Categories: ಕ್ರೀಡೆ

ಆರ್‌ಸಿಬಿ ಮಹಿಳಾ ತಂಡಕ್ಕೆ ಜಯ : ಸಿದ್ದರಾಮಯ್ಯ ಸೇರಿ ದಿಗ್ಗಜರಿಂದ ಅಭಿನಂದನೆ !

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 2024ರ ಮಹಿಳಾ ಪ್ರೀಮಿಯರ್ ಲೀಗ್ ಪ್ರಶಸ್ತಿಯ ಫೈನಲ್‌ನಲ್ಲಿ 8 ಪಂದ್ಯಗಳಿಂದ ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಮುಡಿಗೇರಿಸಿಕೊಂಡಿದೆ.

ಸ್ಮೃತಿ ಮಂಧಾನ ನಾಯಕತ್ವದ ಆರ್‌ಸಿಬಿ ಮಹಿಳಾ ತಂಡವನ್ನು ಸಿಎಂ ಸಿದ್ಧರಾಮಯ್ಯ, ವಿರಾಟ್‌ ಕೊಹ್ಲಿ, ಕ್ರಿಸ್‌ ಗೇಲ್, ದಿನೇಶ್ ಕಾರ್ತಿಕ್ ಸೇರಿದಂತೆ ದಿಗ್ಗಜರು ಅಭಿನಂದನೆ ಸಲ್ಲಿಸಿದ್ದಾರೆ.

ಸ್ಮೃತಿ ಮಂಧಾನ ನಾಯಕತ್ವದ ಆರ್‌ಸಿಬಿ ಮಹಿಳಾ ತಂಡವನ್ನು ಸಿಎಂ ಸಿದ್ಧರಾಮಯ್ಯ, ವಿರಾಟ್‌ ಕೊಹ್ಲಿ, ಕ್ರಿಸ್‌ ಗೇಲ್, ದಿನೇಶ್ ಕಾರ್ತಿಕ್ ಸೇರಿದಂತೆ ದಿಗ್ಗಜರು ಅಭಿನಂದನೆ ಸಲ್ಲಿಸಿದ್ದಾರೆ.

ವಿಡಿಯೋ ಕಾಲ್ ಮಾಡಿದ ಕೊಹ್ಲಿ : ಆರ್‌ಸಿಬಿ ಮಹಿಳಾ ತಂಡ ಚೊಚ್ಚಲ ವುಮೆನ್ಸ್ ಪ್ರೀಮಿಯರ್‌ ಲೀಗ್‌ ಗೆಲ್ಲುತ್ತಿದ್ದಂತೆ ಆರ್‌ಸಿಬಿ ಪುರುಷರ ತಂಡದ ಹಿರಿಯ ಬ್ಯಾಟ್ಸ್‌ಮನ್‌ ವಿರಾಟ್‌ ವಿಡಿಯೋ ಕರೆ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ವಿರಾಟ್‌ ಕೊಹ್ಲಿ ಮಹಿಳಾ ತಂಡದ ಜೊತೆ ಮಾತನಾಡುತ್ತಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಚಹಲ್ : ಬೆಂಗಳೂರು ತಂಡದ ಮಾಜಿ ಸ್ಪಿನ್ನರ್ ಯುಜ್ವೇಂದ್ರ ಚಾಹಲ್‌ “ಆನಂದ..ಪರಮಾನಂದ…ಪರಮಾನಂದ.. ನಮ್ಮ ಆರ್ಸಿಬಿ ತಂಡಕ್ಕೆ ಅಭಿನಂದನೆಗಳು,” ಎಂದುಟ್ವೀಟ್ ಮಾಡಿದ್ದಾರೆ.

ಸಿಎಂ ಸಿದ್ಧರಾಮಯ್ಯ : ಇಂದಿನ #TATAWPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್‌ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ. ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಇಂದು ಈಡೇರಿದೆ. ಐಪಿಎಲ್ ನಲ್ಲಿಯೂ ನಮ್ಮ ಹುಡುಗರು ಕಪ್ ಗೆಲ್ಲಲಿ ಎಂಬ ಹಾರೈಕೆ ನನ್ನದು. ಈ ಸಲ ಕಪ್ ನಮ್ದೆ…..ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

2 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

2 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

2 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

2 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

2 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

2 hours ago