ಕ್ರೀಡೆ

ಯುಎಸ್ ಓಪನ್: ಕ್ವಾರ್ಟರ್ ಫೈನಲ್‌ಗೆ ಲಗ್ಗೆಯಿಟ್ಟ ನೊವಾಕ್ ಜೊಕೊವಿಕ್, ಕೊಕೊ ಗೌಫ್

ನ್ಯೂಯಾರ್ಕ್ : ಸರ್ಬಿಯದ ಸೂಪರ್‌ಸ್ಟಾರ್ ನೊವಾಕ್ ಜೊಕೊವಿಕ್‌ ಯು.ಎಸ್. ಓಪನ್ ಟೆನಿಸ್ ಟೂರ್ನಿಯಲ್ಲಿ 13ನೇ ಬಾರಿ ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಅಮೆರಿಕದ ಆಟಗಾರ್ತಿ ಕೊಕೊ ಗೌಫ್ ಅವರು ಕರೋಲಿನ್ ವೋಝ್ನಿಯಾಕಿ ಅವರ ಮರಳಿ ಹೋರಾಡುವ ಕನಸನ್ನು ಭಗ್ನಗೊಳಿಸಿದರು.

ಮೂರು ಬಾರಿ ಯು.ಎಸ್. ಓಪನ್ ಚಾಂಪಿಯನ್ ಆಗಿರುವ ಜೊಕೊವಿಕ್ ಪುರುಷರ ಸಿಂಗಲ್ಸ್ ಪ್ರಿ-ಕ್ವಾರ್ಟರ್ ಫೈನಲ್‌ನಲ್ಲಿ ಕ್ರೊಯೇಶಿಯದ ಕ್ವಾಲಿಫೈಯರ್ ಬೊರ್ನಾ ಗೊಜೊರನ್ನು 6-2, 7-5, 6-4 ಸೆಟ್‌ಗಳ ಅಂತರದಿಂದ ಸೋಲಿಸಿದರು. ಮಂಗಳವಾರ ನಡೆಯುವ ಅಂತಿಮ-8ರ ಸುತ್ತಿನಲ್ಲಿ ಅಮೆರಿಕದ ನಂ.1 ಆಟಗಾರ ಟೇಲರ್ ಫ್ರಿಟ್ಝ್‌ರನ್ನು ಎದುರಿಸಲಿದ್ದಾರೆ.

36ರ ಹರೆಯದ ಜೊಕೊವಿಕ್ ಮಂಗಳವಾರ ಫ್ರಿಟ್ಜ್ ವಿರುದ್ಧ ತನ್ನ ಪ್ರಾಬಲ್ಯ ಮುಂದುವರಿಸುವ ವಿಶ್ವಾಸದಲ್ಲಿದ್ದಾರೆ. ಕಳೆದ ತಿಂಗಳು ನಡೆದ ಸಿನ್ಸಿನಾಟಿ ಮಾಸ್ಟರ್ಸ್ ಸಹಿತ ಹಿಂದಿನ 7 ಪಂದ್ಯಗಳಲ್ಲಿ ಜೊಕೊವಿಕ್ ಅವರು ಫ್ರಿಟ್ಜ್ ವಿರುದ್ಧ ಜಯ ಸಾಧಿಸಿದ್ದರು.

ಸ್ವಿಸ್ ಕ್ವಾಲಿಫೈಯರ್ ಡೊಮಿನಿಕ್ ಸ್ಟ್ರೈಕರ್ ವಿರುದ್ಧ 7-6(7/2), 6-4, 6-4 ಸೆಟ್‌ಗಳ ಅಂತರದಿಂದ ಜಯ ಸಾಧಿಸಿರುವ ಫ್ರಿಟ್ಝ್ ಕ್ವಾರ್ಟರ್ ಫೈನಲ್ ತಲುಪಿದ ಅಮೆರಿಕದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ.

ಫ್ರಾನ್ಸಿಸ್ ಟಿಫಾಯ್ ಹಾಗೂ ಬೆನ್ ಶೆಲ್ಟನ್‌ರೊಂದಿಗೆ ಫ್ರಿಟ್ಝ್ ಸೇರಿಕೊಂಡರು. 2005ರ ನಂತರ ನ್ಯೂಯಾರ್ಕ್‌ನಲ್ಲಿ ಮೂವರು ಪುರುಷ ಆಟಗಾರರು ಕ್ವಾರ್ಟರ್ ಫೈನಲ್ ತಲುಪಿದ್ದಾರೆ.

ಟಿಫಾಯ್ ಆಸ್ಟ್ರೇಲಿಯದ ರಿಂಕಿ ಹಿಜಿಕಾಟಾರನ್ನು 6-4, 6-1, 6-4 ಸೆಟ್‌ಗಳ ಅಂತರದಿಂದ ಮಣಿಸಿ ಕ್ವಾರ್ಟರ್ ಫೈನಲ್ ತಲುಪಿದ್ದು, ಮುಂದಿನ ಸುತ್ತಿನಲ್ಲಿ 47ನೇ ರ್ಯಾಂಕಿನ ತಮ್ಮದೇ ದೇಶದ ಶೆಲ್ಟನ್‌ರನ್ನು ಎದುರಿಸಲಿದ್ದಾರೆ.

25ರ ಹರೆಯದ ಟಿಫಾಯ್ ಕಳೆದ ವರ್ಷ ಯು.ಎಸ್. ಓಪನ್‌ನಲ್ಲಿ ಸೆಮಿ ಫೈನಲ್ ತಲುಪಿದ್ದರು. ಆಗ ಚಾಂಪಿಯನ್ ಪಟ್ಟಕ್ಕೇರಿದ ಕಾರ್ಲೊಸ್ ಅಲ್ಕರಾಝ್ ವಿರುದ್ಧ ಐದು ಸೆಟ್‌ಗಳ ಅಂತರದಿಂದ ಸೋತಿದ್ದರು.

ಇದೇ ವೇಳೆ 20ರ ವಯಸ್ಸಿನ ಶೆಲ್ಟನ್ ಸಹ ಆಟಗಾರ 14ನೇ ಶ್ರೇಯಾಂಕದ ಟಾಮಿ ಪೌಲ್‌ರನ್ನು 4 ಸೆಟ್‌ಗಳ ಅಂತರದಿಂದ ಮಣಿಸಿ ಈ ವರ್ಷದ ಗ್ರ್ಯಾನ್‌ಸ್ಲಾಮ್ ಟೂರ್ನಿಯಲ್ಲಿ 2ನೇ ಬಾರಿ ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಆ್ಯಂಡಿ ರೊಡಿಕ್(2002)ನಂತರ ಯು.ಎಸ್. ಓಪನ್‌ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ ಅಮೆರಿಕದ ಯುವ ಆಟಗಾರ ಎನಿಸಿಕೊಂಡರು.

ಗೌಫ್ ಅಂತಿಮ-8ಕ್ಕೆ ಪ್ರವೇಶ: ಆರನೇ ಶ್ರೇಯಾಂಕದ ಸ್ಥಳೀಯ ಆಟಗಾರ್ತಿ ಗೌಫ್ ವಿಶ್ವದ ಮಾಜಿ ನಂ.1 ಆಟಗಾರ್ತಿ ವೋಝ್ನಿಯಾಕಿ ಅವರನ್ನು 6-3, 3-6, 6-1 ಸೆಟ್‌ಗಳ ಅಂತರದಿಂದ ಸೋಲಿಸಿ ಅಂತಿಮ-8ರ ಸುತ್ತು ತಲುಪಿದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago