ಜೋಧ್ಪುರ್: ಬೌಲರ್ಗಳ ಸಂಘಟಿತ ದಾಳಿಯ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ ರಾಯಲ್ಸ್ ವಿರುದ್ಧ 112ರನ್ಗಳ ಜಯ ದಾಖಲಿಸಿತು.
ಇಲ್ಲಿನ ಜೋಧ್ಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡವು 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 171ರನ್ ಗಳಿಸಿತ್ತು. ಆರ್ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 18(19) ಆಸಿಫ್ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸಿದರು. ನಂತರ ನಾಯಕ ಫಾಪ್ ಡು ಪ್ಲೆಸಿ (55 ರನ್, 44 ಎಸೆತ, 3 ಬೌಂಡರಿ, 2 ಸಿಕ್ಸರ್) ಮತ್ತು ಮ್ಯಾಕ್ಸ್ವೆಲ್ (54 ರನ್, 33 ಎಸೆತ, 5 ಬೌಂಡರಿ, 3 ಸಿಕ್ಸರ್) ಜುಗಲ್ ಬಂದಿ ಪ್ರದರರ್ಶನ ತೋರುವ ಮೂಲಕ ಸ್ಪರ್ಧಾತ್ಮಕ ಮೊತ್ತ ದಾಖಲಿಸಲು ನೆರವಾದರು.
ಆರ್ಸಿಬಿ ನೀಡಿದ 171 ರನ್ ಗುರಿ ಬೆನ್ನತ್ತಿದ್ದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಆರ್ಸಿಬಿ ಬೌಲರ್ಗಳು ಕಾಡಿದರು. ಆರಂಬಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ ಮತ್ತು ಜಾಸ್ ಬಟ್ಲರ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ನಡೆದರು. ನಾಯಕ ಸ್ಯಾಮ್ಸನ್ 4 ರನ್ ಗಳಿಸಿ ಪೆವಿಲನ್ ಕಡೆ ಮುಖ ಮಾಡಿದರು. ಶಿಮ್ರೋನ್ ಹೆಟ್ಮೆಯರ್(35 ರನ್, 19 ಎಸೆತ, 1 ಬೌಂಡರಿ, 4 ಸಿಕ್ಸರ್) ರಾಜಸ್ಥಾನ ತಂಡಕ್ಕೆ ಅಲ್ಪ ಚೇತರಿಕೆ ನೀಡಿದರು, ಆದರೆ ಉಳಿದ ಆಟಗಾರರು ಪೆವಿಲಿಯನ್ ಪೆರೇಡ್ ನಡೆಸಿದರು. ಆರ್ಸಿಬಿ ಬೌಲರ್ಗಳ ಸಂಘಟಿತ ದಾಳಿಗೆ ನಲುಗಿದ ತಂಡವು 59ರನ್ಗಳಿಗೆ ಸರ್ವಪತನ ಕಂಡಿತು.
ಆರ್ಸಿಬಿ ಪರ ವೇಯ್ನ್ ಪಾರ್ನೆಲ್ (3 ಓವರ್, 10ರನ್, 3 ವಿಕೆಟ್) ಕಬಳಿಸಿದರು. ಮೈಕೆಲ್ ಬ್ರೇಸ್ವೆಲ್, ಮತ್ತು ಕರಣ್ ಶರ್ಮಾ ತಲಾ 2 ವಿಕೆಟ್ ಪಡೆದರು. ಮೊಹಮ್ಮದ್ ಸಿರಾಜ್ ಹಾಗೂ ಗ್ಲೇನ್ ಮ್ಯಾಕ್ಸ್ವೆಲ್ ತಲಾ ಒಂದು ವಿಕೆಟ್ ಪಡೆಯುವ ಮೂಲಕ ರಾಜಸ್ಥಾನ್ ತಂಡವನ್ನು 10.3 ಓವರಗಳಲ್ಲಿ 59 ರನ್ ಗಳಿಗೆ ಕಟ್ಟಿ ಹಾಕಲು ಶಕ್ತರಾದರು.
ಪಂದ್ಯಶ್ರೇಷ್ಠ: ವೇಯ್ನ್ ಪಾರ್ನೆಲ್.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…