕ ದಾಖಲಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಮೊದಲು ರಿಷಬ್‌ ಪಂತ್‌ 2018 ರಲ್ಲಿ ಹಿಮಾಚಲ ಪ್ರದೇಶದ ವಿರುದ್ಧದ ಪಂದ್ಯದಲ್ಲಿ ಕೇವಲ 32 ಎಸೆತಗಳಲ್ಲಿ ಶತಕ ಸಿಡಿಸಿ ಮೊದಲಿಗರೆನಿಸಿದ್ದರು. ಈಗ ಇದು ಉರ್ವಿನ್‌ ಪಟೇಲ್‌ ಪಾಲಾಗಿದೆ.

ಇಂದೋರ್‌ನಲ್ಲಿ ನಡೆದ ಸೈಯ್ಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿಯ ತ್ರಿಪುರಾ ವಿರುದ್ಧದ ಪಂದ್ಯದಲ್ಲಿ‌ ಗುಜರಾತ್ ಪರವಾಗಿ ಆಡಿದ ಉರ್ವಿನ್‌ ಪಟೇಲ್ ವೇಗದ ಶತಕ ಸಿಡಿಸಿದ್ದಾರೆ. ಟಾಸ್‌ ಗೆದ್ದ ಗುಜರಾತ್‌ ತಂಡವು ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್‌ ಆರಂಭಿಸಿದ ತ್ರಿಪುರಾ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 155 ರನ್‌ ಕಲೆಹಾಕಿತು.

ಈ ಗುರಿ ಬೆನ್ನತ್ತಿದ ಗುಜರಾತ್‌ ತಂಡವು ಆರಂಭದಿಂದಲ್ಲೆ ಅಬ್ಬರದ ಆಟವಾಡುವ ಮೂಲಕ ಕೇವಲ 10.2 ಓವರ್‌ಗಳಲ್ಲೆ ಜಯ ದಾಖಲಿಸಿತು. ಭರ್ಜರಿ ಬ್ಯಾಟಿಂಗ್‌ ಮಾಡಿದ ಉರ್ವಿನ್‌ ಪಟೇಲ್‌ ಕೇವಲ 28 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ವಿಶ್ವದಾಖಲೆ ಬರೆದರು. ಅಂತಿಮವಾಗಿ 35 ಎಸೆತಗಳಲ್ಲಿ 12 ಸಿಕ್ಸ್‌ ಹಾಗೂ 7 ಫೋರ್‌ಗಳೊಂದಿಗೆ 113 ರನ್‌ ಬಾರಿಸಿದರು. ಈ ಶತಕದ ಮೂಲಕ ವೇಗದ ಶತಕ ಬಾರಿಸಿದ ಭಾರತೀಯ ಆಟಗಾರರಲ್ಲಿ ಮೊದಲ ಸ್ಥಾನ ಅಲಂಕರಿಸಿದ್ದಾರೆ.

ಆದರೆ ಟಿ20 ಕ್ರಿಕೆಟ್‌ ಇತಿಹಾಸದಲ್ಲೇ ಅತಿ ವೇಗದ ವಿಶ್ವದಾಖಲೆ ಮುರಿಯಲು ಸಾಧ್ಯವಾಗಲಿಲ್ಲ. ಸಾಹಿಲ್‌ ಚೌಹಾನ್‌ ಎನ್ನುವವರು ಈ ಪಟ್ಟಿಯ ಮೊದಲ ಸ್ಥಾನದಲ್ಲಿದ್ದಾರೆ. ಇವರು 27 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ನಂತರದ ಸ್ಥಾನದಲ್ಲಿ ಉರ್ವಿನ್‌ ಪಟೇಲ್‌ ಇದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

5 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

9 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

9 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

9 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

10 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

10 hours ago