ಕ್ರೀಡೆ

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ ವರುಣ್‌ ಆರನ್‌…

ಹೊಸದಿಲ್ಲಿ: ಒಂದು ಕಾಲದಲ್ಲಿ ಭಾರತ ತಂಡದ ವೇಗದ ಬೌಲರ್‌ ಎಂದು ಗುರುತಿಸಿಕೊಂಡಿದ್ದ 35 ವರ್ಷದ ವರುಣ್‌ ಆರನ್‌ ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ವಿಜಯ್‌ ಹಜಾರೆ ಟೂರ್ನಿಯಲ್ಲಿ ಜಾರ್ಖಂಡ್‌ ತಂಡ ಪ್ರತಿನಿಧಿಸಿದ್ದ ವರುಣ್‌ ಟೂರ್ನಿಯಿಂದ ತಂಡ ಹೊರಬಿದ್ದ ನಂತರ ವಿದಾಯ ಘೋಷಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿರುವ ಅವರು, 20 ವರ್ಷಗಳಿಂದ ನನ್ನ ಜೀವನ, ಉಸಿರು ಕ್ರಿಕೆಟ್‌ ಆಗಿತ್ತು. ಗಾಯದ ಸಮಸ್ಯೆಗಳು ನನ್ನನ್ನು ಭಾರತ ತಂಡದಿಂದ ದೂರ ಉಳಿಯುವಂತೆ ಮಾಡಿದೆ. ಆದ ಕಾರಣ ನಾನು ಕ್ರಿಕೆಟ್‌ನ ಎಲ್ಲ ಮಾದರಿಗೂ ನಿವೃತ್ತಿ ಷೋಷಿಸುತ್ತಿದ್ದೇನೆ ಎಂದು ಬರೆದು ಕೊಂಡಿದ್ದಾರೆ. 2015ರ ನಂತರ ಅವರು ಭಾರತ ತಂಡದಲ್ಲಿ ಆಟ ಆಡಿರಲಿಲ್ಲ.

21ನೇ ವಯಸ್ಸಿನಲ್ಲಿ ವೇಗದ ಬೌಲರ್‌ ಆಗಿ 2010-11ರಲ್ಲಿ ವಿಜಯ್‌ ಹಜಾರೆ ಟ್ರೋಫಿಯಲ್ಲಿ ದೇಶದ ಗಮನ ಸೆಳೆದಿದ್ದರು. ಗುಜರಾತ್‌ ವಿರುದ್ಧ ಫೈನಲ್‌ನಲ್ಲಿ ಪ್ರತಿ ಗಂಟೆಗೆ 153 ಕಿ.ಮೀ ವೇಗದಲ್ಲಿ ಬೌಲಿಂಗ್‌ ಮಾಡಿದ್ದರು.

2011 ರಲ್ಲಿ ಭಾರತ ತಂಡಕ್ಕೆ ಪಾದರ್ಪಣೆ ಮಾಡಿದ ವರುಣ್‌ ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯಲ್ಲಿ ಆಡಿದ್ದರು. ಅದೇ ವರ್ಷ ವೆಸ್ಟ್‌ ಇಂಡೀಶ್ ವಿರುದ್ಧದ ಟೆಸ್ಟ್‌ಗೂ ಪಾದರ್ಪಣೆ ಮಾಡಿದ್ದರು.

ಅಂತರಾಷ್ಟ್ರೀಯ ಮಟ್ಟದಲ್ಲಿ 9 ಏಕದಿನ ಮತ್ತು 9 ಟೆಸ್ಟ್‌ ಪಂದ್ಯವಾಡಿರುವ ವರುಣ್‌ 29 ವಿಕೆಟ್‌ ಪಡೆದಿದ್ದಾರೆ.

ಲಿಸ್ಟ್‌ ಎ ನಲ್ಲಿ 88 ಪಂದ್ಯಗಳು ಆಡಿರುವ ವರುಣ್‌ 24.67ರ ಸರಾಸರಿಯಲ್ಲಿ 141 ವಿಕೆಟ್‌ಗಳನ್ನು ಪಡೆದಿದ್ದಾರೆ. 2011 ರಿಂದ 2022 ರ ಅವಧಿಯಲ್ಲಿ ಆರ್‌ಸಿಬಿ ಸೇರಿ ಐದು ಐಪಿಎಲ್‌ ತಂಡಗಳನ್ನು ಪ್ರತಿನಿಧಿಸಿ 52 ಪಂದ್ಯಗಳಿಂದ 44 ವಿಕೆಟ್‌ ಗಳಿಸಿದ್ದಾರೆ. 2022 ರಲ್ಲಿ ಗುಜರಾತ್‌ ಟೈಟಾನ್ಸ್‌ ಐಪಿಎಲ್‌ ಟೂರ್ನಿ ಗೆದ್ದಾಗ ಆ ತಂಡವನ್ನು ಪ್ರತಿನಿಧಿಸಿದ್ದರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

2 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

2 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

2 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

3 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

4 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

4 hours ago