ಕ್ರೀಡೆ

ಆರ್‌ಸಿಬಿ ಸಂಘಟಿತ ಹೋರಾಟಕ್ಕೆ ಸಂದ ಜಯ: ಫ್ಲೇ-ಆಫ್‌ ಕಸಸು ಜೀವಂತ

ಜೋಧ್​ಪುರ್​: ಬೌಲರ್​ಗಳ ಸಂಘಟಿತ ದಾಳಿಯ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವು ರಾಜಸ್ಥಾನ ರಾಯಲ್ಸ್​ ವಿರುದ್ಧ 112ರನ್​ಗಳ ಜಯ ದಾಖಲಿಸಿತು.

ಇಲ್ಲಿನ ಜೋಧ್​ಪುರದ ಸವಾಯಿ ಮಾನ್​ಸಿಂಗ್​ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 171ರನ್​ ಗಳಿಸಿತ್ತು. ಆರ್‌ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ವಿರಾಟ್‌ ಕೊಹ್ಲಿ 18(19) ಆಸಿಫ್‌ಗೆ ವಿಕೆಟ್‌ ಒಪ್ಪಿಸಿ ನಿರ್ಗಮಿಸಿದರು. ನಂತರ ನಾಯಕ ಫಾಪ್‌ ಡು ಪ್ಲೆಸಿ (55 ರನ್​, 44 ಎಸೆತ, 3 ಬೌಂಡರಿ, 2 ಸಿಕ್ಸರ್​) ಮತ್ತು ಮ್ಯಾಕ್ಸ್‌ವೆಲ್‌ (54 ರನ್​, 33 ಎಸೆತ, 5 ಬೌಂಡರಿ, 3 ಸಿಕ್ಸರ್​) ಜುಗಲ್‌ ಬಂದಿ ಪ್ರದರರ್ಶನ ತೋರುವ ಮೂಲಕ ಸ್ಪರ್ಧಾತ್ಮಕ ಮೊತ್ತ ದಾಖಲಿಸಲು ನೆರವಾದರು.

ಆರ್‌ಸಿಬಿ ನೀಡಿದ 171 ರನ್‌ ಗುರಿ ಬೆನ್ನತ್ತಿದ್ದ ರಾಜಸ್ಥಾನ ರಾಯಲ್ಸ್​ ತಂಡಕ್ಕೆ ಆರ್​ಸಿಬಿ ಬೌಲರ್​ಗಳು ಕಾಡಿದರು. ಆರಂಬಿಕ ಆಟಗಾರರಾದ ಯಶಸ್ವಿ ಜೈಸ್ವಾಲ್‌ ಮತ್ತು ಜಾಸ್‌ ಬಟ್ಲರ್‌ ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿ ನಡೆದರು. ನಾಯಕ ಸ್ಯಾಮ್ಸನ್‌ 4 ರನ್‌ ಗಳಿಸಿ ಪೆವಿಲನ್‌ ಕಡೆ ಮುಖ ಮಾಡಿದರು. ಶಿಮ್ರೋನ್​ ಹೆಟ್ಮೆಯರ್​(35 ರನ್​, 19 ಎಸೆತ, 1 ಬೌಂಡರಿ, 4 ಸಿಕ್ಸರ್​) ರಾಜಸ್ಥಾನ ತಂಡಕ್ಕೆ ಅಲ್ಪ ಚೇತರಿಕೆ ನೀಡಿದರು, ಆದರೆ ಉಳಿದ ಆಟಗಾರರು ಪೆವಿಲಿಯನ್‌ ಪೆರೇಡ್‌ ನಡೆಸಿದರು. ಆರ್​ಸಿಬಿ ಬೌಲರ್​ಗಳ ಸಂಘಟಿತ ದಾಳಿಗೆ ನಲುಗಿದ ತಂಡವು 59ರನ್​ಗಳಿಗೆ ಸರ್ವಪತನ ಕಂಡಿತು.

ಆರ್‌ಸಿಬಿ ಪರ ವೇಯ್ನ್​ ಪಾರ್ನೆಲ್ (3 ಓವರ್‌, 10ರನ್‌, 3 ವಿಕೆಟ್‌) ಕಬಳಿಸಿದರು. ಮೈಕೆಲ್​ ಬ್ರೇಸ್​ವೆಲ್​, ಮತ್ತು ಕರಣ್‌ ಶರ್ಮಾ ತಲಾ 2 ವಿಕೆಟ್‌ ಪಡೆದರು. ಮೊಹಮ್ಮದ್​ ಸಿರಾಜ್ ಹಾಗೂ ಗ್ಲೇನ್‌ ಮ್ಯಾಕ್ಸ್‌ವೆಲ್‌ ತಲಾ ಒಂದು ವಿಕೆಟ್‌ ಪಡೆಯುವ ಮೂಲಕ ರಾಜಸ್ಥಾನ್‌ ತಂಡವನ್ನು 10.3 ಓವರಗಳಲ್ಲಿ 59 ರನ್‌ ಗಳಿಗೆ ಕಟ್ಟಿ ಹಾಕಲು ಶಕ್ತರಾದರು.

ಪಂದ್ಯಶ್ರೇಷ್ಠ: ವೇಯ್ನ್‌ ಪಾರ್ನೆಲ್‌.

andolanait

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

5 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

8 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

8 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

8 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

9 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

11 hours ago