ರಾಜ್ಕೋಟ್ : ನಾಯಕ ದೀಪಕ್ ಹೂಡಾ ಅವರ ಅಮೋಘ ಶತಕದ ಬಲದಿಂದ ರಾಜಸ್ಥಾನ ತಂಡ ಅದ್ದೂರಿ ಜಯ ದಾಖಲಿಸಿದೆ.
ಇಲ್ಲನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ವಿಜಯ್ ಹಜಾರೆ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡದ ವಿರುದ್ಧ 6 ವಿಕೆಟ್ಗಳ ಜಯಭೇರಿ ಬಾರಿಸಿದ ರಾಜಸ್ಥಾನ್ ತಂಡ ಫೈನಲ್ಗೆ ಲಗ್ಗೆಯಿಟ್ಟಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಕರ್ನಾಟಕ ತಂಡ ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಆರ್. ಸಮರ್ಥ್ (8) ಹಾಗೂ ಮಯಾಂಕ್ ಅಗರ್ವಾಲ್ (13) ಬೇಗನೆ ವಿಕೆಟ್ ಒಪ್ಪಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಕಿನ್ ಜೋಸ್ 21 ರನ್ಗಳಿಸಲಷ್ಟೇ ಶಕ್ತರಾದರು. ಕೃಷ್ಣನ್ ಶ್ರೀಜಿತ್ 45 ಎಸೆತಗಳಲ್ಲಿ 37 ರನ್ ಬಾರಿಸಿ ಮಧ್ಯಮ ಕ್ರಮಾಂಕದಲ್ಲಿ ಆಸರೆಯಾಗಿ ನಿಂತರು. ಇನ್ನು ಮನೀಶ್ ಪಾಂಡೆ 28 ರನ್ಗಳ ಕೊಡುಗೆ ನೀಡಿದರು.
ತಂಡಕ್ಕೆ ಆಸರೆಯಾಗಿ ಬಿರುಸಿನ ಬ್ಯಾಟಿಂಗ್ ಮಾಡಿದ ಅಭಿನವ್ ಮನೋಹರ್ 80 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 10 ಫೋರ್ಗಳೊಂದಿಗೆ 91 ರನ್ ಬಾರಿಸಿದರು. ಇನ್ನು ಮನೋಜ್ ಭಾಂಡಗೆ 39 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ 63 ರನ್ ಚಚ್ಚಿದರು.
ಕರ್ನಾಟಕ ತಂಡ ನಿಗದಿತ 50 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 282 ರನ್ ಕಲೆಹಾಕಿತು. ರಾಜಸ್ಥಾನ್ ಪರ ಅನಿಕೇತ್ ಚೌಧರಿ ಮತ್ತು ಅಜಯ್ ಸಿಂಗ್ ತಲಾ 2 ವಿಕೆಟ್ ಪಡೆದರು.
ಈ ಬೃಹತ್ ಮೊತ್ತ ಚೇಸ್ ಮಾಡಲು ಹೊರಟ ರಾಜಸ್ಥಾನ್ಗೆ ಆರಂಭಿಕ ಆಘಾತ ಎದುರಾಯಿತು. ಆರಂಭೀಕ ಆಟಗಾರರಾದ ಅಭಿಜಿತ್ ತೋಮರ್ ಮತ್ತು ರಾಮ್ ಮೊಹನ್ ಚೌಹಾಣ್ ಖಾತೆ ತೆರೆಯದೆ ಹಿಂದುರಿಗಿದರು. ಲೋಮ್ರೋರ್ (14) ರನ್ಗಳಿಸಿ ನಿರ್ಗಮಿಸಿದರು.
ನಂತರ ಜೊತೆಯಾದ ನಾಯಕ ದೀಪಕ್ ಹೂಡಾ ಮತ್ತು ಕರಣ್ ಲಂಬಾ ತಂಡದ ದಿಕ್ಕನ್ನೇ ಬದಲಿಸಿದರು. ಕರ್ನಾಟಕದ ದಿಟ್ಟ ಬೌಲಿಂಗ್ ಎದುರಿಸಿದ ನಾಯಕ ಹೂಡಾ ತಾವೆದುರಿಸಿದ 128 ಎಸೆತಗಳಲ್ಲಿ 19 ಬೌಂಡರಿ ಮತ್ತು 5 ಸಿಕ್ಸರ್ ಸಹಿತ ಬರೋಬ್ಬರಿ 180ರನ್ ಕಲೆಹಾಕಿದರು. ಇತ್ತ ನಾಯಕನಿಗೆ ಬೆಂಬಲ ನೀಡಿದ ಕರಣ್ ಲಂಬಾ 73ರನ್ ಗಳಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು. ಅಂತಿಮವಾಗಿ ರಾಜಸ್ಥಾನ 43.4 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 283 ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.
ಪಂದ್ಯ ಶ್ರೇಷ್ಠ : ದೀಪಕ್ ಹೂಡಾ.
* ಡಿಸೆಂಬರ್ 16 ರಂದು ಹರ್ಯಾಣ ವಿರುದ್ದ ರಾಜಸ್ಥಾನ ಫೈನಲ್ ಪಂದ್ಯ ಆಡಲಿದೆ.
ಈ ಪಂದ್ಯವು ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ಮದ್ಯಾಹ್ನ 1.30 ಕ್ಕೆ ನಡೆಯಲಿದೆ.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…