ಕ್ರೀಡೆ

ವಿಜಯ್‌ ಹಜಾರೆ ಟ್ರೋಫಿ: ಸೆಮಿಫೈನಲ್‌ ತಲುಪಿದ ಕರ್ನಾಟಕ

ವಡೋದರಾ: ಬರೋಡಾ ವಿರುದ್ಧದ ಕ್ವಾಟರ್‌ ಫೈನಲ್‌ ಪಂದ್ಯದಲ್ಲಿ 5 ರನ್‌ಗಳಿಂದ ಗೆಲುವು ಸಾಧಿಸುವ ಮೂಲಕ ಕರ್ನಾಟಕ ತಂಡ ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿ ಸೆಮಿ ಫೈನಲ್‌ ಪ್ರವೇಶಿಸಿದೆ.

ಇಲ್ಲಿನ ಮೋತಿ ಬಾಗ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರು ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಕರ್ನಾಟಕ ತಂಡ, ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 281 ರನ್‌ ಕಲೆ ಹಾಕಿತು. ಬ್ಯಾಟರ್‌ಗಳ ವೈಫಲ್ಯದ ನಡುವೆಯು ಮಿಂಚಿದ ಆರಂಭಿಕ ಬ್ಯಾಟರ್‌ ದೇವದತ್ತ ಪಡಿಕ್ಕಲ್‌ ಅಮೋಘ ಶತಕ 102(99) ಹಾಗೂ ಅನೀಶ್‌ ಕೆವಿ 52(64) ಅರ್ಧಶತಕ ಸಿಡಿಸುವ ಮೂಲಕ ಸ್ಪರ್ಧಾತ್ಮಕ ಮೊತ್ತ ನೀಡಲು ನೆರವಾದರು.

ಈ ಗುರಿ ಬೆನ್ನತ್ತಿದ್ದ ಬರೋಡಾ ತಂಡ 49.5 ಓವರ್‌ಗಳಲ್ಲಿ 276 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ವಿರೋಚಿತ ಸೋಲೊಪ್ಪಿಕೊಂಡು ಟೂರ್ನಿಯಿಂದ ಹೊರ ನಡೆಯಿತು.

ಬರೋಡಾದ ಪರ ಆರಂಭಿಕ ಬ್ಯಾಟರ್ ಶಾಶ್ವತ್‌ ರಾವತ್‌‌ ಶತಕ 104(126) ಬಾರಿಸಿದರು ಗೆಲುವಿನ ಕಡೆ ಕೊಂಡೊಯ್ಯುವಲ್ಲಿ ವಿಫಲವಾದರು.

 

 

ಆಂದೋಲನ ಡೆಸ್ಕ್

Recent Posts

ಮಾದಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ…

6 mins ago

ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…

45 mins ago

ಸಾಲೂರು ಮಠಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…

55 mins ago

ನಂಜನಗೂಡು ತಾಯಿ-ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ದಿಢೀರ್ ಭೇಟಿ, ಪರಿಶೀಲನೆ

ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…

1 hour ago

ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್:‌ ಗಣಿಗ ರವಿಕುಮಾರ್‌ ವ್ಯಂಗ್ಯ

ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್.‌ ನಮಗೆ ಹೈಕಮಾಂಡ್‌ ನೋಟಿಸ್‌ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟಿಸ್‌ ಕೊಡಲು…

1 hour ago

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ: ಆರೋಗ್ಯ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಚಳಿಯ ಅಬ್ಬರ, ಶೀತ ಸಂಪೂರ್ಣ ಕಡಿಮೆಯಾಗಿದ್ದು, ಒಣ ಹವೆಯ ಜೊತೆಗೆ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ. ಶಿವರಾತ್ರಿ…

1 hour ago