ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 2024ರ ಮಹಿಳಾ ಪ್ರೀಮಿಯರ್ ಲೀಗ್ ಪ್ರಶಸ್ತಿಯ ಫೈನಲ್ನಲ್ಲಿ 8 ಪಂದ್ಯಗಳಿಂದ ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಮುಡಿಗೇರಿಸಿಕೊಂಡಿದೆ.
ಸ್ಮೃತಿ ಮಂಧಾನ ನಾಯಕತ್ವದ ಆರ್ಸಿಬಿ ಮಹಿಳಾ ತಂಡವನ್ನು ಸಿಎಂ ಸಿದ್ಧರಾಮಯ್ಯ, ವಿರಾಟ್ ಕೊಹ್ಲಿ, ಕ್ರಿಸ್ ಗೇಲ್, ದಿನೇಶ್ ಕಾರ್ತಿಕ್ ಸೇರಿದಂತೆ ದಿಗ್ಗಜರು ಅಭಿನಂದನೆ ಸಲ್ಲಿಸಿದ್ದಾರೆ.
ಸ್ಮೃತಿ ಮಂಧಾನ ನಾಯಕತ್ವದ ಆರ್ಸಿಬಿ ಮಹಿಳಾ ತಂಡವನ್ನು ಸಿಎಂ ಸಿದ್ಧರಾಮಯ್ಯ, ವಿರಾಟ್ ಕೊಹ್ಲಿ, ಕ್ರಿಸ್ ಗೇಲ್, ದಿನೇಶ್ ಕಾರ್ತಿಕ್ ಸೇರಿದಂತೆ ದಿಗ್ಗಜರು ಅಭಿನಂದನೆ ಸಲ್ಲಿಸಿದ್ದಾರೆ.
ವಿಡಿಯೋ ಕಾಲ್ ಮಾಡಿದ ಕೊಹ್ಲಿ : ಆರ್ಸಿಬಿ ಮಹಿಳಾ ತಂಡ ಚೊಚ್ಚಲ ವುಮೆನ್ಸ್ ಪ್ರೀಮಿಯರ್ ಲೀಗ್ ಗೆಲ್ಲುತ್ತಿದ್ದಂತೆ ಆರ್ಸಿಬಿ ಪುರುಷರ ತಂಡದ ಹಿರಿಯ ಬ್ಯಾಟ್ಸ್ಮನ್ ವಿರಾಟ್ ವಿಡಿಯೋ ಕರೆ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ವಿರಾಟ್ ಕೊಹ್ಲಿ ಮಹಿಳಾ ತಂಡದ ಜೊತೆ ಮಾತನಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಚಹಲ್ : ಬೆಂಗಳೂರು ತಂಡದ ಮಾಜಿ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ “ಆನಂದ..ಪರಮಾನಂದ…ಪರಮಾನಂದ.. ನಮ್ಮ ಆರ್ಸಿಬಿ ತಂಡಕ್ಕೆ ಅಭಿನಂದನೆಗಳು,” ಎಂದುಟ್ವೀಟ್ ಮಾಡಿದ್ದಾರೆ.
ಸಿಎಂ ಸಿದ್ಧರಾಮಯ್ಯ : ಇಂದಿನ #TATAWPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ. ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಇಂದು ಈಡೇರಿದೆ. ಐಪಿಎಲ್ ನಲ್ಲಿಯೂ ನಮ್ಮ ಹುಡುಗರು ಕಪ್ ಗೆಲ್ಲಲಿ ಎಂಬ ಹಾರೈಕೆ ನನ್ನದು. ಈ ಸಲ ಕಪ್ ನಮ್ದೆ…..ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…