Categories: ಕ್ರೀಡೆ

ಆರ್‌ಸಿಬಿ ಮಹಿಳಾ ತಂಡಕ್ಕೆ ಜಯ : ಸಿದ್ದರಾಮಯ್ಯ ಸೇರಿ ದಿಗ್ಗಜರಿಂದ ಅಭಿನಂದನೆ !

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 2024ರ ಮಹಿಳಾ ಪ್ರೀಮಿಯರ್ ಲೀಗ್ ಪ್ರಶಸ್ತಿಯ ಫೈನಲ್‌ನಲ್ಲಿ 8 ಪಂದ್ಯಗಳಿಂದ ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಮುಡಿಗೇರಿಸಿಕೊಂಡಿದೆ.

ಸ್ಮೃತಿ ಮಂಧಾನ ನಾಯಕತ್ವದ ಆರ್‌ಸಿಬಿ ಮಹಿಳಾ ತಂಡವನ್ನು ಸಿಎಂ ಸಿದ್ಧರಾಮಯ್ಯ, ವಿರಾಟ್‌ ಕೊಹ್ಲಿ, ಕ್ರಿಸ್‌ ಗೇಲ್, ದಿನೇಶ್ ಕಾರ್ತಿಕ್ ಸೇರಿದಂತೆ ದಿಗ್ಗಜರು ಅಭಿನಂದನೆ ಸಲ್ಲಿಸಿದ್ದಾರೆ.

ಸ್ಮೃತಿ ಮಂಧಾನ ನಾಯಕತ್ವದ ಆರ್‌ಸಿಬಿ ಮಹಿಳಾ ತಂಡವನ್ನು ಸಿಎಂ ಸಿದ್ಧರಾಮಯ್ಯ, ವಿರಾಟ್‌ ಕೊಹ್ಲಿ, ಕ್ರಿಸ್‌ ಗೇಲ್, ದಿನೇಶ್ ಕಾರ್ತಿಕ್ ಸೇರಿದಂತೆ ದಿಗ್ಗಜರು ಅಭಿನಂದನೆ ಸಲ್ಲಿಸಿದ್ದಾರೆ.

ವಿಡಿಯೋ ಕಾಲ್ ಮಾಡಿದ ಕೊಹ್ಲಿ : ಆರ್‌ಸಿಬಿ ಮಹಿಳಾ ತಂಡ ಚೊಚ್ಚಲ ವುಮೆನ್ಸ್ ಪ್ರೀಮಿಯರ್‌ ಲೀಗ್‌ ಗೆಲ್ಲುತ್ತಿದ್ದಂತೆ ಆರ್‌ಸಿಬಿ ಪುರುಷರ ತಂಡದ ಹಿರಿಯ ಬ್ಯಾಟ್ಸ್‌ಮನ್‌ ವಿರಾಟ್‌ ವಿಡಿಯೋ ಕರೆ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ವಿರಾಟ್‌ ಕೊಹ್ಲಿ ಮಹಿಳಾ ತಂಡದ ಜೊತೆ ಮಾತನಾಡುತ್ತಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಚಹಲ್ : ಬೆಂಗಳೂರು ತಂಡದ ಮಾಜಿ ಸ್ಪಿನ್ನರ್ ಯುಜ್ವೇಂದ್ರ ಚಾಹಲ್‌ “ಆನಂದ..ಪರಮಾನಂದ…ಪರಮಾನಂದ.. ನಮ್ಮ ಆರ್ಸಿಬಿ ತಂಡಕ್ಕೆ ಅಭಿನಂದನೆಗಳು,” ಎಂದುಟ್ವೀಟ್ ಮಾಡಿದ್ದಾರೆ.

ಸಿಎಂ ಸಿದ್ಧರಾಮಯ್ಯ : ಇಂದಿನ #TATAWPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್‌ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ. ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಇಂದು ಈಡೇರಿದೆ. ಐಪಿಎಲ್ ನಲ್ಲಿಯೂ ನಮ್ಮ ಹುಡುಗರು ಕಪ್ ಗೆಲ್ಲಲಿ ಎಂಬ ಹಾರೈಕೆ ನನ್ನದು. ಈ ಸಲ ಕಪ್ ನಮ್ದೆ…..ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ

andolanait

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

3 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

7 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

7 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

7 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

7 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

8 hours ago