ಕ್ರೀಡೆ

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ರಾಜಸ್ಥಾನ ರಾಯಲ್ಸ್‌ 8 ವಿಕೆಟ್‌ಗಳ ಜಯ ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಗುವಾಹಟಿಯ ಬಾರ್ಸಾಪರ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ, ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಜಸ್ಥಾನ್‌ ಬೌಲರ್‌ಗಳ ಮುಂದೆ ತತ್ತರಿಸಿತು. ಹೀಗಾಗಿ ಚೆನ್ನೈ ನಿಗದಿತ 20 ಓವರ್ ಗಳಲ್ಲಿ 127 ರನ್ ಗಳಿಸಿ ಆಲೌಟ್‌ ಆಯಿತು. ಸುಲಭ ಸವಾಲನ್ನು ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್ 12.1 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 128ರನ್‌ ಹೊಡೆದು ಗೆಲುವು ಸಾಧಿಸಿತು.

ಸೂರ್ಯವಂಶಿ ತಾನು ಎದುರಿಸಿದ ಮೊದಲ ಎಸೆತದಲ್ಲಿ ಬೌಂಡರಿ, ಎರಡನೇ ಎಸೆತದಲ್ಲಿ ಸಿಕ್ಸ್‌ ಸಿಡಿಸಿ ಅಬ್ಬರ ಆಟಕ್ಕೆ ಚಾಲನೆ ನೀಡಿದರು. ಸೂರ್ಯವಂಶಿ 15 ಎಸೆತಕ್ಕೆ ಅರ್ಧಶತಕ ಸಿಡಿಸಿ ಅಂತಿಮವಾಗಿ 52 ರನ್‌(17 ಎಸೆತ, 4 ಬೌಂಡರಿ, 5 ಸಿಕ್ಸ್‌) ಸಿಡಿಸಿ ಕ್ಯಾಚ್‌ ನೀಡಿ ಔಟಾದರು. ಸೂರ್ಯವಂಶಿಯ ಅಬ್ಬರದ ಆಟದಿಂದ ಮೊದಲ ವಿಕೆಟಿಗೆ 38 ಎಸೆತಗಳಲ್ಲಿ 75 ರನ್‌ ಬಂದಿತ್ತು. ಯಶಸ್ವಿ ಜೈಸ್ವಾಲ್ ಅವರು 38 ರನ್‌ಗಳೊಂದಿಗೆ ಅಜೇಯರಾಗಿ ಉಳಿದರು. ರಿಯಾನ್ ಪರಾಗ್ 14 ರನ್‌ಗಳು ಸೇರಿದಂತೆ ರಾಜಸ್ಥಾನ್ ತಂಡವು ಗುರಿಯನ್ನು ಸುಲಭವಾಗಿ ತಲುಪಿತು.

ಚೆನ್ನೈಗೆ ಆರಂಭದಲ್ಲೇ ಆಘಾತ
ಚೆನ್ನೈಗೆ ಆರಂಭದಲ್ಲೇ ಆರ್‌ಆರ್‌ ಬೌಲರ್‌ಗಳು ಶಾಕ್‌ ನೀಡಿದರು. ನಾಂಡ್ರೆ ಬರ್ಗರ್ ಸಂಜು ಸಾಮ್ಸನ್‌ ಅವರನ್ನು ನಾಯಕ ಋತುರಾಜ್‌ ಗಾಯಕ್ವಾಡ್‌ ಅವರನ್ನು ಜೋಫ್ರಾ ಆರ್ಚರ್‌ ಬೌಲ್ಡ್‌ ಮಾಡಿದರು. ನಂತರ ಸಂದೀಪ್‌ ಶರ್ಮಾ, ನಾಯಕ ರವೀಂದ್ರ ಜಡೇಜಾ ನಾವು ಕಡಿಮೆ ಇಲ್ಲ ಎನ್ನುವಂತೆ ಬೌಲಿಂಗ್‌ ಮಾಡಿದರು.

ಆಂದೋಲನ ಡೆಸ್ಕ್

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

19 mins ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

26 mins ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

31 mins ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

36 mins ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

41 mins ago