ಕ್ರೀಡೆ

ಆರ್‌ಸಿಬಿ ಸಂಘಟಿತ ಹೋರಾಟಕ್ಕೆ ಸಂದ ಜಯ: ಫ್ಲೇ-ಆಫ್‌ ಕಸಸು ಜೀವಂತ

ಜೋಧ್​ಪುರ್​: ಬೌಲರ್​ಗಳ ಸಂಘಟಿತ ದಾಳಿಯ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವು ರಾಜಸ್ಥಾನ ರಾಯಲ್ಸ್​ ವಿರುದ್ಧ 112ರನ್​ಗಳ ಜಯ ದಾಖಲಿಸಿತು.

ಇಲ್ಲಿನ ಜೋಧ್​ಪುರದ ಸವಾಯಿ ಮಾನ್​ಸಿಂಗ್​ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 171ರನ್​ ಗಳಿಸಿತ್ತು. ಆರ್‌ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ವಿರಾಟ್‌ ಕೊಹ್ಲಿ 18(19) ಆಸಿಫ್‌ಗೆ ವಿಕೆಟ್‌ ಒಪ್ಪಿಸಿ ನಿರ್ಗಮಿಸಿದರು. ನಂತರ ನಾಯಕ ಫಾಪ್‌ ಡು ಪ್ಲೆಸಿ (55 ರನ್​, 44 ಎಸೆತ, 3 ಬೌಂಡರಿ, 2 ಸಿಕ್ಸರ್​) ಮತ್ತು ಮ್ಯಾಕ್ಸ್‌ವೆಲ್‌ (54 ರನ್​, 33 ಎಸೆತ, 5 ಬೌಂಡರಿ, 3 ಸಿಕ್ಸರ್​) ಜುಗಲ್‌ ಬಂದಿ ಪ್ರದರರ್ಶನ ತೋರುವ ಮೂಲಕ ಸ್ಪರ್ಧಾತ್ಮಕ ಮೊತ್ತ ದಾಖಲಿಸಲು ನೆರವಾದರು.

ಆರ್‌ಸಿಬಿ ನೀಡಿದ 171 ರನ್‌ ಗುರಿ ಬೆನ್ನತ್ತಿದ್ದ ರಾಜಸ್ಥಾನ ರಾಯಲ್ಸ್​ ತಂಡಕ್ಕೆ ಆರ್​ಸಿಬಿ ಬೌಲರ್​ಗಳು ಕಾಡಿದರು. ಆರಂಬಿಕ ಆಟಗಾರರಾದ ಯಶಸ್ವಿ ಜೈಸ್ವಾಲ್‌ ಮತ್ತು ಜಾಸ್‌ ಬಟ್ಲರ್‌ ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿ ನಡೆದರು. ನಾಯಕ ಸ್ಯಾಮ್ಸನ್‌ 4 ರನ್‌ ಗಳಿಸಿ ಪೆವಿಲನ್‌ ಕಡೆ ಮುಖ ಮಾಡಿದರು. ಶಿಮ್ರೋನ್​ ಹೆಟ್ಮೆಯರ್​(35 ರನ್​, 19 ಎಸೆತ, 1 ಬೌಂಡರಿ, 4 ಸಿಕ್ಸರ್​) ರಾಜಸ್ಥಾನ ತಂಡಕ್ಕೆ ಅಲ್ಪ ಚೇತರಿಕೆ ನೀಡಿದರು, ಆದರೆ ಉಳಿದ ಆಟಗಾರರು ಪೆವಿಲಿಯನ್‌ ಪೆರೇಡ್‌ ನಡೆಸಿದರು. ಆರ್​ಸಿಬಿ ಬೌಲರ್​ಗಳ ಸಂಘಟಿತ ದಾಳಿಗೆ ನಲುಗಿದ ತಂಡವು 59ರನ್​ಗಳಿಗೆ ಸರ್ವಪತನ ಕಂಡಿತು.

ಆರ್‌ಸಿಬಿ ಪರ ವೇಯ್ನ್​ ಪಾರ್ನೆಲ್ (3 ಓವರ್‌, 10ರನ್‌, 3 ವಿಕೆಟ್‌) ಕಬಳಿಸಿದರು. ಮೈಕೆಲ್​ ಬ್ರೇಸ್​ವೆಲ್​, ಮತ್ತು ಕರಣ್‌ ಶರ್ಮಾ ತಲಾ 2 ವಿಕೆಟ್‌ ಪಡೆದರು. ಮೊಹಮ್ಮದ್​ ಸಿರಾಜ್ ಹಾಗೂ ಗ್ಲೇನ್‌ ಮ್ಯಾಕ್ಸ್‌ವೆಲ್‌ ತಲಾ ಒಂದು ವಿಕೆಟ್‌ ಪಡೆಯುವ ಮೂಲಕ ರಾಜಸ್ಥಾನ್‌ ತಂಡವನ್ನು 10.3 ಓವರಗಳಲ್ಲಿ 59 ರನ್‌ ಗಳಿಗೆ ಕಟ್ಟಿ ಹಾಕಲು ಶಕ್ತರಾದರು.

ಪಂದ್ಯಶ್ರೇಷ್ಠ: ವೇಯ್ನ್‌ ಪಾರ್ನೆಲ್‌.

andolanait

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

2 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

15 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

15 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

15 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

15 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

15 hours ago