ಜೋಧ್ಪುರ್: ಬೌಲರ್ಗಳ ಸಂಘಟಿತ ದಾಳಿಯ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ ರಾಯಲ್ಸ್ ವಿರುದ್ಧ 112ರನ್ಗಳ ಜಯ ದಾಖಲಿಸಿತು.
ಇಲ್ಲಿನ ಜೋಧ್ಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡವು 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 171ರನ್ ಗಳಿಸಿತ್ತು. ಆರ್ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 18(19) ಆಸಿಫ್ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸಿದರು. ನಂತರ ನಾಯಕ ಫಾಪ್ ಡು ಪ್ಲೆಸಿ (55 ರನ್, 44 ಎಸೆತ, 3 ಬೌಂಡರಿ, 2 ಸಿಕ್ಸರ್) ಮತ್ತು ಮ್ಯಾಕ್ಸ್ವೆಲ್ (54 ರನ್, 33 ಎಸೆತ, 5 ಬೌಂಡರಿ, 3 ಸಿಕ್ಸರ್) ಜುಗಲ್ ಬಂದಿ ಪ್ರದರರ್ಶನ ತೋರುವ ಮೂಲಕ ಸ್ಪರ್ಧಾತ್ಮಕ ಮೊತ್ತ ದಾಖಲಿಸಲು ನೆರವಾದರು.
ಆರ್ಸಿಬಿ ನೀಡಿದ 171 ರನ್ ಗುರಿ ಬೆನ್ನತ್ತಿದ್ದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಆರ್ಸಿಬಿ ಬೌಲರ್ಗಳು ಕಾಡಿದರು. ಆರಂಬಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ ಮತ್ತು ಜಾಸ್ ಬಟ್ಲರ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ನಡೆದರು. ನಾಯಕ ಸ್ಯಾಮ್ಸನ್ 4 ರನ್ ಗಳಿಸಿ ಪೆವಿಲನ್ ಕಡೆ ಮುಖ ಮಾಡಿದರು. ಶಿಮ್ರೋನ್ ಹೆಟ್ಮೆಯರ್(35 ರನ್, 19 ಎಸೆತ, 1 ಬೌಂಡರಿ, 4 ಸಿಕ್ಸರ್) ರಾಜಸ್ಥಾನ ತಂಡಕ್ಕೆ ಅಲ್ಪ ಚೇತರಿಕೆ ನೀಡಿದರು, ಆದರೆ ಉಳಿದ ಆಟಗಾರರು ಪೆವಿಲಿಯನ್ ಪೆರೇಡ್ ನಡೆಸಿದರು. ಆರ್ಸಿಬಿ ಬೌಲರ್ಗಳ ಸಂಘಟಿತ ದಾಳಿಗೆ ನಲುಗಿದ ತಂಡವು 59ರನ್ಗಳಿಗೆ ಸರ್ವಪತನ ಕಂಡಿತು.
ಆರ್ಸಿಬಿ ಪರ ವೇಯ್ನ್ ಪಾರ್ನೆಲ್ (3 ಓವರ್, 10ರನ್, 3 ವಿಕೆಟ್) ಕಬಳಿಸಿದರು. ಮೈಕೆಲ್ ಬ್ರೇಸ್ವೆಲ್, ಮತ್ತು ಕರಣ್ ಶರ್ಮಾ ತಲಾ 2 ವಿಕೆಟ್ ಪಡೆದರು. ಮೊಹಮ್ಮದ್ ಸಿರಾಜ್ ಹಾಗೂ ಗ್ಲೇನ್ ಮ್ಯಾಕ್ಸ್ವೆಲ್ ತಲಾ ಒಂದು ವಿಕೆಟ್ ಪಡೆಯುವ ಮೂಲಕ ರಾಜಸ್ಥಾನ್ ತಂಡವನ್ನು 10.3 ಓವರಗಳಲ್ಲಿ 59 ರನ್ ಗಳಿಗೆ ಕಟ್ಟಿ ಹಾಕಲು ಶಕ್ತರಾದರು.
ಪಂದ್ಯಶ್ರೇಷ್ಠ: ವೇಯ್ನ್ ಪಾರ್ನೆಲ್.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…