ಜೋಧ್ಪುರ್: ಬೌಲರ್ಗಳ ಸಂಘಟಿತ ದಾಳಿಯ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ ರಾಯಲ್ಸ್ ವಿರುದ್ಧ 112ರನ್ಗಳ ಜಯ ದಾಖಲಿಸಿತು.
ಇಲ್ಲಿನ ಜೋಧ್ಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡವು 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 171ರನ್ ಗಳಿಸಿತ್ತು. ಆರ್ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 18(19) ಆಸಿಫ್ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸಿದರು. ನಂತರ ನಾಯಕ ಫಾಪ್ ಡು ಪ್ಲೆಸಿ (55 ರನ್, 44 ಎಸೆತ, 3 ಬೌಂಡರಿ, 2 ಸಿಕ್ಸರ್) ಮತ್ತು ಮ್ಯಾಕ್ಸ್ವೆಲ್ (54 ರನ್, 33 ಎಸೆತ, 5 ಬೌಂಡರಿ, 3 ಸಿಕ್ಸರ್) ಜುಗಲ್ ಬಂದಿ ಪ್ರದರರ್ಶನ ತೋರುವ ಮೂಲಕ ಸ್ಪರ್ಧಾತ್ಮಕ ಮೊತ್ತ ದಾಖಲಿಸಲು ನೆರವಾದರು.
ಆರ್ಸಿಬಿ ನೀಡಿದ 171 ರನ್ ಗುರಿ ಬೆನ್ನತ್ತಿದ್ದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಆರ್ಸಿಬಿ ಬೌಲರ್ಗಳು ಕಾಡಿದರು. ಆರಂಬಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ ಮತ್ತು ಜಾಸ್ ಬಟ್ಲರ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ನಡೆದರು. ನಾಯಕ ಸ್ಯಾಮ್ಸನ್ 4 ರನ್ ಗಳಿಸಿ ಪೆವಿಲನ್ ಕಡೆ ಮುಖ ಮಾಡಿದರು. ಶಿಮ್ರೋನ್ ಹೆಟ್ಮೆಯರ್(35 ರನ್, 19 ಎಸೆತ, 1 ಬೌಂಡರಿ, 4 ಸಿಕ್ಸರ್) ರಾಜಸ್ಥಾನ ತಂಡಕ್ಕೆ ಅಲ್ಪ ಚೇತರಿಕೆ ನೀಡಿದರು, ಆದರೆ ಉಳಿದ ಆಟಗಾರರು ಪೆವಿಲಿಯನ್ ಪೆರೇಡ್ ನಡೆಸಿದರು. ಆರ್ಸಿಬಿ ಬೌಲರ್ಗಳ ಸಂಘಟಿತ ದಾಳಿಗೆ ನಲುಗಿದ ತಂಡವು 59ರನ್ಗಳಿಗೆ ಸರ್ವಪತನ ಕಂಡಿತು.
ಆರ್ಸಿಬಿ ಪರ ವೇಯ್ನ್ ಪಾರ್ನೆಲ್ (3 ಓವರ್, 10ರನ್, 3 ವಿಕೆಟ್) ಕಬಳಿಸಿದರು. ಮೈಕೆಲ್ ಬ್ರೇಸ್ವೆಲ್, ಮತ್ತು ಕರಣ್ ಶರ್ಮಾ ತಲಾ 2 ವಿಕೆಟ್ ಪಡೆದರು. ಮೊಹಮ್ಮದ್ ಸಿರಾಜ್ ಹಾಗೂ ಗ್ಲೇನ್ ಮ್ಯಾಕ್ಸ್ವೆಲ್ ತಲಾ ಒಂದು ವಿಕೆಟ್ ಪಡೆಯುವ ಮೂಲಕ ರಾಜಸ್ಥಾನ್ ತಂಡವನ್ನು 10.3 ಓವರಗಳಲ್ಲಿ 59 ರನ್ ಗಳಿಗೆ ಕಟ್ಟಿ ಹಾಕಲು ಶಕ್ತರಾದರು.
ಪಂದ್ಯಶ್ರೇಷ್ಠ: ವೇಯ್ನ್ ಪಾರ್ನೆಲ್.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…