Categories: ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ವಿಶ್ವದಾಖಲೆಯ ಶತಕ ಸಿಡಿಸಿದ ಉರ್ವಿನ್

ಇಂದೋರ್: ಗುಜರಾತ್‌ನ‌ 26 ವರ್ಷದ ಕ್ರಿಕೆಟಿಗ ಉರ್ವಿನ್‌ ಪಟೇಲ್‌ನನ್ನು ಈ ಬಾರಿಯ ಐಪಿಎಲ್‌ 2025ರ ಮೆಗಾ ಹರಾಜಿನಲ್ಲಿ ಪ್ರಾಂಚೈಸಿಗಳು ಬಿಡ್‌ ಮಾಡಲು ಹಿಂದೇಟು ಹಾಕಿದ ಬೆನ್ನಲ್ಲೇ, ಅವರು ಟಿ20 ಟೂರ್ನಿಯಲ್ಲಿ ವೇಗದ ಶತಕ ಸಿಡಿಸುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

ದೇಶಿಯ ಟೂರ್ನಿಗಳಲ್ಲಿ ಆಡುತ್ತಿರುವ ಉರ್ವಿನ್‌ ಕಡಿಮೆ ಎಸೆತಗಳಲ್ಲಿ ಶತಕ ದಾಖಲಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಮೊದಲು ರಿಷಬ್‌ ಪಂತ್‌ 2018 ರಲ್ಲಿ ಹಿಮಾಚಲ ಪ್ರದೇಶದ ವಿರುದ್ಧದ ಪಂದ್ಯದಲ್ಲಿ ಕೇವಲ 32 ಎಸೆತಗಳಲ್ಲಿ ಶತಕ ಸಿಡಿಸಿ ಮೊದಲಿಗರೆನಿಸಿದ್ದರು. ಈಗ ಇದು ಉರ್ವಿನ್‌ ಪಟೇಲ್‌ ಪಾಲಾಗಿದೆ.

ಇಂದೋರ್‌ನಲ್ಲಿ ನಡೆದ ಸೈಯ್ಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿಯ ತ್ರಿಪುರಾ ವಿರುದ್ಧದ ಪಂದ್ಯದಲ್ಲಿ‌ ಗುಜರಾತ್ ಪರವಾಗಿ ಆಡಿದ ಉರ್ವಿನ್‌ ಪಟೇಲ್ ವೇಗದ ಶತಕ ಸಿಡಿಸಿದ್ದಾರೆ. ಟಾಸ್‌ ಗೆದ್ದ ಗುಜರಾತ್‌ ತಂಡವು ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್‌ ಆರಂಭಿಸಿದ ತ್ರಿಪುರಾ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 155 ರನ್‌ ಕಲೆಹಾಕಿತು.

ಈ ಗುರಿ ಬೆನ್ನತ್ತಿದ ಗುಜರಾತ್‌ ತಂಡವು ಆರಂಭದಿಂದಲ್ಲೆ ಅಬ್ಬರದ ಆಟವಾಡುವ ಮೂಲಕ ಕೇವಲ 10.2 ಓವರ್‌ಗಳಲ್ಲೆ ಜಯ ದಾಖಲಿಸಿತು. ಭರ್ಜರಿ ಬ್ಯಾಟಿಂಗ್‌ ಮಾಡಿದ ಉರ್ವಿನ್‌ ಪಟೇಲ್‌ ಕೇವಲ 28 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ವಿಶ್ವದಾಖಲೆ ಬರೆದರು. ಅಂತಿಮವಾಗಿ 35 ಎಸೆತಗಳಲ್ಲಿ 12 ಸಿಕ್ಸ್‌ ಹಾಗೂ 7 ಫೋರ್‌ಗಳೊಂದಿಗೆ 113 ರನ್‌ ಬಾರಿಸಿದರು. ಈ ಶತಕದ ಮೂಲಕ ವೇಗದ ಶತಕ ಬಾರಿಸಿದ ಭಾರತೀಯ ಆಟಗಾರರಲ್ಲಿ ಮೊದಲ ಸ್ಥಾನ ಅಲಂಕರಿಸಿದ್ದಾರೆ.

ಆದರೆ ಟಿ20 ಕ್ರಿಕೆಟ್‌ ಇತಿಹಾಸದಲ್ಲೇ ಅತಿ ವೇಗದ ವಿಶ್ವದಾಖಲೆ ಮುರಿಯಲು ಸಾಧ್ಯವಾಗಲಿಲ್ಲ. ಸಾಹಿಲ್‌ ಚೌಹಾನ್‌ ಎನ್ನುವವರು ಈ ಪಟ್ಟಿಯ ಮೊದಲ ಸ್ಥಾನದಲ್ಲಿದ್ದಾರೆ. ಇವರು 27 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ನಂತರದ ಸ್ಥಾನದಲ್ಲಿ ಉರ್ವಿನ್‌ ಪಟೇಲ್‌ ಇದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

30 mins ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

31 mins ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

33 mins ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

4 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

4 hours ago