ಗುವಹಾಟಿ : ಆರಂಭದಲ್ಲಿ ಬೌಲರ್ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ 8 ವಿಕೆಟ್ಗಳ ಜಯ ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.
ಗುವಾಹಟಿಯ ಬಾರ್ಸಾಪರ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ, ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಜಸ್ಥಾನ್ ಬೌಲರ್ಗಳ ಮುಂದೆ ತತ್ತರಿಸಿತು. ಹೀಗಾಗಿ ಚೆನ್ನೈ ನಿಗದಿತ 20 ಓವರ್ ಗಳಲ್ಲಿ 127 ರನ್ ಗಳಿಸಿ ಆಲೌಟ್ ಆಯಿತು. ಸುಲಭ ಸವಾಲನ್ನು ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್ 12.1 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 128ರನ್ ಹೊಡೆದು ಗೆಲುವು ಸಾಧಿಸಿತು.
ಸೂರ್ಯವಂಶಿ ತಾನು ಎದುರಿಸಿದ ಮೊದಲ ಎಸೆತದಲ್ಲಿ ಬೌಂಡರಿ, ಎರಡನೇ ಎಸೆತದಲ್ಲಿ ಸಿಕ್ಸ್ ಸಿಡಿಸಿ ಅಬ್ಬರ ಆಟಕ್ಕೆ ಚಾಲನೆ ನೀಡಿದರು. ಸೂರ್ಯವಂಶಿ 15 ಎಸೆತಕ್ಕೆ ಅರ್ಧಶತಕ ಸಿಡಿಸಿ ಅಂತಿಮವಾಗಿ 52 ರನ್(17 ಎಸೆತ, 4 ಬೌಂಡರಿ, 5 ಸಿಕ್ಸ್) ಸಿಡಿಸಿ ಕ್ಯಾಚ್ ನೀಡಿ ಔಟಾದರು. ಸೂರ್ಯವಂಶಿಯ ಅಬ್ಬರದ ಆಟದಿಂದ ಮೊದಲ ವಿಕೆಟಿಗೆ 38 ಎಸೆತಗಳಲ್ಲಿ 75 ರನ್ ಬಂದಿತ್ತು. ಯಶಸ್ವಿ ಜೈಸ್ವಾಲ್ ಅವರು 38 ರನ್ಗಳೊಂದಿಗೆ ಅಜೇಯರಾಗಿ ಉಳಿದರು. ರಿಯಾನ್ ಪರಾಗ್ 14 ರನ್ಗಳು ಸೇರಿದಂತೆ ರಾಜಸ್ಥಾನ್ ತಂಡವು ಗುರಿಯನ್ನು ಸುಲಭವಾಗಿ ತಲುಪಿತು.
ಚೆನ್ನೈಗೆ ಆರಂಭದಲ್ಲೇ ಆಘಾತ
ಚೆನ್ನೈಗೆ ಆರಂಭದಲ್ಲೇ ಆರ್ಆರ್ ಬೌಲರ್ಗಳು ಶಾಕ್ ನೀಡಿದರು. ನಾಂಡ್ರೆ ಬರ್ಗರ್ ಸಂಜು ಸಾಮ್ಸನ್ ಅವರನ್ನು ನಾಯಕ ಋತುರಾಜ್ ಗಾಯಕ್ವಾಡ್ ಅವರನ್ನು ಜೋಫ್ರಾ ಆರ್ಚರ್ ಬೌಲ್ಡ್ ಮಾಡಿದರು. ನಂತರ ಸಂದೀಪ್ ಶರ್ಮಾ, ನಾಯಕ ರವೀಂದ್ರ ಜಡೇಜಾ ನಾವು ಕಡಿಮೆ ಇಲ್ಲ ಎನ್ನುವಂತೆ ಬೌಲಿಂಗ್ ಮಾಡಿದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…