ಕ್ರೀಡೆ

ಆರ್‌ಸಿಬಿ ಸಂಘಟಿತ ಹೋರಾಟಕ್ಕೆ ಸಂದ ಜಯ: ಫ್ಲೇ-ಆಫ್‌ ಕಸಸು ಜೀವಂತ

ಜೋಧ್​ಪುರ್​: ಬೌಲರ್​ಗಳ ಸಂಘಟಿತ ದಾಳಿಯ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವು ರಾಜಸ್ಥಾನ ರಾಯಲ್ಸ್​ ವಿರುದ್ಧ 112ರನ್​ಗಳ ಜಯ ದಾಖಲಿಸಿತು.

ಇಲ್ಲಿನ ಜೋಧ್​ಪುರದ ಸವಾಯಿ ಮಾನ್​ಸಿಂಗ್​ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 171ರನ್​ ಗಳಿಸಿತ್ತು. ಆರ್‌ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ವಿರಾಟ್‌ ಕೊಹ್ಲಿ 18(19) ಆಸಿಫ್‌ಗೆ ವಿಕೆಟ್‌ ಒಪ್ಪಿಸಿ ನಿರ್ಗಮಿಸಿದರು. ನಂತರ ನಾಯಕ ಫಾಪ್‌ ಡು ಪ್ಲೆಸಿ (55 ರನ್​, 44 ಎಸೆತ, 3 ಬೌಂಡರಿ, 2 ಸಿಕ್ಸರ್​) ಮತ್ತು ಮ್ಯಾಕ್ಸ್‌ವೆಲ್‌ (54 ರನ್​, 33 ಎಸೆತ, 5 ಬೌಂಡರಿ, 3 ಸಿಕ್ಸರ್​) ಜುಗಲ್‌ ಬಂದಿ ಪ್ರದರರ್ಶನ ತೋರುವ ಮೂಲಕ ಸ್ಪರ್ಧಾತ್ಮಕ ಮೊತ್ತ ದಾಖಲಿಸಲು ನೆರವಾದರು.

ಆರ್‌ಸಿಬಿ ನೀಡಿದ 171 ರನ್‌ ಗುರಿ ಬೆನ್ನತ್ತಿದ್ದ ರಾಜಸ್ಥಾನ ರಾಯಲ್ಸ್​ ತಂಡಕ್ಕೆ ಆರ್​ಸಿಬಿ ಬೌಲರ್​ಗಳು ಕಾಡಿದರು. ಆರಂಬಿಕ ಆಟಗಾರರಾದ ಯಶಸ್ವಿ ಜೈಸ್ವಾಲ್‌ ಮತ್ತು ಜಾಸ್‌ ಬಟ್ಲರ್‌ ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿ ನಡೆದರು. ನಾಯಕ ಸ್ಯಾಮ್ಸನ್‌ 4 ರನ್‌ ಗಳಿಸಿ ಪೆವಿಲನ್‌ ಕಡೆ ಮುಖ ಮಾಡಿದರು. ಶಿಮ್ರೋನ್​ ಹೆಟ್ಮೆಯರ್​(35 ರನ್​, 19 ಎಸೆತ, 1 ಬೌಂಡರಿ, 4 ಸಿಕ್ಸರ್​) ರಾಜಸ್ಥಾನ ತಂಡಕ್ಕೆ ಅಲ್ಪ ಚೇತರಿಕೆ ನೀಡಿದರು, ಆದರೆ ಉಳಿದ ಆಟಗಾರರು ಪೆವಿಲಿಯನ್‌ ಪೆರೇಡ್‌ ನಡೆಸಿದರು. ಆರ್​ಸಿಬಿ ಬೌಲರ್​ಗಳ ಸಂಘಟಿತ ದಾಳಿಗೆ ನಲುಗಿದ ತಂಡವು 59ರನ್​ಗಳಿಗೆ ಸರ್ವಪತನ ಕಂಡಿತು.

ಆರ್‌ಸಿಬಿ ಪರ ವೇಯ್ನ್​ ಪಾರ್ನೆಲ್ (3 ಓವರ್‌, 10ರನ್‌, 3 ವಿಕೆಟ್‌) ಕಬಳಿಸಿದರು. ಮೈಕೆಲ್​ ಬ್ರೇಸ್​ವೆಲ್​, ಮತ್ತು ಕರಣ್‌ ಶರ್ಮಾ ತಲಾ 2 ವಿಕೆಟ್‌ ಪಡೆದರು. ಮೊಹಮ್ಮದ್​ ಸಿರಾಜ್ ಹಾಗೂ ಗ್ಲೇನ್‌ ಮ್ಯಾಕ್ಸ್‌ವೆಲ್‌ ತಲಾ ಒಂದು ವಿಕೆಟ್‌ ಪಡೆಯುವ ಮೂಲಕ ರಾಜಸ್ಥಾನ್‌ ತಂಡವನ್ನು 10.3 ಓವರಗಳಲ್ಲಿ 59 ರನ್‌ ಗಳಿಗೆ ಕಟ್ಟಿ ಹಾಕಲು ಶಕ್ತರಾದರು.

ಪಂದ್ಯಶ್ರೇಷ್ಠ: ವೇಯ್ನ್‌ ಪಾರ್ನೆಲ್‌.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago