Categories: ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ವಿಶ್ವದಾಖಲೆಯ ಶತಕ ಸಿಡಿಸಿದ ಉರ್ವಿನ್

ಇಂದೋರ್: ಗುಜರಾತ್‌ನ‌ 26 ವರ್ಷದ ಕ್ರಿಕೆಟಿಗ ಉರ್ವಿನ್‌ ಪಟೇಲ್‌ನನ್ನು ಈ ಬಾರಿಯ ಐಪಿಎಲ್‌ 2025ರ ಮೆಗಾ ಹರಾಜಿನಲ್ಲಿ ಪ್ರಾಂಚೈಸಿಗಳು ಬಿಡ್‌ ಮಾಡಲು ಹಿಂದೇಟು ಹಾಕಿದ ಬೆನ್ನಲ್ಲೇ, ಅವರು ಟಿ20 ಟೂರ್ನಿಯಲ್ಲಿ ವೇಗದ ಶತಕ ಸಿಡಿಸುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

ದೇಶಿಯ ಟೂರ್ನಿಗಳಲ್ಲಿ ಆಡುತ್ತಿರುವ ಉರ್ವಿನ್‌ ಕಡಿಮೆ ಎಸೆತಗಳಲ್ಲಿ ಶತಕ ದಾಖಲಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಮೊದಲು ರಿಷಬ್‌ ಪಂತ್‌ 2018 ರಲ್ಲಿ ಹಿಮಾಚಲ ಪ್ರದೇಶದ ವಿರುದ್ಧದ ಪಂದ್ಯದಲ್ಲಿ ಕೇವಲ 32 ಎಸೆತಗಳಲ್ಲಿ ಶತಕ ಸಿಡಿಸಿ ಮೊದಲಿಗರೆನಿಸಿದ್ದರು. ಈಗ ಇದು ಉರ್ವಿನ್‌ ಪಟೇಲ್‌ ಪಾಲಾಗಿದೆ.

ಇಂದೋರ್‌ನಲ್ಲಿ ನಡೆದ ಸೈಯ್ಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿಯ ತ್ರಿಪುರಾ ವಿರುದ್ಧದ ಪಂದ್ಯದಲ್ಲಿ‌ ಗುಜರಾತ್ ಪರವಾಗಿ ಆಡಿದ ಉರ್ವಿನ್‌ ಪಟೇಲ್ ವೇಗದ ಶತಕ ಸಿಡಿಸಿದ್ದಾರೆ. ಟಾಸ್‌ ಗೆದ್ದ ಗುಜರಾತ್‌ ತಂಡವು ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್‌ ಆರಂಭಿಸಿದ ತ್ರಿಪುರಾ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 155 ರನ್‌ ಕಲೆಹಾಕಿತು.

ಈ ಗುರಿ ಬೆನ್ನತ್ತಿದ ಗುಜರಾತ್‌ ತಂಡವು ಆರಂಭದಿಂದಲ್ಲೆ ಅಬ್ಬರದ ಆಟವಾಡುವ ಮೂಲಕ ಕೇವಲ 10.2 ಓವರ್‌ಗಳಲ್ಲೆ ಜಯ ದಾಖಲಿಸಿತು. ಭರ್ಜರಿ ಬ್ಯಾಟಿಂಗ್‌ ಮಾಡಿದ ಉರ್ವಿನ್‌ ಪಟೇಲ್‌ ಕೇವಲ 28 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ವಿಶ್ವದಾಖಲೆ ಬರೆದರು. ಅಂತಿಮವಾಗಿ 35 ಎಸೆತಗಳಲ್ಲಿ 12 ಸಿಕ್ಸ್‌ ಹಾಗೂ 7 ಫೋರ್‌ಗಳೊಂದಿಗೆ 113 ರನ್‌ ಬಾರಿಸಿದರು. ಈ ಶತಕದ ಮೂಲಕ ವೇಗದ ಶತಕ ಬಾರಿಸಿದ ಭಾರತೀಯ ಆಟಗಾರರಲ್ಲಿ ಮೊದಲ ಸ್ಥಾನ ಅಲಂಕರಿಸಿದ್ದಾರೆ.

ಆದರೆ ಟಿ20 ಕ್ರಿಕೆಟ್‌ ಇತಿಹಾಸದಲ್ಲೇ ಅತಿ ವೇಗದ ವಿಶ್ವದಾಖಲೆ ಮುರಿಯಲು ಸಾಧ್ಯವಾಗಲಿಲ್ಲ. ಸಾಹಿಲ್‌ ಚೌಹಾನ್‌ ಎನ್ನುವವರು ಈ ಪಟ್ಟಿಯ ಮೊದಲ ಸ್ಥಾನದಲ್ಲಿದ್ದಾರೆ. ಇವರು 27 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ನಂತರದ ಸ್ಥಾನದಲ್ಲಿ ಉರ್ವಿನ್‌ ಪಟೇಲ್‌ ಇದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

17 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

17 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

17 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

17 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

17 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

20 hours ago