ಕ್ರೀಡೆ

ಯುಎಸ್ ಓಪನ್: ಕ್ವಾರ್ಟರ್ ಫೈನಲ್‌ಗೆ ಲಗ್ಗೆಯಿಟ್ಟ ನೊವಾಕ್ ಜೊಕೊವಿಕ್, ಕೊಕೊ ಗೌಫ್

ನ್ಯೂಯಾರ್ಕ್ : ಸರ್ಬಿಯದ ಸೂಪರ್‌ಸ್ಟಾರ್ ನೊವಾಕ್ ಜೊಕೊವಿಕ್‌ ಯು.ಎಸ್. ಓಪನ್ ಟೆನಿಸ್ ಟೂರ್ನಿಯಲ್ಲಿ 13ನೇ ಬಾರಿ ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಅಮೆರಿಕದ ಆಟಗಾರ್ತಿ ಕೊಕೊ ಗೌಫ್ ಅವರು ಕರೋಲಿನ್ ವೋಝ್ನಿಯಾಕಿ ಅವರ ಮರಳಿ ಹೋರಾಡುವ ಕನಸನ್ನು ಭಗ್ನಗೊಳಿಸಿದರು.

ಮೂರು ಬಾರಿ ಯು.ಎಸ್. ಓಪನ್ ಚಾಂಪಿಯನ್ ಆಗಿರುವ ಜೊಕೊವಿಕ್ ಪುರುಷರ ಸಿಂಗಲ್ಸ್ ಪ್ರಿ-ಕ್ವಾರ್ಟರ್ ಫೈನಲ್‌ನಲ್ಲಿ ಕ್ರೊಯೇಶಿಯದ ಕ್ವಾಲಿಫೈಯರ್ ಬೊರ್ನಾ ಗೊಜೊರನ್ನು 6-2, 7-5, 6-4 ಸೆಟ್‌ಗಳ ಅಂತರದಿಂದ ಸೋಲಿಸಿದರು. ಮಂಗಳವಾರ ನಡೆಯುವ ಅಂತಿಮ-8ರ ಸುತ್ತಿನಲ್ಲಿ ಅಮೆರಿಕದ ನಂ.1 ಆಟಗಾರ ಟೇಲರ್ ಫ್ರಿಟ್ಝ್‌ರನ್ನು ಎದುರಿಸಲಿದ್ದಾರೆ.

36ರ ಹರೆಯದ ಜೊಕೊವಿಕ್ ಮಂಗಳವಾರ ಫ್ರಿಟ್ಜ್ ವಿರುದ್ಧ ತನ್ನ ಪ್ರಾಬಲ್ಯ ಮುಂದುವರಿಸುವ ವಿಶ್ವಾಸದಲ್ಲಿದ್ದಾರೆ. ಕಳೆದ ತಿಂಗಳು ನಡೆದ ಸಿನ್ಸಿನಾಟಿ ಮಾಸ್ಟರ್ಸ್ ಸಹಿತ ಹಿಂದಿನ 7 ಪಂದ್ಯಗಳಲ್ಲಿ ಜೊಕೊವಿಕ್ ಅವರು ಫ್ರಿಟ್ಜ್ ವಿರುದ್ಧ ಜಯ ಸಾಧಿಸಿದ್ದರು.

ಸ್ವಿಸ್ ಕ್ವಾಲಿಫೈಯರ್ ಡೊಮಿನಿಕ್ ಸ್ಟ್ರೈಕರ್ ವಿರುದ್ಧ 7-6(7/2), 6-4, 6-4 ಸೆಟ್‌ಗಳ ಅಂತರದಿಂದ ಜಯ ಸಾಧಿಸಿರುವ ಫ್ರಿಟ್ಝ್ ಕ್ವಾರ್ಟರ್ ಫೈನಲ್ ತಲುಪಿದ ಅಮೆರಿಕದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ.

ಫ್ರಾನ್ಸಿಸ್ ಟಿಫಾಯ್ ಹಾಗೂ ಬೆನ್ ಶೆಲ್ಟನ್‌ರೊಂದಿಗೆ ಫ್ರಿಟ್ಝ್ ಸೇರಿಕೊಂಡರು. 2005ರ ನಂತರ ನ್ಯೂಯಾರ್ಕ್‌ನಲ್ಲಿ ಮೂವರು ಪುರುಷ ಆಟಗಾರರು ಕ್ವಾರ್ಟರ್ ಫೈನಲ್ ತಲುಪಿದ್ದಾರೆ.

ಟಿಫಾಯ್ ಆಸ್ಟ್ರೇಲಿಯದ ರಿಂಕಿ ಹಿಜಿಕಾಟಾರನ್ನು 6-4, 6-1, 6-4 ಸೆಟ್‌ಗಳ ಅಂತರದಿಂದ ಮಣಿಸಿ ಕ್ವಾರ್ಟರ್ ಫೈನಲ್ ತಲುಪಿದ್ದು, ಮುಂದಿನ ಸುತ್ತಿನಲ್ಲಿ 47ನೇ ರ್ಯಾಂಕಿನ ತಮ್ಮದೇ ದೇಶದ ಶೆಲ್ಟನ್‌ರನ್ನು ಎದುರಿಸಲಿದ್ದಾರೆ.

25ರ ಹರೆಯದ ಟಿಫಾಯ್ ಕಳೆದ ವರ್ಷ ಯು.ಎಸ್. ಓಪನ್‌ನಲ್ಲಿ ಸೆಮಿ ಫೈನಲ್ ತಲುಪಿದ್ದರು. ಆಗ ಚಾಂಪಿಯನ್ ಪಟ್ಟಕ್ಕೇರಿದ ಕಾರ್ಲೊಸ್ ಅಲ್ಕರಾಝ್ ವಿರುದ್ಧ ಐದು ಸೆಟ್‌ಗಳ ಅಂತರದಿಂದ ಸೋತಿದ್ದರು.

ಇದೇ ವೇಳೆ 20ರ ವಯಸ್ಸಿನ ಶೆಲ್ಟನ್ ಸಹ ಆಟಗಾರ 14ನೇ ಶ್ರೇಯಾಂಕದ ಟಾಮಿ ಪೌಲ್‌ರನ್ನು 4 ಸೆಟ್‌ಗಳ ಅಂತರದಿಂದ ಮಣಿಸಿ ಈ ವರ್ಷದ ಗ್ರ್ಯಾನ್‌ಸ್ಲಾಮ್ ಟೂರ್ನಿಯಲ್ಲಿ 2ನೇ ಬಾರಿ ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಆ್ಯಂಡಿ ರೊಡಿಕ್(2002)ನಂತರ ಯು.ಎಸ್. ಓಪನ್‌ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ ಅಮೆರಿಕದ ಯುವ ಆಟಗಾರ ಎನಿಸಿಕೊಂಡರು.

ಗೌಫ್ ಅಂತಿಮ-8ಕ್ಕೆ ಪ್ರವೇಶ: ಆರನೇ ಶ್ರೇಯಾಂಕದ ಸ್ಥಳೀಯ ಆಟಗಾರ್ತಿ ಗೌಫ್ ವಿಶ್ವದ ಮಾಜಿ ನಂ.1 ಆಟಗಾರ್ತಿ ವೋಝ್ನಿಯಾಕಿ ಅವರನ್ನು 6-3, 3-6, 6-1 ಸೆಟ್‌ಗಳ ಅಂತರದಿಂದ ಸೋಲಿಸಿ ಅಂತಿಮ-8ರ ಸುತ್ತು ತಲುಪಿದರು.

andolanait

Recent Posts

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.…

17 mins ago

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…

30 mins ago

ರಾಜ್ಯದಲ್ಲಿ ಹೆಚ್ಚಿದ ಗರಿಷ್ಠ ತಾಪಮಾನ: ಚರ್ಮದ ಬಗ್ಗೆ ಇರಲಿ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…

1 hour ago

ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ: ಭಾವುಕ ಪೋಸ್ಟ್‌ ಹಾಕಿದ ರಾಘವೇಂದ್ರ

ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ…

2 hours ago

ಓದುಗರ ಪತ್ರ: ಐದು ವರ್ಷಕ್ಕೊಮ್ಮೆ ಆಸ್ತಿ ತೆರಿಗೆ ಪರಿಷ್ಕರಿಸಿ

ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ…

2 hours ago

ಓದುಗರ ಪತ್ರ: ಮ್ಯಾನ್ ಹೋಲ್ ಸ್ವಚ್ಛಗೊಳಿಸಿ

ಮೈಸೂರಿನ ಝಾನ್ಸಿ ಲಕ್ಷ್ಮೀಬಾಯಿ (ಜೆಎಲ್‌ಬಿ) ರಸ್ತೆಯಲ್ಲಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಕಚೇರಿಯ ಮುಂದಿರುವ ಫುಟ್‌ಪಾತ್‌ನಲ್ಲಿರುವ ಮ್ಯಾನ್ ಹೋಲ್‌ನಲ್ಲಿ ಕಸ…

2 hours ago