ಕ್ರೀಡೆ

ಆರ್‌ಸಿಬಿ ಸಂಘಟಿತ ಹೋರಾಟಕ್ಕೆ ಸಂದ ಜಯ: ಫ್ಲೇ-ಆಫ್‌ ಕಸಸು ಜೀವಂತ

ಜೋಧ್​ಪುರ್​: ಬೌಲರ್​ಗಳ ಸಂಘಟಿತ ದಾಳಿಯ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವು ರಾಜಸ್ಥಾನ ರಾಯಲ್ಸ್​ ವಿರುದ್ಧ 112ರನ್​ಗಳ ಜಯ ದಾಖಲಿಸಿತು.

ಇಲ್ಲಿನ ಜೋಧ್​ಪುರದ ಸವಾಯಿ ಮಾನ್​ಸಿಂಗ್​ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 171ರನ್​ ಗಳಿಸಿತ್ತು. ಆರ್‌ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ವಿರಾಟ್‌ ಕೊಹ್ಲಿ 18(19) ಆಸಿಫ್‌ಗೆ ವಿಕೆಟ್‌ ಒಪ್ಪಿಸಿ ನಿರ್ಗಮಿಸಿದರು. ನಂತರ ನಾಯಕ ಫಾಪ್‌ ಡು ಪ್ಲೆಸಿ (55 ರನ್​, 44 ಎಸೆತ, 3 ಬೌಂಡರಿ, 2 ಸಿಕ್ಸರ್​) ಮತ್ತು ಮ್ಯಾಕ್ಸ್‌ವೆಲ್‌ (54 ರನ್​, 33 ಎಸೆತ, 5 ಬೌಂಡರಿ, 3 ಸಿಕ್ಸರ್​) ಜುಗಲ್‌ ಬಂದಿ ಪ್ರದರರ್ಶನ ತೋರುವ ಮೂಲಕ ಸ್ಪರ್ಧಾತ್ಮಕ ಮೊತ್ತ ದಾಖಲಿಸಲು ನೆರವಾದರು.

ಆರ್‌ಸಿಬಿ ನೀಡಿದ 171 ರನ್‌ ಗುರಿ ಬೆನ್ನತ್ತಿದ್ದ ರಾಜಸ್ಥಾನ ರಾಯಲ್ಸ್​ ತಂಡಕ್ಕೆ ಆರ್​ಸಿಬಿ ಬೌಲರ್​ಗಳು ಕಾಡಿದರು. ಆರಂಬಿಕ ಆಟಗಾರರಾದ ಯಶಸ್ವಿ ಜೈಸ್ವಾಲ್‌ ಮತ್ತು ಜಾಸ್‌ ಬಟ್ಲರ್‌ ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿ ನಡೆದರು. ನಾಯಕ ಸ್ಯಾಮ್ಸನ್‌ 4 ರನ್‌ ಗಳಿಸಿ ಪೆವಿಲನ್‌ ಕಡೆ ಮುಖ ಮಾಡಿದರು. ಶಿಮ್ರೋನ್​ ಹೆಟ್ಮೆಯರ್​(35 ರನ್​, 19 ಎಸೆತ, 1 ಬೌಂಡರಿ, 4 ಸಿಕ್ಸರ್​) ರಾಜಸ್ಥಾನ ತಂಡಕ್ಕೆ ಅಲ್ಪ ಚೇತರಿಕೆ ನೀಡಿದರು, ಆದರೆ ಉಳಿದ ಆಟಗಾರರು ಪೆವಿಲಿಯನ್‌ ಪೆರೇಡ್‌ ನಡೆಸಿದರು. ಆರ್​ಸಿಬಿ ಬೌಲರ್​ಗಳ ಸಂಘಟಿತ ದಾಳಿಗೆ ನಲುಗಿದ ತಂಡವು 59ರನ್​ಗಳಿಗೆ ಸರ್ವಪತನ ಕಂಡಿತು.

ಆರ್‌ಸಿಬಿ ಪರ ವೇಯ್ನ್​ ಪಾರ್ನೆಲ್ (3 ಓವರ್‌, 10ರನ್‌, 3 ವಿಕೆಟ್‌) ಕಬಳಿಸಿದರು. ಮೈಕೆಲ್​ ಬ್ರೇಸ್​ವೆಲ್​, ಮತ್ತು ಕರಣ್‌ ಶರ್ಮಾ ತಲಾ 2 ವಿಕೆಟ್‌ ಪಡೆದರು. ಮೊಹಮ್ಮದ್​ ಸಿರಾಜ್ ಹಾಗೂ ಗ್ಲೇನ್‌ ಮ್ಯಾಕ್ಸ್‌ವೆಲ್‌ ತಲಾ ಒಂದು ವಿಕೆಟ್‌ ಪಡೆಯುವ ಮೂಲಕ ರಾಜಸ್ಥಾನ್‌ ತಂಡವನ್ನು 10.3 ಓವರಗಳಲ್ಲಿ 59 ರನ್‌ ಗಳಿಗೆ ಕಟ್ಟಿ ಹಾಕಲು ಶಕ್ತರಾದರು.

ಪಂದ್ಯಶ್ರೇಷ್ಠ: ವೇಯ್ನ್‌ ಪಾರ್ನೆಲ್‌.

andolanait

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

8 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

11 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

11 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

11 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

11 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

11 hours ago