ಕ್ರೀಡೆ

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ ವರುಣ್‌ ಆರನ್‌…

ಹೊಸದಿಲ್ಲಿ: ಒಂದು ಕಾಲದಲ್ಲಿ ಭಾರತ ತಂಡದ ವೇಗದ ಬೌಲರ್‌ ಎಂದು ಗುರುತಿಸಿಕೊಂಡಿದ್ದ 35 ವರ್ಷದ ವರುಣ್‌ ಆರನ್‌ ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ವಿಜಯ್‌ ಹಜಾರೆ ಟೂರ್ನಿಯಲ್ಲಿ ಜಾರ್ಖಂಡ್‌ ತಂಡ ಪ್ರತಿನಿಧಿಸಿದ್ದ ವರುಣ್‌ ಟೂರ್ನಿಯಿಂದ ತಂಡ ಹೊರಬಿದ್ದ ನಂತರ ವಿದಾಯ ಘೋಷಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿರುವ ಅವರು, 20 ವರ್ಷಗಳಿಂದ ನನ್ನ ಜೀವನ, ಉಸಿರು ಕ್ರಿಕೆಟ್‌ ಆಗಿತ್ತು. ಗಾಯದ ಸಮಸ್ಯೆಗಳು ನನ್ನನ್ನು ಭಾರತ ತಂಡದಿಂದ ದೂರ ಉಳಿಯುವಂತೆ ಮಾಡಿದೆ. ಆದ ಕಾರಣ ನಾನು ಕ್ರಿಕೆಟ್‌ನ ಎಲ್ಲ ಮಾದರಿಗೂ ನಿವೃತ್ತಿ ಷೋಷಿಸುತ್ತಿದ್ದೇನೆ ಎಂದು ಬರೆದು ಕೊಂಡಿದ್ದಾರೆ. 2015ರ ನಂತರ ಅವರು ಭಾರತ ತಂಡದಲ್ಲಿ ಆಟ ಆಡಿರಲಿಲ್ಲ.

21ನೇ ವಯಸ್ಸಿನಲ್ಲಿ ವೇಗದ ಬೌಲರ್‌ ಆಗಿ 2010-11ರಲ್ಲಿ ವಿಜಯ್‌ ಹಜಾರೆ ಟ್ರೋಫಿಯಲ್ಲಿ ದೇಶದ ಗಮನ ಸೆಳೆದಿದ್ದರು. ಗುಜರಾತ್‌ ವಿರುದ್ಧ ಫೈನಲ್‌ನಲ್ಲಿ ಪ್ರತಿ ಗಂಟೆಗೆ 153 ಕಿ.ಮೀ ವೇಗದಲ್ಲಿ ಬೌಲಿಂಗ್‌ ಮಾಡಿದ್ದರು.

2011 ರಲ್ಲಿ ಭಾರತ ತಂಡಕ್ಕೆ ಪಾದರ್ಪಣೆ ಮಾಡಿದ ವರುಣ್‌ ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯಲ್ಲಿ ಆಡಿದ್ದರು. ಅದೇ ವರ್ಷ ವೆಸ್ಟ್‌ ಇಂಡೀಶ್ ವಿರುದ್ಧದ ಟೆಸ್ಟ್‌ಗೂ ಪಾದರ್ಪಣೆ ಮಾಡಿದ್ದರು.

ಅಂತರಾಷ್ಟ್ರೀಯ ಮಟ್ಟದಲ್ಲಿ 9 ಏಕದಿನ ಮತ್ತು 9 ಟೆಸ್ಟ್‌ ಪಂದ್ಯವಾಡಿರುವ ವರುಣ್‌ 29 ವಿಕೆಟ್‌ ಪಡೆದಿದ್ದಾರೆ.

ಲಿಸ್ಟ್‌ ಎ ನಲ್ಲಿ 88 ಪಂದ್ಯಗಳು ಆಡಿರುವ ವರುಣ್‌ 24.67ರ ಸರಾಸರಿಯಲ್ಲಿ 141 ವಿಕೆಟ್‌ಗಳನ್ನು ಪಡೆದಿದ್ದಾರೆ. 2011 ರಿಂದ 2022 ರ ಅವಧಿಯಲ್ಲಿ ಆರ್‌ಸಿಬಿ ಸೇರಿ ಐದು ಐಪಿಎಲ್‌ ತಂಡಗಳನ್ನು ಪ್ರತಿನಿಧಿಸಿ 52 ಪಂದ್ಯಗಳಿಂದ 44 ವಿಕೆಟ್‌ ಗಳಿಸಿದ್ದಾರೆ. 2022 ರಲ್ಲಿ ಗುಜರಾತ್‌ ಟೈಟಾನ್ಸ್‌ ಐಪಿಎಲ್‌ ಟೂರ್ನಿ ಗೆದ್ದಾಗ ಆ ತಂಡವನ್ನು ಪ್ರತಿನಿಧಿಸಿದ್ದರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

3 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

3 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

3 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

3 hours ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

11 hours ago