ಗುವಹಾಟಿ : ಆರಂಭದಲ್ಲಿ ಬೌಲರ್ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ 8 ವಿಕೆಟ್ಗಳ ಜಯ ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.
ಗುವಾಹಟಿಯ ಬಾರ್ಸಾಪರ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ, ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಜಸ್ಥಾನ್ ಬೌಲರ್ಗಳ ಮುಂದೆ ತತ್ತರಿಸಿತು. ಹೀಗಾಗಿ ಚೆನ್ನೈ ನಿಗದಿತ 20 ಓವರ್ ಗಳಲ್ಲಿ 127 ರನ್ ಗಳಿಸಿ ಆಲೌಟ್ ಆಯಿತು. ಸುಲಭ ಸವಾಲನ್ನು ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್ 12.1 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 128ರನ್ ಹೊಡೆದು ಗೆಲುವು ಸಾಧಿಸಿತು.
ಸೂರ್ಯವಂಶಿ ತಾನು ಎದುರಿಸಿದ ಮೊದಲ ಎಸೆತದಲ್ಲಿ ಬೌಂಡರಿ, ಎರಡನೇ ಎಸೆತದಲ್ಲಿ ಸಿಕ್ಸ್ ಸಿಡಿಸಿ ಅಬ್ಬರ ಆಟಕ್ಕೆ ಚಾಲನೆ ನೀಡಿದರು. ಸೂರ್ಯವಂಶಿ 15 ಎಸೆತಕ್ಕೆ ಅರ್ಧಶತಕ ಸಿಡಿಸಿ ಅಂತಿಮವಾಗಿ 52 ರನ್(17 ಎಸೆತ, 4 ಬೌಂಡರಿ, 5 ಸಿಕ್ಸ್) ಸಿಡಿಸಿ ಕ್ಯಾಚ್ ನೀಡಿ ಔಟಾದರು. ಸೂರ್ಯವಂಶಿಯ ಅಬ್ಬರದ ಆಟದಿಂದ ಮೊದಲ ವಿಕೆಟಿಗೆ 38 ಎಸೆತಗಳಲ್ಲಿ 75 ರನ್ ಬಂದಿತ್ತು. ಯಶಸ್ವಿ ಜೈಸ್ವಾಲ್ ಅವರು 38 ರನ್ಗಳೊಂದಿಗೆ ಅಜೇಯರಾಗಿ ಉಳಿದರು. ರಿಯಾನ್ ಪರಾಗ್ 14 ರನ್ಗಳು ಸೇರಿದಂತೆ ರಾಜಸ್ಥಾನ್ ತಂಡವು ಗುರಿಯನ್ನು ಸುಲಭವಾಗಿ ತಲುಪಿತು.
ಚೆನ್ನೈಗೆ ಆರಂಭದಲ್ಲೇ ಆಘಾತ
ಚೆನ್ನೈಗೆ ಆರಂಭದಲ್ಲೇ ಆರ್ಆರ್ ಬೌಲರ್ಗಳು ಶಾಕ್ ನೀಡಿದರು. ನಾಂಡ್ರೆ ಬರ್ಗರ್ ಸಂಜು ಸಾಮ್ಸನ್ ಅವರನ್ನು ನಾಯಕ ಋತುರಾಜ್ ಗಾಯಕ್ವಾಡ್ ಅವರನ್ನು ಜೋಫ್ರಾ ಆರ್ಚರ್ ಬೌಲ್ಡ್ ಮಾಡಿದರು. ನಂತರ ಸಂದೀಪ್ ಶರ್ಮಾ, ನಾಯಕ ರವೀಂದ್ರ ಜಡೇಜಾ ನಾವು ಕಡಿಮೆ ಇಲ್ಲ ಎನ್ನುವಂತೆ ಬೌಲಿಂಗ್ ಮಾಡಿದರು.




