ಕ್ರೀಡೆ

ಯುಎಸ್​ಎ ಲೀಗ್ಸ್ ಕಪ್: ವಿಶ್ವ ದಾಖಲೆ ಬರೆದ ಲಿಯೋನೆಲ್ ಮೆಸ್ಸಿ

ಯುಎಸ್​ಎಯ ಲೀಗ್ಸ್ ಕಪ್ ಫೈನಲ್ ಪಂದ್ಯದಲ್ಲಿ ಗೆದ್ದು ಲಿಯೋನೆಲ್ ಮೆಸ್ಸಿ ನೇತೃತ್ವದ ಇಂಟರ್ ಮಿಯಾಮಿ ತಂಡ ಚಾಂಪಿಯನ್​ ಪಟ್ಟ ಅಲಂಕರಿಸಿದೆ. ನ್ಯಾಶ್ವಿಲ್ಲೆ ಕ್ಲಬ್ ವಿರುದ್ಧ ನಡೆದ ಅಂತಿಮ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಪಂದ್ಯದ 23ನೇ ನಿಮಿಷದಲ್ಲಿ ಗೋಲು ಬಾರಿಸುವ ಮೂಲಕ ಮೆಸ್ಸಿ ಇಂಟರ್ ಮಿಯಾಮಿ ತಂಡಕ್ಕೆ ಯಶಸ್ಸು ತಂದುಕೊಟ್ಟರು.

ಆದರೆ ದ್ವಿತಿಯಾರ್ಧದ 57ನೇ ನಿಮಿಷದಲ್ಲಿ ನ್ಯಾಶ್ವಿಲ್ಲೆ ಫಾಫಾ ಪಿಕಾಲ್ಟ್ ಗೋಲು ದಾಖಲಿಸಿದರು. ಇದಾದ ಬಳಿಕ ಉಭಯ ತಂಡಗಳ ನಡುವೆ ಭರ್ಜರಿ ಪೈಪೋಟಿ ಕಂಡು ಬಂತು. ಆದರೆ ಎರಡೂ ತಂಡಗಳು ಗೋಲುಗಳಿಸುವಲ್ಲಿ ಮಾತ್ರ ಯಶಸ್ವಿಯಾಗಿರಲಿಲ್ಲ. ಪರಿಣಾಮ ಪಂದ್ಯವು 1-1 ಸಮಬಲದೊಂದಿಗೆ ಅಂತ್ಯವಾಯಿತು.

ಪಂದ್ಯ ಸಮಬಲಗೊಂಡಿದ್ದರಿಂದ ಫಲಿತಾಂಶ ನಿರ್ಧಾರಕ್ಕಾಗಿ ಪೆನಾಲ್ಟಿ ಶೂಟೌಟ್ ಮೊರೆ ಹೋಗಲಾಯಿತು.  5 ಅವಕಾಶಗಳ ಪೆನಾಲ್ಟಿ ಶೂಟೌಟ್​ನಲ್ಲಿ ಉಭಯ ತಂಡಗಳು 4-4 ಅಂತರದಿಂದ ಸಮಬಲ ಸಾಧಿಸಿದ್ದರು. ಹೀಗಾಗಿ 2ನೇ ಸುತ್ತಿನ ಅವಕಾಶ ನೀಡಲಾಯಿತು.

2ನೇ ಸುತ್ತಿನ ಪೆನಾಲ್ಟಿ ಶೂಟೌಟ್​ನ ಕೊನೆಯ ಅವಕಾಶದಲ್ಲಿ ನ್ಯಾಶ್ವಿಲ್ಲೆ ಗೋಲು ಕೀಪರ್ ಚೆಂಡನ್ನು ಬಲೆಯೊಳಗೆ ತಲುಪಿಸುವಲ್ಲಿ ಎಡವಿದರು. ಇದರೊಂದಿಗೆ ಇಂಟರ್ ಮಿಯಾಮಿ ತಂಡ 10-9 ಅಂತರದಿಂದ ಜಯ ಸಾಧಿಸಿತು. ಈ ಮೂಲಕ ಅಮೆರಿಕನ್ ಲೀಗ್​ನಲ್ಲೂ ಲಿಯೋನೆಲ್ ಮೆಸ್ಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡರು. ಅಲ್ಲದೆ ಟೂರ್ನಿಯ ಬೆಸ್ಟ್ ಪ್ಲೇಯರ್ ಹಾಗೂ ಅತೀ ಹೆಚ್ಚು ಗೋಲು ಬಾರಿಸಿದ ಪ್ರಶಸ್ತಿಯನ್ನು ಸಹ ಬಾಚಿಕೊಂಡರು.

ಮೆಸ್ಸಿ ವಿಶ್ವ ದಾಖಲೆ : ಈ ಗೆಲುವಿನೊಂದಿಗೆ ಫುಟ್​ಬಾಲ್ ಇತಿಹಾಸದಲ್ಲೇ ಅತ್ಯಧಿಕ ಟ್ರೋಫಿ ಗೆದ್ದ ವಿಶ್ವ ದಾಖಲೆ ಕೂಡ ಲಿಯೋನೆಲ್ ಮೆಸ್ಸಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಬ್ರೆಝಿಲ್​ಗೆ ಡ್ಯಾನಿ ಅಲ್ವೆಸ್ ಹೆಸರಿನಲ್ಲಿತ್ತು. ಅಲ್ವೆಸ್ ಒಟ್ಟು 43 ಟ್ರೋಫಿಗಳನ್ನು ಗೆದ್ದು ಇತಿಹಾಸ ನಿರ್ಮಿಸಿದ್ದರು.

ಇದೀಗ 44ನೇ ಕಿರೀಟವನ್ನು ಮುಡಿಗೇರಿಸಿಕೊಳ್ಳುವ ಮೂಲಕ ಅರ್ಜೆಂಟೀನಾ ತಾರೆ ಲಿಯೋನೆಸ್ ಮೆಸ್ಸಿ ಫುಟ್​ಬಾಲ್ ಇತಿಹಾಸದಲ್ಲೇ ಅತೀ ಹೆಚ್ಚು ಟ್ರೋಫಿಗಳನ್ನು ಗೆದ್ದ ಆಟಗಾರ ಎನಿಸಿಕೊಂಡಿದ್ದಾರೆ.

7ನೇ ಸ್ಥಾನದಲ್ಲಿ ರೊನಾಲ್ಡೊ : ಫುಟ್​ಬಾಲ್ ಇತಿಹಾಸದಲ್ಲಿ ಅತ್ಯಧಿಕ ಟ್ರೋಫಿಗಳನ್ನು ಮುಡಿಗೇರಿಸಿಕೊಂಡ ಆಟಗಾರರಲ್ಲಿ ಪೋರ್ಚುಗಲ್​ನ ಖ್ಯಾತ ಕಾಲ್ಚೆಂಡು ಚತುರ ಕ್ರಿಸ್ಟಿಯಾನೊ ರೊನಾಲ್ಡೊ 7ನೇ ಸ್ಥಾನದಲ್ಲಿದ್ದಾರೆ. ರೊನಾಲ್ಡೊ ಒಟ್ಟು 35 ಟ್ರೋಫಿಗಳನ್ನು ಗೆದ್ದುಕೊಂಡಿದ್ದಾರೆ.

andolanait

Recent Posts

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…

1 min ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಹಾಸನ ಮೂಲದ ಇಬ್ಬರು ಟೆಕ್ಕಿಗಳು ಕಣ್ಮರೆ

ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…

7 mins ago

ಚಿತ್ರದುರ್ಗದಲ್ಲಿ ಬಸ್‌ ದುರಂತ ಪ್ರಕರಣ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್‌ ಹಾಗೂ ಖಾಸಗಿ ಬಸ್‌ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…

16 mins ago

ಎಲ್ಲೆಡೆ ಕ್ರಿಸ್‌ಮಸ್ ಹಬ್ಬದ ಸಂಭ್ರಮ: ಗಣ್ಯರಿಂದ ಶುಭಾಶಯಗಳ ಮಹಾಪೂರ

ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್‌ಮಸ್‌ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್‌ಮಸ್‌ ಹಬ್ಬವು ನಂಬಿಕೆಯೆಂಬ…

27 mins ago

ಚಿತ್ರದುರ್ಗದಲ್ಲಿ ಭೀಕರ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…

1 hour ago

ಭೀಕರ ರಸ್ತೆ ದುರಂತ: ಬಸ್‌ಗೆ ಬೆಂಕಿ ತಗುಲಿ 10ಕ್ಕೂ ಹೆಚ್ಚು ಮಂದಿ ಸಾವು

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್‌ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ…

1 hour ago