ಕ್ರೀಡೆ

ವಿಜಯ್‌ ಹಜಾರೆ ಟ್ರೋಫಿ: ಸೆಮಿಫೈನಲ್‌ ತಲುಪಿದ ಕರ್ನಾಟಕ

ವಡೋದರಾ: ಬರೋಡಾ ವಿರುದ್ಧದ ಕ್ವಾಟರ್‌ ಫೈನಲ್‌ ಪಂದ್ಯದಲ್ಲಿ 5 ರನ್‌ಗಳಿಂದ ಗೆಲುವು ಸಾಧಿಸುವ ಮೂಲಕ ಕರ್ನಾಟಕ ತಂಡ ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿ ಸೆಮಿ ಫೈನಲ್‌ ಪ್ರವೇಶಿಸಿದೆ.

ಇಲ್ಲಿನ ಮೋತಿ ಬಾಗ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರು ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಕರ್ನಾಟಕ ತಂಡ, ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 281 ರನ್‌ ಕಲೆ ಹಾಕಿತು. ಬ್ಯಾಟರ್‌ಗಳ ವೈಫಲ್ಯದ ನಡುವೆಯು ಮಿಂಚಿದ ಆರಂಭಿಕ ಬ್ಯಾಟರ್‌ ದೇವದತ್ತ ಪಡಿಕ್ಕಲ್‌ ಅಮೋಘ ಶತಕ 102(99) ಹಾಗೂ ಅನೀಶ್‌ ಕೆವಿ 52(64) ಅರ್ಧಶತಕ ಸಿಡಿಸುವ ಮೂಲಕ ಸ್ಪರ್ಧಾತ್ಮಕ ಮೊತ್ತ ನೀಡಲು ನೆರವಾದರು.

ಈ ಗುರಿ ಬೆನ್ನತ್ತಿದ್ದ ಬರೋಡಾ ತಂಡ 49.5 ಓವರ್‌ಗಳಲ್ಲಿ 276 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ವಿರೋಚಿತ ಸೋಲೊಪ್ಪಿಕೊಂಡು ಟೂರ್ನಿಯಿಂದ ಹೊರ ನಡೆಯಿತು.

ಬರೋಡಾದ ಪರ ಆರಂಭಿಕ ಬ್ಯಾಟರ್ ಶಾಶ್ವತ್‌ ರಾವತ್‌‌ ಶತಕ 104(126) ಬಾರಿಸಿದರು ಗೆಲುವಿನ ಕಡೆ ಕೊಂಡೊಯ್ಯುವಲ್ಲಿ ವಿಫಲವಾದರು.

 

 

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

9 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

1 hour ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

1 hour ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

3 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

7 hours ago